MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Business
  • 8ನೇ ವೇತನ ಆಯೋಗ: 1 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಪ್ರಮುಖ ಸುದ್ದಿ

8ನೇ ವೇತನ ಆಯೋಗ: 1 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಪ್ರಮುಖ ಸುದ್ದಿ

ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಕಾಯುತ್ತಿರುವ 8ನೇ ವೇತನ ಆಯೋಗದ ಕುರಿತು ಕೇಂದ್ರ ಸರ್ಕಾರದಿಂದ ಸಮಾಧಾನಕರ ಸುದ್ದಿ. ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಭರವಸೆ.

1 Min read
Mahmad Rafik
Published : Sep 09 2025, 02:21 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Social Media

ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 8ನೇ ವೇತನ ಆಯೋಗಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದೀಗ 8ನೇ ಪೇ ಕಮಿಷನ್‌ಗಾಗಿ ಕಾಯುತ್ತಿರೋ ಫಲಾನುಭವಿಗಳಿಗೆ ಸಮಾಧಾನಕರ ಸುದ್ದಿಯೊಂದು ಬಂದಿದೆ. ಆಯೋಗ ರಚನೆಯಲ್ಲಿನ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿತ್ತು.

25
Image Credit : Asianet News

ಎಂಟನೇ ವೇತನ ಆಯೋಗದ ವಿಷಯವನ್ನು ರಾಜ್ಯ ಸರ್ಕಾರಗಳೊಂದಿಗೆ ಗಂಭೀರವಾಗಿ ಚರ್ಚೆ ನಡೆಸಲಾಗುವುದು. ಶೀಘ್ರದಲ್ಲಿಯೇ ವೇತನ ಆಯೋಗ ರಚನೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಳೆದ ತಿಂಗಳಷ್ಟೇ ಆಯೋಗದ ರಚನೆಯ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಗಿತ್ತು.

Related Articles

Related image1
ಕನಿಷ್ಠ ವೇತನ 30 ಸಾವಿರಕ್ಕೆ ಏರಿಕೆಯಾಗುವ 8ನೇ ವೇತನ ಆಯೋಗ ಜಾರಿ ವಿಳಂಬ!
Related image2
8ನೇ ವೇತನ ಆಯೋಗ: ಸಂಬಳದ ಬಗ್ಗೆ ದೊಡ್ಡ ಅನೌನ್ಸ್‌ಮೆಂಟ್! ಲೆಕ್ಕಾಚಾರ ತಿಳ್ಕೊಳ್ಳಿ..
35
Image Credit : Asianet News

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಭಾರತೀಯ ಮಜ್ದೂರ್ ಸಂಘದ (BMS) ಸರ್ವೋಚ್ಚ ಸಂಸ್ಥೆಯಾದ ಸರ್ಕಾರಿ ನೌಕರರ ರಾಷ್ಟ್ರೀಯ ಒಕ್ಕೂಟದ (GENC) ನಿಯೋಗ, 8ನೇ ವೇತನ ಆಯೋಗಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿತ್ತು. ಈ ವರ್ಷ ಜನವರಿಯಲ್ಲಿಯೇ ಎಂಟನೇ ವೇತನ ಆಯೋಗವನ್ನು ರಚಿಸಲಾಗಿತ್ತು. ನೌಕರರು ವೇತನ ಆಯೋಗದ ಸದಸ್ಯರ ನೇಮಕಾತಿ ಮತ್ತು ಉಲ್ಲೇಖ ಅವಧಿಗಾಗಿ ಕಾಯುತ್ತಿದ್ದಾರೆ.

45
Image Credit : our own

ವಿವಿಧ ವಿಷಯಗಳ ಕುರಿತು ದೀರ್ಘ ಚರ್ಚೆ

ನಿಯೋಗದ ಭೇಟಿ ಬಳಿಕ ಮಾತನಾಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಎಂಟನೇ ವೇತನ ಆಯೋಗದಲ್ಲಿನ ವಿಳಂಬ, ರಾಷ್ಟ್ರೀಯ ಪಿಂಚಣಿ ಯೋಜನೆ ಮತ್ತು ಏಕೀಕೃತ ಯೋಜನೆಯನ್ನು ತೆಗೆದುಹಾಕುವುದು, ಹಳೆಯ ಪಿಂಚಣಿ ಯೋಜನೆಯ ಮರುಸ್ಥಾಪನೆ ಮತ್ತು ಕೋವಿಡ್ -19 ಸಮಯದಲ್ಲಿ ತಡೆಹಿಡಿಯಲಾದ 18 ತಿಂಗಳ ಬಾಕಿ ಡಿಎ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

55
Image Credit : our own

ಕೇಂದ್ರ ಸಚಿವರಿಂದ ಸಿಕ್ತು ಭರವಸೆ

ಜನವರಿಯಲ್ಲಿಯೇ ಎಂಟನೇ ವೇತನ ಆಯೋಗ ರಚನೆಯಾದ್ರೂ ಯಾವುದೇ ಪ್ರಗತಿ ಕಾಣದಿರೋದು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಕೇಂದ್ರ ಸಚಿವರಿಂದ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ಸಿಕ್ಕಿದೆ. ಹಳೆಯ ಪಿಂಚಣಿ ಯೋಜನೆಯ ಪುನಃಸ್ಥಾಪನೆಗಾಗಿ ಪಿಂಚಣಿ ಕಾರ್ಯದರ್ಶಿಯೊಂದಿಗೆ ಶೀಘ್ರದಲ್ಲೇ ಮುಂದಿನ ಸಭೆ ನಡೆಸಲಾಗುವುದು. ಅನುಕಂಪದ ನೇಮಕಾತಿ, ಕೇಡರ್ ವಿಮರ್ಶೆ ಮತ್ತು ನಿಯಮಿತ ಜೆಸಿಎಂ ಸಭೆಗಳಂತಹ ಇತರ ವಿಷಯಗಳನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಜಿತೇಂದ್ರ ಸಿಂಗ್ ತಮ್ಮನ್ನು ಭೇಟಿಯಾದ ನಿಯೋಗಕ್ಕೆ ಭರವಸೆ ನೀಡಿದ್ದಾರೆ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಭಾರತ ಸುದ್ದಿ
ಸರ್ಕಾರಿ ಉದ್ಯೋಗ
ಪಿಂಚಣಿ
ಹಣ (Hana)

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved