MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಬ್ಯಾಂಕ್ ಒಕ್ಕೂಟಗಳಿಂದ ಮುಷ್ಕರಕ್ಕೆ ಕರೆ, ಈ ಎರಡು ದಿನ ದೇಶಾದ್ಯಂತ ಬ್ಯಾಂಕ್ ಬಂದ್

ಬ್ಯಾಂಕ್ ಒಕ್ಕೂಟಗಳಿಂದ ಮುಷ್ಕರಕ್ಕೆ ಕರೆ, ಈ ಎರಡು ದಿನ ದೇಶಾದ್ಯಂತ ಬ್ಯಾಂಕ್ ಬಂದ್

ಬ್ಯಾಂಕ್ ಒಕ್ಕೂಟಗಳು ಇದೀಗ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಬಾರಿ ಎರಡು ದಿನ ಬ್ಯಾಂಕ್ ಮುಷ್ಕರ ನಡೆಸುವುದಾಗಿ ಘೋಷಿಸಿದೆ. ವಿವಿದ ಬೇಡಿಕೆ ಈಡೇರಿಕೆಗಾಗಿ ಬ್ಯಾಂಕ್ ಮುಷ್ಕರ ಘೋಷಿಸಲಾಗಿದೆ. ಹೀಗಾಗಿ ಈಗಲೇ ಬ್ಯಾಂಕ್ ಕೆಲಸಗಳನ್ನು ಮುಗಿಸಿಕೊಳ್ಳಿ. 

2 Min read
Author : Chethan Kumar
| Updated : Jan 10 2025, 06:40 PM IST
Share this Photo Gallery
  • FB
  • TW
  • Linkdin
  • Whatsapp
18

 ಅಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್ಫೆಡರೇಶನ್(AIBOC) ಒಕ್ಕೂಟ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಕೆಲ ಗಂಭೀರ ವಿಚಾರಗಳನ್ನು ಮಂದಿಟ್ಟುಕೊಂಡು ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹಲವು ವರ್ಷಗಳಿಂದ ಬೇಡಿಕೆಗೆ ಒತ್ತಾಯಿಸಿದ್ದರೂ ಸೊಪ್ಪು ಹಾಕಿಲ್ಲ. ಹೀಗಾಗಿ ಮುಷ್ಕರ ಅನಿವಾರ್ಯಾಗಿದೆ ಎಂದು ಬ್ಯಾಂಕ್ ಒಕ್ಕೂಟ ಹೇಳಿದೆ.

28

ಬ್ಯಾಂಕ್ ಒಕ್ಕೂಟ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಫೆಬ್ರವರಿ 24 ಹಾಗೂ 25 ಎರಡು ದಿನಗಳ ಕಾಲ ಮುಷ್ಕರ ನಡೆಸುವುದಾಗಿ ಘೋಷಿಸಿದೆ. ಈ ಕುರಿತು ಒಕ್ಕೂಟ ಬ್ಯಾಂಕ್ ಕಮಿಟಿ ನಡೆಸಿದ 102 ಸಭೆಯಲ್ಲಿ ಮಹತ್ವದ ತೀರ್ಮಾನ ತೆಗದುಕೊಳ್ಳಲಾಗಿದೆ. ನವೆಂಬರ್ 2024ರಲ್ಲಿ ನಡೆದ ವರ್ಕಿಂಗ್ ಕಮಿಟಿ ಸಭೆಯ ನಿರ್ಣಯಗಳನ್ನು ಆಧರಿಸಿ ಇದೀಗ ಈ ಕ್ರಮ ಕೈಗೊಳ್ಳಲಾಗಿದೆ.

38
ಐದು ದಿನ ಕೆಲಸದ ಬೇಡಿಕೆ

ಐದು ದಿನ ಕೆಲಸದ ಬೇಡಿಕೆ

ಬ್ಯಾಂಕ್ ಒಕ್ಕೂಟ ಒಂದಷ್ಟು ಬೇಡಿಕೆಗನ್ನು ಮುಂದಿಟ್ಟಿದೆ. ಪ್ರಮುಖವಾಗಿ ಬ್ಯಾಂಕ್ ಕ್ಷೇತ್ರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹರನ್ನು ತಕ್ಷಣವೇ ನೇಮಕಾತಿ ಮಾಡುವಂತೆ ಬೇಡಿಕೆ ಮುಂದಿಡಲಾಗಿದೆ. ಉದ್ಯೋಗಿಗಳ ಕೊರತೆಯಿಂದ ಬ್ಯಾಂಕ್ ಕೆಲಸಗಳು ಹೆಚ್ಚು ಒತ್ತಡ ತರುತ್ತಿದೆ. ಹೆಚ್ಚುವರಿ ಸಮಯದಲ್ಲೂ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಅನ್ನೋ ಕೂಗು ಹೆಚ್ಚಾಗಿದೆ. 

48
ಕೆಲಸ ಮಾಡಲು ಜನ ಕಡಿಮೆ

ಕೆಲಸ ಮಾಡಲು ಜನ ಕಡಿಮೆ

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಹೆಚ್ಚಿನ ಒತ್ತಡಕ್ಕೆ ಒಳಗಾಗುತ್ತಿದ್ದಾರೆ.  2014 ರಿಂದ ಸರ್ಕಾರಿ ಬ್ಯಾಂಕ್‌ಗಳಲ್ಲಿ ಸಾಮಾನ್ಯ ಉದ್ಯೋಗಿಗಳ ಸಂಖ್ಯೆ 1. 14 ಲಕ್ಷದಷ್ಟು ಕಡಿಮೆಯಾಗಿದೆ. ಕೆಲಸ ಮಾಡಲು ಉದ್ಯೋಗಿಗಳ ಸಂಖ್ಯೆ ಕಡಿಮೆ ಇದೆ ಎಂದು ಬ್ಯಾಂಕ್ ಉದ್ಯೋಗಿಗಳ ಸಂಘಟನೆಗಳು ಆರೋಪಿಸಿವೆ. ಕಳೆದ ೧೦ ವರ್ಷಗಳಲ್ಲಿ ಬಹಳಷ್ಟು ಉದ್ಯೋಗಿಗಳು ನಿವೃತ್ತರಾಗಿದ್ದಾರೆ ಮತ್ತು ಕೆಲವರು ರಾಜೀನಾಮೆ ನೀಡಿದ್ದಾರೆ.

58

ಬ್ಯಾಂಕಿಂಗ್ ಕ್ಷೇತ್ರದಲ್ಲೂ ವಾರದಲ್ಲಿ 5 ದಿನ ಕೆಲಸ ನಿಯಮ ಜಾರಿಗೆ ತರಬೇಕು. ವಾರಾಂತ್ಯದ 2 ದಿನ ರಜಾ ದಿನವಾಗಿ ಘೋಷಿಸಬೇಕು ಎಂದು ಬೇಡಿಕೆ ಇಡಲಾಗಿದೆ. ಸದ್ಯ ಎಲ್ಲಾ ಭಾನುವಾರ ಹಾಗೂ ಎರಡನೇ ಹಾಗೂ ನಾಲ್ಕನೇ ಶನಿವಾರ ಕೂಡ ರಜೆ ನಿಯಮವಿದೆ. ಆದರೆ ಎಲ್ಲಾ ವಾರದಲ್ಲಿ ಸೋಮವಾರದಿಂದ ಶುಕ್ರವಾರದ ವರೆಗೆ ಮಾತ್ರ ಕೆಲಸದ ನಿಯಮ ಜಾರಿಗೆ ತರಲು ಬೇಡಿಕೆ ಇಡಲಾಗಿದೆ.
 

68

ಕೇಂದ್ರ ಹಣಕಾಸು ಸಚಿವಾಲಯ ಆದೇಶಿಸಿದ ಹೊಸ ಪರ್ಫಾಮೆನ್ಸ್ ಲಿಂಕ್ಡ್ ಇನ್ಸೆಂಟೀವ್(PLI) ಆದೇಶವನ್ನು ತಕ್ಷಣ ಹಿಂಪಡೆಯಬೇಕು ಅನ್ನೋ ಬೇಡಿಕೆಯನ್ನು ಬ್ಯಾಂಕ್ ಒಕ್ಕೂಟಗಳು ಮುಂದಿಟ್ಟಿದೆ. ಇದು ಉದ್ಯೋಗ ಭದ್ರತೆಗೆ ಸವಾಲೆಸೆಯುತ್ತಿದೆ. ಹೀಗಾಗಿ ಈ ಆದೇಶ ಹಿಂಪಡೆಯಬೇಕು ಎಂದು ಬೇಡಿಕೆಯಲ್ಲಿ ಉಲ್ಲೇಖಿಸಿದ್ದಾರೆ.

78

 ಸದ್ಯ ಫೆಬ್ರವರಿ 24 ಹಾಗೂ 25ರಂದು ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ನಮ್ಮ ಬೇಡಿಕೆ ಈಡೇರಿಕೆಗೆ ಯಾವುದೇ ಸ್ಪಂದನೆ ವ್ಯಕ್ತವಾಗದಿದ್ದರೆ ಪರಿಸ್ಥಿತಿಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬ ಎಚ್ಚರಿಕೆಯನ್ನು ಬ್ಯಾಂಕ್ ಒಕ್ಕೂಟ ಮುಂದಿಟ್ಟಿದೆ. ಈ ಮೂಲಕ ಸ್ಪಂದಿಸದಿದ್ದರೆ, ಮುಷ್ಕರ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ ಅನ್ನೋ ಸೂಚನೆಯನ್ನು ನೀಡಿದೆ.

88

ಬ್ಯಾಂಕ್ ಅಧಿಕಾರಿಗಳು, ಉದ್ಯೋಗಿಗಳ ಮೇಲೆ ಗ್ರಾಹಕರಿಂದ ಹಲ್ಲೆ ನಡೆಯುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ಉದ್ಯೋಗಿಗಳು, ಅಧಿಕಾರಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಇನ್ನು ಗ್ರಾಚ್ಯುಟಿ ನಿಮಯದಲ್ಲೂ ಕೆಲ ಬದಲಾವಣೆ ತರಬೇಕು ಎಂದು ಬೇಡಿಕೆ ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡಲಾಗಿದೆ. 

ಹೀಗಾಗಿ ಫೆಬ್ರವರಿ 24 ಹಾಗೂ 25ರಂದು ಬ್ಯಾಂಕ್ ಕೆಲಸ ಇಟ್ಟುಕೊಳ್ಳಬೇಡಿ. ಅದಕ್ಕೂ ಮೊದಲೇ ಮುಗಿಸಿಕೊಳ್ಳಿ

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಬ್ಯಾಂಕ್
ಪ್ರತಿಭಟನೆ

Latest Videos
Recommended Stories
Recommended image1
ನಿಮ್ಮ ಹಳೆಯ ಚಿನ್ನ ಬದಲಾಯಿಸಿ ಹೊಸ ಒಡವೆಗಳನ್ನು ಕೊಳ್ಳಬೇಕೇ ಅಥವಾ ಬೇಡವೇ?, ಯಾವುದು ಬೆಸ್ಟ್?
Recommended image2
ಬೆಳಗ್ಗೆ ಎದ್ದಾಗ ಬಿಸಿನೆಸ್ ಧೂಳೀಪಟ.. AI ಹೊಡೆತಕ್ಕೆ ರಾತ್ರೋರಾತ್ರಿ ಕುಸಿದ ಸ್ಟಾರ್ಟ್‌ಅಪ್!
Recommended image3
Bharat Taxi Launch: ಚಾಲಕರಿಗೂ ಮಾಲೀಕರಾಗೋ ಅವಕಾಶ, ಅಮೂಲ್‌ ಮಾದರಿಯಲ್ಲಿ ಭಾರತ್‌ ಟ್ಯಾಕ್ಸಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved