MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಎಚ್ಚರ, ಎಚ್ಚರ ಬೆಂಗಳೂರಿಗರೇ ಎಚ್ಚರ! ಮುಂದಿನ 5 ದಿನ ರಣಮಳೆಯ ಮುನ್ಸೂಚನೆ

ಎಚ್ಚರ, ಎಚ್ಚರ ಬೆಂಗಳೂರಿಗರೇ ಎಚ್ಚರ! ಮುಂದಿನ 5 ದಿನ ರಣಮಳೆಯ ಮುನ್ಸೂಚನೆ

ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಚಳ್ಳಕೆರೆ ಸಂತೆಮೈದಾನದಲ್ಲಿ ಮಳೆನೀರು ಮತ್ತು ಕೆಸರು ತುಂಬಿ ಸಮಸ್ಯೆ ಸೃಷ್ಟಿಯಾಗಿದೆ.

1 Min read
Mahmad Rafik
Published : Oct 14 2025, 09:37 AM IST
Share this Photo Gallery
  • FB
  • TW
  • Linkdin
  • Whatsapp
15
 5 ದಿನ ಮಳೆ
Image Credit : X/APSDMA

5 ದಿನ ಮಳೆ

ಕಳೆದ ಎರಡು ದಿನಗಳಿಂದ ಬಿಡುವು ಪಡೆದುಕೊಂಡಿದ್ದ ವರುಣ ದೇವ ಮತ್ತೆ ಅಬ್ಬರಿಸಲು ಸಿದ್ಧವಾಗಿದ್ದಾನೆ. ಇಂದಿನಿಂದ 5 ದಿನ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಧಿಕ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

25
ನೈಋತ್ಯ ಮಾರುತ ಚುರುಕು
Image Credit : Asianet News

ನೈಋತ್ಯ ಮಾರುತ ಚುರುಕು

ಬಂಗಾಳ ಉಪಮಹಾಸಾಗರದಲ್ಲಿ ನೈಋತ್ಯ ಮಾರುತ ಚುರುಕು ಹಿನ್ನೆಲೆ ಗುಡುಗು ಸಹಿತ ಭಾರೀ ಮಳೆಯ ಸಾಧ್ಯತೆಗಳಿವೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಗಳ ಬಗ್ಗೆ ಹವಾಮಾನ‌ ಇಲಾಖೆ ಮಾಹಿತಿ ನೀಡಿದೆ.

Related Articles

Related image1
ಡಾರ್ಜೀಲಿಂಗ್ ಪ್ರವಾಹಕ್ಕೆ 23 ಮಂದಿ ಸಾವು, ಕೇವಲ 12 ಗಂಟೆ ಅವಧಿಯಲ್ಲಿ 30 ಸೆಂ.ಮೀ ಮಳೆ!
Related image2
ಸಮುದ್ರ ಅಲೆಗಳ ಅಬ್ಬರಕ್ಕೆ ಅಂಕೋಲಾ ಬಂದರಿನಲ್ಲಿ ದೋಣಿ ಮುಳುಗಡೆ; ಭಾರಿ ಮಳೆಗೆ ಜಮಖಂಡಿಯಲ್ಲಿ ಪ್ರವಾಹ!
35
ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆ
Image Credit : Asianet News

ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆ

ಕುಶಾಲನಗರ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ದಿನನಿತ್ಯ ಏರಿಕೆ ಆಗುತ್ತಿರುವ ದೃಶ್ಯ ಕಂಡು ಬಂದಿದೆ.ಜಿಲ್ಲೆಯ ಗಡಿ ಭಾಗ ಕುಶಾಲನಗರ ಕೊಪ್ಪ ಕಾವೇರಿ ನದಿ ಸೇತುವೆ ಬಳಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿರುವ ದೃಶ್ಯ ಗೋಚರಿಸಿದೆ.

45
ಕಾವೇರಿ ನದಿ
Image Credit : LinkedIn@Pali Tripathi

ಕಾವೇರಿ ನದಿ

ಕಳೆದ ಮೇ ತಿಂಗಳ ಅಂತ್ಯದಿಂದ ಆರಂಭಗೊಂಡ ಮಳೆ ನಿರಂತರ ಏಳು ತಿಂಗಳ ಕಾಲ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಸುರಿಯುತ್ತಿದ್ದು, ನಾಲ್ಕು ಬಾರಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿದರು ಯಾವುದೇ ಸಮಸ್ಯೆ ಸೃಷ್ಟಿಯಾಗಿಲ್ಲ. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಈ ಸಾಲಿನಲ್ಲಿ ಮೇ ತಿಂಗಳಲ್ಲಿ 302 ಮಿಲಿಮೀಟರ್ ಪ್ರಮಾಣದ ಮಳೆ ಸುರಿದಿದ್ದು ನಂತರ ಪ್ರತಿ ತಿಂಗಳು ಸರಾಸರಿ 150 ಮಿಲಿ ಮೀಟರ್ ಪ್ರಮಾಣದ ಮಳೆ ಬಿದ್ದ ದಾಖಲೆ ಕಂಡು ಬಂದಿದೆ.

ಇದನ್ನೂ ಓದಿ: 'ಡಿಪಿಆರ್‌ನಲ್ಲಿ ಭಾರೀ ಲೋಪ..' ಬೆಂಗಳೂರು ಸುರಂಗ ರಸ್ತೆಗೆ ಸರ್ಕಾರ ನೇಮಿಸಿದ್ದ ತಜ್ಞರ ಸಮಿತಿಯಿಂದಲೇ ವಿರೋಧ!

55
ಚಳ್ಳಕೆರೆ ನಗರದ ಸಂತೆಮೈದಾನದಲ್ಲಿ ತುಂಬಿರುವ ಕೆಸರು
Image Credit : Asianet News

ಚಳ್ಳಕೆರೆ ನಗರದ ಸಂತೆಮೈದಾನದಲ್ಲಿ ತುಂಬಿರುವ ಕೆಸರು

ಕಳೆದ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಸುರಿದ ಮಳೆಗೆ ನಗರದ ನೆಹರೂ ವೃತ್ತದ ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ಹಿಂಭಾಗದ ಇಡೀ ಸಂತೆ ಮೈದಾನ ಮಳೆನೀರು, ಕೆಸರಿನಿಂದ ಆವೃತ್ತವಾಗಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತೊಂದರೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನದಿಂದ ಪ್ರಿಯಾಂಕ್‌ ಖರ್ಗೆ ವಜಾಗೊಳಿಸಿ: ಎನ್‌.ರವಿಕುಮಾರ್‌ ಒತ್ತಾಯ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಮಳೆ
ಹವಾಮಾನ ಮುನ್ಸೂಚನೆ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಪ್ರಾಜೆಕ್ಟ್ ಖುಷಿ 3 ತಿಂಗಳ ಸ್ವಾಸ್ಥ್ಯ ಅಭಿಯಾನದಲ್ಲಿ ಹಲವು ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸ್!
Recommended image2
ರೌಡಿ ಚಟುವಟಿಕೆ ಹಿನ್ನಲೆಯುಳ್ಳ ವ್ಯಕ್ತಿ ಜೊತೆಗೆ ಬರ್ತ್ ಡೇ ಪಾರ್ಟಿ: ಎಸ್‌ಐ ನಾಗರಾಜ್‌ಗೆ ಸಸ್ಪೆಂಡ್ ನೋಟೀಸ್
Recommended image3
ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
Related Stories
Recommended image1
ಡಾರ್ಜೀಲಿಂಗ್ ಪ್ರವಾಹಕ್ಕೆ 23 ಮಂದಿ ಸಾವು, ಕೇವಲ 12 ಗಂಟೆ ಅವಧಿಯಲ್ಲಿ 30 ಸೆಂ.ಮೀ ಮಳೆ!
Recommended image2
ಸಮುದ್ರ ಅಲೆಗಳ ಅಬ್ಬರಕ್ಕೆ ಅಂಕೋಲಾ ಬಂದರಿನಲ್ಲಿ ದೋಣಿ ಮುಳುಗಡೆ; ಭಾರಿ ಮಳೆಗೆ ಜಮಖಂಡಿಯಲ್ಲಿ ಪ್ರವಾಹ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved