MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಜೈಲಲ್ಲೂ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ಗೆ ಅಭಿಮಾನಿ ಕಾಟ, ವಾರ್ಡನ್‌ ಎತ್ತಂಗಡಿ ಮಾಡಿದ ಅಲೋಕ್‌ ಕುಮಾರ್‌!

ಜೈಲಲ್ಲೂ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ಗೆ ಅಭಿಮಾನಿ ಕಾಟ, ವಾರ್ಡನ್‌ ಎತ್ತಂಗಡಿ ಮಾಡಿದ ಅಲೋಕ್‌ ಕುಮಾರ್‌!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಸ್ನೇಹಿತನಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಜೈಲು ವಾರ್ಡನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಕುಮಾರ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಕರ್ತವ್ಯಲೋಪ ಬೆಳಕಿಗೆ ಬಂದಿದೆ.

1 Min read
Author : Santosh Naik, Kannadaprabha News
Published : Jan 29 2026, 08:01 AM IST
Share this Photo Gallery
  • FB
  • TW
  • Linkdin
  • Whatsapp
19
Image Credit : Asianet News

ತಮ್ಮ ಸ್ನೇಹಿತ ಪೊಲೀಸ್ ಕಾನ್‌ಸ್ಟೇಬಲ್‌ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಿಯಮ ಉಲ್ಲಂಘಿಸಿ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ತಪ್ಪಿಗೆ ಕಾರಾಗೃಹದ ವಾರ್ಡನ್‌ವೊಬ್ಬರು ವರ್ಗಾವಣೆಗೊಂಡಿದ್ದಾರೆ.

29
Image Credit : X

ವಾರ್ಡನ್ ಪ್ರಭುಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್‌ರನ್ನು ಭೇಟಿ ಮಾಡಿಸಿದ್ದರು.

Related Articles

Related image1
ಜೈಲು ಡಿಜಿಪಿ ಅಲೋಕ್‌ ಕುಮಾರ್‌ ಆದೇಶ ಕೇಳಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಕೊತ ಕೊತ!
Related image2
ಬಿಗ್‌ಬಾಸ್‌ ಮನೆಯಿಂದ ಹೊರಬಂದು ದರ್ಶನ್‌ ಸರಳತೆ ಬಗ್ಗೆ ಮಾತನಾಡಿದ ಗಿಲ್ಲಿ ನಟ!
39
Image Credit : darshan thoogudeepa instagram

ಈ ಭೇಟಿ ವಿಡಿಯೋವನ್ನು ವೀಕ್ಷಿಸಿದ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು, ಕರ್ತವ್ಯಲೋಪದ ಆರೋಪದ ಮೇರೆಗೆ ಪ್ರಭು ಚವ್ಹಾಣ್ ಅವರನ್ನು ಚಾಮರಾಜನಗರ ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

49
Image Credit : Instagram

ಹಲವು ದಿನಗಳಿಂದ ಯಲಹಂಕ ಠಾಣೆ ಕಾನ್‌ಸ್ಟೇಬಲ್ ಗಣೇಶ್ ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ವಾರ್ಡನ್‌ ಪ್ರಭು ಸ್ನೇಹಿತರು. ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಜೈಲಿಗೆ ಬಿಡಲು ಗಣೇಶ್ ಬಂದಿದ್ದರು.

59
Image Credit : Instagram

ಆಗ ತಮ್ಮ ಸ್ನೇಹಿತನಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿಸುವಂತೆ ಕಾನ್‌ಸ್ಟೇಬಲ್ ಕೋರಿದ್ದಾರೆ.

69
Image Credit : Asianet News

ಈ ಮನವಿಗೆ ಒಪ್ಪಿದ ಪ್ರಭು, ನಿಯಮ ಉಲ್ಲಂಘಿಸಿ ದರ್ಶನ್ ಅವರ ಸೆಲ್‌ಗೆ ಕರೆದೊಯ್ದು ಭೇಟಿ ಮಾಡಿಸಿದ್ದಾರೆ. ಕೆಲ ನಿಮಿಷ ದರ್ಶನ್ ಕುಶಲೋಪರಿ ವಿಚಾರಿಸಿ ಗಣೇಶ್ ಮರಳಿದ್ದಾರೆ.

79
Image Credit : Asianet News

ತಮ್ಮ ಕಚೇರಿಯಲ್ಲಿ ಅಳವಡಿಸಿರುವ ಸಿಸಿಟಿವಿಗಳಿಂದ ದರ್ಶನ್ ಸೆಲ್‌ಗೆ ಖಾಕಿ ಸಮವಸ್ತ್ರದಲ್ಲಿದ್ದ ಸಿಬ್ಬಂದಿ ಭೇಟಿಯನ್ನು ಡಿಜಿಪಿ ಅಲೋಕ್ ಕುಮಾರ್ ವೀಕ್ಷಿಸಿದ್ದರು. ಆಗ ಆ ಸಿಬ್ಬಂದಿ ಬಗ್ಗೆ ಅನುಮಾನ ಮೂಡಿದೆ.

89
Image Credit : Instagram

ಬಳಿಕ ಗಣರಾಜ್ಯೋತ್ಸವ ನಿಮಿತ್ತ ಜೈಲಿಗೆ ತೆರಳಿದ್ದಾಗ ದರ್ಶನ್‌ಗೆ ತಮ್ಮ ಭೇಟಿಗೆ ಬಂದಿದ್ದವರ ಬಗ್ಗೆ ಡಿಜಿಪಿ ವಿಚಾರಿಸಿದ್ದಾರೆ. ಆಗ ತಮಗೆ ಪರಿಚಯದವರಲ್ಲ. ಬಂದು ಹಾಯ್ ಹೇಳಿದರು. ನಾನು ಮಾತನಾಡಿಸಿದೆ ಅಷ್ಟೇ ಎಂದಿದ್ದಾರೆ. ಆಗ ವಾರ್ಡನ್‌ ಪ್ರಭುರನ್ನು ಕರೆಸಿ ವಿಚಾರಿಸಿದಾಗ ಸತ್ಯ ಗೊತ್ತಾಗಿದೆ.

99
Image Credit : Asianet News and Instagram

ಡಿಜಿಪಿ ಅಲೋಕ್ ಕುಮಾರ್ ಅವರ ಕಚೇರಿಯಲ್ಲೇ ಮಿನಿ ಕಮಾಂಡರ್ ಸೆಂಟರ್ ಸ್ಥಾಪಿಸಲಾಗಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಂಪರ್ಕಿಸಿ ಕಲ್ಪಿಸಲಾಗಿದೆ. ಈಗ ತಮ್ಮ ಕಚೇರಿಯಲ್ಲೇ ಕುಳಿತು ಕಾರಾಗೃಹದ ಚಟುವಟಿಕೆಗಳ ಮೇಲೆ ಅವರು ನಿಗಾವಹಿಸಿದ್ದಾರೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ರೇಣುಕಾಸ್ವಾಮಿ ಪ್ರಕರಣ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ
ದರ್ಶನ್ ತೂಗುದೀಪ
ಕೊಲೆ
ಕ್ರೈಮ್ ನ್ಯೂಸ್
ಸುದ್ದಿ
ಪೊಲೀಸ್

Latest Videos
Recommended Stories
Recommended image1
ಫಾರಿನ್‌ ಟೂರ್‌ ಡ್ರಗ್ಸ್ ಮಾಫಿಯಾ ವಿರುದ್ಧ ಭರ್ಜರಿ ಬೇಟೆ
Recommended image2
ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ 'ಡ್ರಿಂಕ್ ಆಂಡ್ ಡ್ರೈವ್' ಸರಣಿ ಅಪಘಾತ; ನಾಲ್ಕು ಕಾರುಗಳು ಚಿಂದಿ!
Recommended image3
ಸಾರಿಗೆ ನೌಕರರ ಧ್ವನಿ ಅನಂತ ಸುಬ್ಬರಾವ್ ವಿಧಿವಶ: ಪತಿ ನಿಧನ ಹಿನ್ನೆಲೆ ಪತ್ನಿ ಆರೋಗ್ಯದಲ್ಲಿ ಏರುಪೇರು
Related Stories
Recommended image1
ಜೈಲು ಡಿಜಿಪಿ ಅಲೋಕ್‌ ಕುಮಾರ್‌ ಆದೇಶ ಕೇಳಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಕೊತ ಕೊತ!
Recommended image2
ಬಿಗ್‌ಬಾಸ್‌ ಮನೆಯಿಂದ ಹೊರಬಂದು ದರ್ಶನ್‌ ಸರಳತೆ ಬಗ್ಗೆ ಮಾತನಾಡಿದ ಗಿಲ್ಲಿ ನಟ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved