MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಫಲಪುಷ್ಪ ಪ್ರದರ್ಶನ ಟಿಕೆಟ್‌ನಿಂದಲೇ ಈ ವರ್ಷ 2.50 ಕೋಟಿ ಆದಾಯ?

ಫಲಪುಷ್ಪ ಪ್ರದರ್ಶನ ಟಿಕೆಟ್‌ನಿಂದಲೇ ಈ ವರ್ಷ 2.50 ಕೋಟಿ ಆದಾಯ?

ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾದ 'ತೇಜಸ್ವಿ ವಿಸ್ಮಯ' ಫಲಪುಷ್ಪ ಪ್ರದರ್ಶನವು ಐತಿಹಾಸಿಕ ಟಿಕೆಟ್ ಸಂಗ್ರಹದತ್ತ ಸಾಗುತ್ತಿದೆ. ಈ ಬಾರಿಯ ಪ್ರದರ್ಶನವು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು 2.50 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸುವ ನಿರೀಕ್ಷೆಯಲ್ಲಿದೆ. 

2 Min read
Author : Santosh Naik
Published : Jan 26 2026, 02:43 PM IST
Share this Photo Gallery
  • FB
  • TW
  • Linkdin
  • Whatsapp
110
Image Credit : X

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸುತ್ತಿರುವ ಫಲಪುಷ್ಪ ಪ್ರದರ್ಶನದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತ್ಯಧಿಕ ಟಿಕೆಟ್ ಹಣ ಸಂಗ್ರಹವಾಗುವ ನಿರೀಕ್ಷೆ ತೋಟಗಾರಿಕೆ ಇಲಾಖೆಯದ್ದಾಗಿದೆ.

210
Image Credit : X/@vincimax

ಹಲವು ವರ್ಷಗಳಿಂದ ಗಣರಾಜ್ಯೋತ್ಸವದ ಪ್ರಯುಕ್ತ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ 2 ಕೋಟಿ ರು.ಗಳಿಗೂ ಅಧಿಕ ಮೊತ್ತ ಸಂಗ್ರಹವಾಗಿರಲಿಲ್ಲ. ಆದರೆ ಈ ಬಾರಿ ಜ.15ರಿಂದ- 25ರ ಭಾನುವಾರದ ಪ್ರದರ್ಶನದ ಮುಕ್ತಾಯಕ್ಕೆ ಬರೋಬ್ಬರಿ 1.81 ಕೋಟಿ ರು. ಟಿಕೆಟ್‌ ಮಾರಾಟದಿಂದ ಸಂಗ್ರಹವಾಗಿದೆ.

Related Articles

Related image1
ಕಬ್ಬನ್‌ ಪಾರ್ಕ್‌ನಲ್ಲಿ ನ.27ರಿಂದ ಫ್ಲವರ್‌ ಶೋ: ಹುಲಿ-ಚಿರತೆ-ಆನೆಗಳ ಹೂವಿನ ಕಲಾಕೃತಿ ಆಕರ್ಷಣೆ
Related image2
ಲಾಲ್‌ಬಾಗ್‌ ಫ್ಲವರ್‌ ಶೋಗೆ ಜನರ ದಾಂಗುಡಿ : 40,645 ಮಂದಿ ಭೇಟಿ
310
Image Credit : X/@vincimax

ಫಲಪುಷ್ಪ ಪ್ರದರ್ಶನಕ್ಕೆ ತೆರೆ ಬೀಳಲಿರುವ ಹಿನ್ನೆಲೆಯಲ್ಲಿ ಇಂದು (ಸೋಮವಾರ) 1.50 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆಯಿದ್ದು, ಒಟ್ಟಾರೆಯಾಗಿ 2.50 ಕೋಟಿ ರು.ಗಳಿಗೂ ಹೆಚ್ಚು ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಅಧಿಕಾರಿಗಳು.

410
Image Credit : X/@vincimax

ರಜಾದಿನವಾದ ಭಾನುವಾರ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ತೋಟಗಾರಿಕೆ ಇಲಾಖೆ ಮಾಹಿತಿಯಂತೆ 88,977 ಮಂದಿ ವಯಸ್ಕರು, 15,564 ಮಕ್ಕಳು, 10,085 ವಿದ್ಯಾರ್ಥಿಗಳು ಸೇರಿದಂತೆ 1.14 ಲಕ್ಷ ಮಂದಿ ಪ್ರದರ್ಶನ ವೀಕ್ಷಿಸಿದ್ದಾರೆ.

510
Image Credit : X/@vincimax

ಟಿಕೆಟ್‌ ಮಾರಾಟದಿಂದ ಒಂದೇ ದಿನ 46.41 ಲಕ್ಷ ರು. ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆ ಅಪರ ನಿರ್ದೇಶಕ ಡಾ.ಎಂ.ಜಗದೀಶ್‌ ಅವರು ಮಾಹಿತಿ ನೀಡಿದರು.

610
Image Credit : X/@vincimax

ಈ ಬಾರಿ ವಿಶೇಷವಾಗಿ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಹಾಗೂ ಪ್ರಕೃತಿ ಜೊತೆಗಿನ ಅವರ ನಂಟಿನ ಬಗ್ಗೆ ‘ತೇಜಸ್ವಿ ವಿಸ್ಮಯ’ ಫಲಪುಷ್ಪ ಪ್ರದರ್ಶನದಲ್ಲಿ ಹೂಗಳ ಮೂಲಕ ನೈಸರ್ಗಿಕವಾಗಿ ಕಟ್ಟಿ ಕೊಡಲಾಗಿದೆ.

710
Image Credit : X/@vincimax

ಗಾಜಿನ ಮನೆಯೊಳಗೆ ಹೂಗಳಿಂದ ನಿರ್ಮಿಸಲಾಗಿ­ರುವ ಪೂರ್ಣಚಂದ್ರ ತೇಜಸ್ವಿಯವರ ನೆಚ್ಚಿನ ಪರಿಸರ, ಬೆಟ್ಟ-ಗುಡ್ಡ, ನೀರಿನ ಝರಿ, ಮಂತ್ರ ಮಾಂಗಲ್ಯದ ಚಿತ್ರಣ, ನಿರುತ್ತರ ಮನೆ, ಕ್ಯಾಮೆರಾದೊಂದಿಗೆ ನಿಂತಿರುವ ತೇಜಸ್ವಿಯನ್ನು ವೀಕ್ಷಿಸಿದ ಜನರು ಫೋಟೊಗಳನ್ನು ತೆಗೆಸಿಕೊಳ್ಳಲು ಮುಗಿಬೀಳುತ್ತಿದ್ದರು.

810
Image Credit : X/@vincimax

ನೋಡುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದುದರಿಂದ ಗಾಜಿನ ಮನೆ ಪ್ರವೇಶಿಸಲು ಉದ್ದನೆಯ ಸರತಿ ಸಾಲು ಕಂಡುಬಂತು. ಹೀಗಾಗಿ ಭದ್ರತಾ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದರು.

910
Image Credit : X/@vincimax

ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳಲ್ಲಿ ಟಿಕೆಟ್‌ ಕೌಂಟರ್‌ಗಳ ಬಳಿಯೂ ಜನಸಾಗರವೇ ನೆರೆದಿತ್ತು. ಹೀಗಾಗಿ ಸರತಿ ಸಾಲು ರಸ್ತೆ ತಲುಪಿತ್ತು. ಇದರಿಂದಾಗಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು. ಲಾಲ್ ಬಾಗ್ ಸುತ್ತಮುತ್ತಲಿನ ರಸ್ತೆಗಳು ಇಡೀ ದಿನ ಸಂಚಾರ ದಟ್ಟಣೆಯಿಂದ ಕೂಡಿದ್ದವು. ಸಂಜೆ ವೇಳೆಗೆ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.

1010
Image Credit : X/@vincimax

ಜ.15 ರಿಂದ 25 ರವರೆಗೆ ಶಾಲಾ ಮಕ್ಕಳು ಸೇರಿದಂತೆ 6.50 ಲಕ್ಷ ಮಂದಿ ಆಗಮಿಸಿದ್ದು 1.81 ಕೋಟಿ ರು. ಸಂಗ್ರಹವಾಗಿದೆ. ಸೋಮವಾರ ಪುಷ್ಪ ಪ್ರದರ್ಶನದ ಅಂತಿಮ ದಿನವಾಗಿದ್ದು ನಿರೀಕ್ಷೆಗೂ ಮೀರಿ ಜನರು ಆಗಮಿಸುವ ಸಾಧ್ಯತೆ ಇದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಬೆಂಗಳೂರು
ಬೆಂಗಳೂರು ನಗರ
ಗಣರಾಜ್ಯೋತ್ಸವ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬೆಂಗಳೂರಲ್ಲಿ ಮನೆ ಕಟ್ಟಿಸಿ, ಮದುವೆಯ ಸಿದ್ಧತೆಯಲ್ಲಿದ್ದ ಪ್ರಶಾಂತ್, ಕ್ರಿಕೆಟ್ ಕಿರಿಕ್‌ನಲ್ಲಿ ಮಸಣ ಸೇರಿದ!
Recommended image2
ಪದ್ಮ ಪ್ರಶಸ್ತಿ ಘನತೆ ಹೆಚ್ಚಿಸಿದ ಶತಾವಧಾನಿ ಡಾ.ಆರ್ ಗಣೇಶ್‌‌ಗೆ ನೀಡಿದ ಗೌರವ!
Recommended image3
ಬೆಂಗಳೂರು ಟೆಕ್ಕಿ ಶರ್ಮಿಳಾ ಹತ್ಯೆ ಕೇಸಲ್ಲಿ ಟ್ವಿಸ್ಟ್; ಫಸ್ಟ್ ರ‍್ಯಾಂಕ್‌ ಕೊಲೆಗಾರನ ಉದ್ದೇಶವೇ ಬೇರೆಯಾಗಿತ್ತು!
Related Stories
Recommended image1
ಕಬ್ಬನ್‌ ಪಾರ್ಕ್‌ನಲ್ಲಿ ನ.27ರಿಂದ ಫ್ಲವರ್‌ ಶೋ: ಹುಲಿ-ಚಿರತೆ-ಆನೆಗಳ ಹೂವಿನ ಕಲಾಕೃತಿ ಆಕರ್ಷಣೆ
Recommended image2
ಲಾಲ್‌ಬಾಗ್‌ ಫ್ಲವರ್‌ ಶೋಗೆ ಜನರ ದಾಂಗುಡಿ : 40,645 ಮಂದಿ ಭೇಟಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved