MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಹೃದಯ ಬಡಿತದಲ್ಲಿ ವ್ಯತ್ಯಾಸ, ಪೇಸ್‌ಮೇಕರ್ ಅಳವಡಿಕೆ : ತಂದೆಯ ಶಸ್ತ್ರಚಿಕಿತ್ಸೆ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ

ಹೃದಯ ಬಡಿತದಲ್ಲಿ ವ್ಯತ್ಯಾಸ, ಪೇಸ್‌ಮೇಕರ್ ಅಳವಡಿಕೆ : ತಂದೆಯ ಶಸ್ತ್ರಚಿಕಿತ್ಸೆ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಬಡಿತದಲ್ಲಿನ ವ್ಯತ್ಯಾಸದಿಂದಾಗಿ ಅವರಿಗೆ ಪೇಸ್‌ಮೇಕರ್ ಅಳವಡಿಸಲಾಗಿದೆ ಎಂದು ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಖಚಿತಪಡಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

2 Min read
Author : Mahmad Rafik
Published : Oct 01 2025, 12:28 PM IST
Share this Photo Gallery
  • FB
  • TW
  • Linkdin
  • Whatsapp
15
ಮಲ್ಲಿಕಾರ್ಜುನ ಖರ್ಗೆ
Image Credit : Facebook

ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ತಂದೆ ಅವರ ಆರೋಗ್ಯದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

25
 ಹೃದಯ ಬಡಿತದಲ್ಲಿ ವ್ಯತ್ಯಾಸ
Image Credit : Facebook

ಹೃದಯ ಬಡಿತದಲ್ಲಿ ವ್ಯತ್ಯಾಸ

ಮಲ್ಲಿಕಾರ್ಜುನ ಖರ್ಗೆ ಹೃದಯ ಬಡಿತದಲ್ಲಿ ವ್ಯತ್ಯಾಸ ಉಂಟಾಗಿದ್ದರಿಂದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಪೇಸ್ ಮೇಕರ್ ಅಳವಡಿಕೆ ಮಾಡಿದ್ದಾರೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಆರೋಗ್ಯ ಸ್ಥಿರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹೃದಯ ಬಡಿತ ನಿಯಂತ್ರಣಕ್ಕಾಗಿ ಪೇಸ್ ಮೇಕರ್ ಅಳವಡಿಕೆ ಮಾಡಲಾಗುತ್ತದೆ.

Related Articles

Related image1
ಯಾವ ಕಾರಣಕ್ಕೆ ಜಿಎಸ್‌ಟಿ ಕಡಿತ ಎಂದು ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ
Related image2
ಕಲ್ಯಾಣ ಕರ್ನಾಟಕದಲ್ಲಿ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ: ಮಲ್ಲಿಕಾರ್ಜುನ ಖರ್ಗೆ
35
ಪ್ರಿಯಾಂಕ್ ಖರ್ಗೆ ಮಾಹಿತಿ
Image Credit : Facebook

ಪ್ರಿಯಾಂಕ್ ಖರ್ಗೆ ಮಾಹಿತಿ

ಆರಂಭದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಮತ್ತು ರೂಟಿನ್ ಚೆಕಪ್‌ಗಾಗಿ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ದಾರೆ. ಒಂದು ದಿನದ ವಿಶ್ರಾಂತಿ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಎಕ್ಸ್ ಖಾತೆ ಮೂಲಕ ಮಲ್ಲಿಕಾರ್ಜುನ ಖರ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಹಿತಿಯನ್ನು ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.

ಇದನ್ನೂ ಓದಿ: Caste Survey Controversy Karnataka: ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಜಾತಿಗಣತಿ: ಶಾಸಕ ಸುನಿಲ್‌ ಕುಮಾರ್

45
ಆರೋಗ್ಯವನ್ನು ವಿಚಾರಿಸಿದ ಸಿದ್ದರಾಮಯ್ಯ
Image Credit : @siddaramaiah/X

ಆರೋಗ್ಯವನ್ನು ವಿಚಾರಿಸಿದ ಸಿದ್ದರಾಮಯ್ಯ

ಇಂದು ಸಿಎಂ ಸಿದ್ದರಾಮಯ್ಯ ಎಂಎಸ್ ರಾಮಯ್ಯ ಆಸ್ಪತ್ರೆಗೆ ಆಗಮಿಸಿ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಆಸ್ಪತ್ರೆಯಿಂದ ಹಿಂದಿರುಗವ ವೇಳೆ ಮಾಧ್ಯಮಗಳಿಂದ ಮಾತನಾಡಿದ ಮುಖ್ಯಮಂತ್ರಿಗಳು, ಖರ್ಗೆಯವರು ಆರೋಗ್ಯವಾಗಿದ್ದು, ಚೆನ್ನಾಗಿ ಮಾತನಾಡುತ್ತಿದ್ದಾರೆ. ನಾಡಿನ ಜನತೆಗೆ ದಸರಾ ಶುಭಾಶಯಗಳು. ನಾಳೆ ಜಂಬೂ ಸವಾರಿ ಇದೆ. ಚಾಮುಂಡಿ ತಾಯಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದರು.

ಇದನ್ನೂ ಓದಿ: ಜಾತಿ ಗಣತಿ ಸೂಪರ್‌ಫಾಸ್ಟ್‌: ನಿನ್ನೆ 15 ಲಕ್ಷ ಮನೆಗಳ ಸರ್ವೇ, ಶೇ.60 ಮನೆಗಳ ಸಮೀಕ್ಷೆ ಪೂರ್ಣ

55
ಸರಣಿ ಸಭೆ ಮತ್ತು ಪ್ರವಾಸದ ಆಯಾಸ
Image Credit : x

ಸರಣಿ ಸಭೆ ಮತ್ತು ಪ್ರವಾಸದ ಆಯಾಸ

ಬಿಹಾರ ಚುನಾವಣೆ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆಯವರು ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ನ CWC ಸಭೆಯನ್ನು ಸಹ ಆಯೋಜನೆ ಮಾಡಲಾಗಿತ್ತು. ಪಕ್ಷದ ಅಧ್ಯಕ್ಷರಾಗಿರುವ ಕಾರಣ ಬಿಹಾರ ಚುನಾವಣೆ ಗೆಲ್ಲಲು ಸರಣಿ ಸಭೆಗಳನ್ನು ಮಲ್ಲಿಕಾರ್ಜುನ ಖರ್ಗೆ ಮಾಡುತ್ತಿದ್ದಾರೆ.

Sri Kharge was advised pacemaker to be implanted and is admitted to the hospital for the planned procedure. He is stable and doing well.

Grateful to all of you for your concern and wishes.

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 1, 2025

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಲ್ಲಿಕಾರ್ಜುನ ಖರ್ಗೆ
ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್
ಬೆಂಗಳೂರು

Latest Videos
Recommended Stories
Recommended image1
ತರಕಾರಿಯಲ್ಲಿನ ಅಪಾಯಕಾರಿ ಅಂಶ ದೇಹಕ್ಕೆ ಸೇರದಿರಲು ಈ ಕ್ರಮ ಅನುಸರಿಸಿ ಸೇವಿಸಿ
Recommended image2
ದರ್ಶನ್- ರೇಣುಕಾಸ್ವಾಮಿ ಕೇಸ್: ಪೊಲೀಸರ ವಿರುದ್ಧವೇ ಸುಳ್ಳು ಸಾಕ್ಷ್ಯ ಸೃಷ್ಟಿಸಿರುವ ಆರೋಪ
Recommended image3
ದಿನಪತ್ರಿಕೆಗಳನ್ನು ಹಂಚುತ್ತಿದ್ದ ಹುಡುಗ ಈಗ ಜಡ್ಜ್
Related Stories
Recommended image1
ಯಾವ ಕಾರಣಕ್ಕೆ ಜಿಎಸ್‌ಟಿ ಕಡಿತ ಎಂದು ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ
Recommended image2
ಕಲ್ಯಾಣ ಕರ್ನಾಟಕದಲ್ಲಿ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ: ಮಲ್ಲಿಕಾರ್ಜುನ ಖರ್ಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved