MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಡಾ.ಕೃತಿಕಾ ರೆಡ್ಡಿ ಪ್ರಕರಣಕ್ಕೆ ಟ್ವಿಸ್ಟ್; ಅಕ್ರಮ ಸಂಬಂಧದ ಕರಾಳ ನೆರಳು?

ಡಾ.ಕೃತಿಕಾ ರೆಡ್ಡಿ ಪ್ರಕರಣಕ್ಕೆ ಟ್ವಿಸ್ಟ್; ಅಕ್ರಮ ಸಂಬಂಧದ ಕರಾಳ ನೆರಳು?

Twist in Doctor Krithika Reddy case:  ಆರೋಗ್ಯ ಸಮಸ್ಯೆ ಮರೆಮಾಚಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿದ್ದಾಗಿ ಹೇಳಿದ್ದ ಡಾ.ಮಹೀಂದ್ರ ರೆಡ್ಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾರತಹಳ್ಳಿ ಪೊಲೀಸರು ಅಕ್ರಮ ಸಂಬಂಧದ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

2 Min read
Mahmad Rafik
Published : Oct 16 2025, 08:27 AM IST
Share this Photo Gallery
  • FB
  • TW
  • Linkdin
  • Whatsapp
15
 ಡಾ.ಕೃತಿಕಾ ರೆಡ್ಡಿ ಪ್ರಕರಣ
Image Credit : Asianet News

ಡಾ.ಕೃತಿಕಾ ರೆಡ್ಡಿ ಪ್ರಕರಣ

ಗಂಡನಿಂದಲೇ ಕೊ*ಲೆಯಾದ ಡಾ.ಕೃತಿಕಾ ರೆಡ್ಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಕೃತಿಕಾ ತಮ್ಮ ಆರೋಗ್ಯ ಸಮಸ್ಯೆಗಳನ್ನು (ಅಜೀರ್ಣ, ಗ್ಯಾಸ್ಟಿಕ್ ಮತ್ತು ಲೋ ಶುಗರ್‌) ಮರೆಮಾಡಿ ಮದುವೆಯಾಗಿದ್ದರು. ಇದರಿಂದ ಗಂಡ ಡಾ.ಮಹೀಂದ್ರ ರೆಡ್ಡಿ ಇಂಜೆಕ್ಷನ್ ನೀಡಿ ಪತ್ನಿಯನ್ನು ಕೊ*ಲೆಗೈದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಪ್ರಕರಣದ ಹಿಂದೆ ಅಕ್ರಮ ಸಂಬಂಧದ ನೆರಳು ಇತ್ತಾ ಎಂಬುದರ ಬಗ್ಗೆ ಅನುಮಾನ ಮೂಡಿದೆ.

25
ಡಾ.ಕೃತಿಕಾ ರೆಡ್ಡಿ ಮತ್ತು ಡಾ.ಮಹೀಂದ್ರ ರೆಡ್ಡಿ
Image Credit : Asianet News

ಡಾ.ಕೃತಿಕಾ ರೆಡ್ಡಿ ಮತ್ತು ಡಾ.ಮಹೀಂದ್ರ ರೆಡ್ಡಿ

ಡಾ.ಕೃತಿಕಾ ರೆಡ್ಡಿ ಮತ್ತು ಡಾ.ಮಹೀಂದ್ರ ರೆಡ್ಡಿ ಇಬ್ಬರು ಶ್ರೀಮಂತ ಕುಟುಂಬದ ಹಿನ್ನೆಲೆಯಿಂದ ಬಂದವರು. ಆಗರ್ಭ ಶ್ರೀಮಂತೆಯಾಗಿದ್ದ ಕೃತಿಕಾ ರೆಡ್ಡಿ ತಂದೆ ಮುನಿರೆಡ್ಡಿಯವರು ಮಾರತಹಳ್ಳಿ ಭಾಗದಲ್ಲಿ ಅನೇಕ ವಾಣಿಜ್ಯ ಮಳಿಗೆಗಳ ಮಾಲೀಕರಾಗಿದ್ದಾರೆ. ಮಾಹಿತಿ ಪ್ರಕಾರ, ಮುನಿರೆಡ್ಡಿ ಅವರು ತಿಂಗಳಿಗೆ 10 ರಿಂದ 15 ಲಕ್ಷ ರೂಪಾಯಿ ಬಾಡಿಗೆ ಪಡೆಯುತ್ತಾರೆ. ಮಗಳಿಗೆ ದೊಡ್ಡದಾದ ಕ್ಲಿನಿಕ್ ಆರಂಭಕ್ಕೆ ಮುನಿರೆಡ್ಡಿ ಹಣಕಾಸಿನ ನೆರವು ಸಹ ನೀಡಿದ್ದರು.

Related Articles

Related image1
ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ಮಗಳಿದ್ದ ಮಾರತಹಳ್ಳಿಯ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ!
Related image2
ಕಲಬುರಗಿಯ ಗ್ರಂಥಪಾಲಕಿಯದ್ದು ಆತ್ಮ*ಹತ್ಯೆಯಲ್ಲ, ಸರ್ಕಾರಿ ಪ್ರಾಯೋಜಿತ ಕೊಲೆ: ಆರ್.ಅಶೋಕ್
35
 ಅಕ್ರಮ ಸಂಬಂಧ
Image Credit : Asianet News

ಅಕ್ರಮ ಸಂಬಂಧ

ಪ್ರಕರಣ ದಾಖಲಿಸಿಕೊಂಡಿರುವ ಮಾರತಹಳ್ಳಿ ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಗಳ ಸಾವಿನ ಬಗ್ಗೆ ಮುನಿರಡ್ಡಿ ದೂರು ದಾಖಲಿಸಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಅಕ್ರಮ ಸಂಬಂಧದ ಬಗ್ಗೆ ಮುನಿರೆಡ್ಡಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

45
 ಯುವತಿಯರ ಜೊತೆ ಸಂಪರ್ಕ
Image Credit : Asianet News

ಯುವತಿಯರ ಜೊತೆ ಸಂಪರ್ಕ

ಅಳಿಯ ಡಾ.ಮಹೀಂದ್ರ ರೆಡ್ಡಿ ಹಲವು ಯುವತಿಯರ ಜೊತೆ ಸಂಪರ್ಕ ಹೊಂದಿದ್ದನು. ಅವರೊಂದಿಗೆ ಮಹೀಂದ್ರಗೆ ನಿಕಟವಾದ ಸಂಬಂಧವಿತ್ತು ಎಂದು ಮುನಿರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. ಪತ್ನಿಗೆ ಅಕ್ರಮ ಸಂಬಂಧ ವಿಷಯ ಗೊತ್ತಾಗಿದ್ದರಿಂದ ಮಹೀಂದ್ರ ರೆಡ್ಡಿ ಕೊ*ಲೆ ಮಾಡಿದನಾ ಎಂಬುದರ ಬಗ್ಗೆಯೂ ಅನುಮಾನ ಮೂಡಿದೆ. ಈ ಆಯಾಮದಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಾಲಿವುಡ್‌ ಸಿನಿಮಾ ರೇಂಜಲ್ಲಿತ್ತು ಕೃತಿಕಾ-ಮಹೇಂದ್ರ ರೆಡ್ಡಿ ಪ್ರೀ ವೆಡ್ಡಿಂಗ್‌ ಫೋಟೋಶೂಟ್‌, ಗಂಡನ ಮಸಲತ್ತು ಆಕೆಗೆ ತಿಳಿಯಲೇ ಇಲ್ಲ!

55
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ
Image Credit : Asianet News

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ

ಮಹೀಂದ್ರ ರೆಡ್ಡಿ ಬೆಂಗಳೂರು ಹೊರವಲಯದ ನಿವಾಸಿಯಾಗಿದ್ದು, ಶ್ರೀಮಂತ ಕುಟುಂಬದ ಮಗನಾಗಿದ್ದನು. ಹಾಗಾಗಿ ಇಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಡಾ. ಮಹೇಂದ್ರ ರೆಡ್ಡಿ (ಜನರಲ್ ಸರ್ಜನ್) ಮತ್ತು ಡಾ. ಕೃತಿಕಾ ರೆಡ್ಡಿ (ಡರ್ಮೆಟಾಲಜಿಸ್ಟ್) ಇಬ್ಬರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಇದೇ ವರ್ಷ ಏಪ್ರಿಲ್ 23ರಂದು ಇಬ್ಬರ ಮದುವೆ ನಡೆದಿತ್ತು.

ಇದನ್ನೂ ಓದಿ: ವಿಜಯಪುರ: ಮದ್ಯ ಸೇವಿಸಿದ ಬಳಿಕ ಮೂವರ ನಡುವೆ ಜಗಳ: ಇಬ್ಬರು ಸೇರಿ ಓರ್ವನ ಹ*ತ್ಯೆ!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಕ್ರೈಮ್ ನ್ಯೂಸ್
ಕೊಲೆ
ಅಕ್ರಮ ಸಂಬಂಧ
ಗಂಡ
ಪತ್ನಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved