MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • Covid In Bengaluru: 'ಲಕ್ಷಣರಹಿತ ಸೋಂಕಿತರಿಗೆ ಮನೆಯಲ್ಲೇ ಐಸೋಲೇಷನ್‌'

Covid In Bengaluru: 'ಲಕ್ಷಣರಹಿತ ಸೋಂಕಿತರಿಗೆ ಮನೆಯಲ್ಲೇ ಐಸೋಲೇಷನ್‌'

ಬೆಂಗಳೂರು(ಜ.12): ಭೌತಿಕ ಟ್ರಯಾಜ್‌ ಕೇಂದ್ರಗಳಿಗೆ ಬರುವವರಿಗೆ ಸರಿಯಾಗಿ ಭೌತಿಕ ಚಿಕಿತ್ಸೆ ನಡೆಸಿ ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇರುವವರಿಗೆ ಮಾತ್ರ ಹಾಸಿಗೆ ಮೀಸಲಿರಿಸಿ ದಾಖಲಿಸುವ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ(BBMP) ಮುಖ್ಯ ಆಯುಕ್ತ ಗೌರವ್‌ ಗುಪ್ತಾ(Gaurav Gupta) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

1 Min read
Kannadaprabha News | Asianet News
Published : Jan 12 2022, 06:00 AM IST| Updated : Jan 12 2022, 06:20 AM IST
Share this Photo Gallery
  • FB
  • TW
  • Linkdin
  • Whatsapp
14

ಮಂಗಳವಾರ ನಗರದ ವಸಂತ ನಗರ ವಾರ್ಡ್‌ ವ್ಯಾಪ್ತಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಫಿಜಿಕಲ್‌ ಟ್ರಯಾಜ್‌ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೌರವ್‌ ಗುಪ್ತಾ 

24

ಸೋಂಕಿತರಾಗಿದ್ದು ಯಾವುದೇ ರೋಗ ಲಕ್ಷಣಗಳು ಇಲ್ಲದವರಿಗೆ ಮನೆಯಲ್ಲೇ ಐಸೋಲೇಟ್‌ ಆಗುವಂತೆ ತಿಳಿಸಿ ಐಸೋಲೇಷನ್‌ ಕಿಟ್‌ ಕೊಡಿ. ಮನೆಯಲ್ಲಿ ಐಸೋಲೇಟ್‌ ಆಗಲು ಸ್ಥಳಾವಕಾಶ ಇಲ್ಲದಿದ್ದರೆ ಕೋವಿಡ್‌ ಆರೈಕೆ ಕೇಂದ್ರಗಳಿಗೆ(Covid Care Center) ಕಳುಹಿಸಿಕೊಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಪರೀಕ್ಷೆ(Covid Test) ಮಾಡುವ, ಸಂಚಾರಿ ಕೋವಿಡ್‌ ಪರೀಕ್ಷಾ ತಂಡ, ಲಸಿಕೆ(Vaccine) ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಿದರು. 

34

ಈ ಸಂದರ್ಭದಲ್ಲಿ ಸಿಬ್ಬಂದಿಯೊಬ್ಬರು, ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ 118 ಕೋವಿಡ್‌ ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಎಲ್ಲರಿಗೂ ಟೆಲಿ ಟ್ರಯಾಜಿಂಗ್‌ ಮಾಡಲಾಗಿದೆ. ಅವರಲ್ಲಿ 10 ಕೋವಿಡ್‌ ಮಂದಿ ಸೋಂಕಿತರು ಮುಂಚಿತವಾಗಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು 43 ಕೋವಿಡ್‌(Covid19) ಸೋಂಕಿತರಿಗೆ ಭೌತಿಕ ಟ್ರಯಾಜಿಂಗ್‌ ಮಾಡಲಾಗಿದ್ದು, ಆರೋಗ್ಯ ಪರಿಸ್ಥಿತಿ ನೋಡಿಕೊಂಡು ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

44

ಈ ಸಂದರ್ಭದಲ್ಲಿ ವಲಯ ಜಂಟಿ ಆಯುಕ್ತ ಶಿಲ್ಪಾ, ವಲಯ ಆರೋಗ್ಯಾಧಿಕಾರಿ ಡಾ. ಸಿದ್ದಪ್ಪಾಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಿಬಿಎಂಪಿ
ಬೆಂಗಳೂರು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved