MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಬಾಳೆಹಣ್ಣು ದರದಲ್ಲಿ ಮಧ್ಯವರ್ತಿಗಳ ಗೋಲ್‌ಮಾಲ್‌: ರೈತರಿಂದ 25 ರೂ.ಗೆ ಖರೀದಿ, ಗ್ರಾಹಕರಿಗೆ 120 ರೂ. ಮಾರಾಟ

ಬಾಳೆಹಣ್ಣು ದರದಲ್ಲಿ ಮಧ್ಯವರ್ತಿಗಳ ಗೋಲ್‌ಮಾಲ್‌: ರೈತರಿಂದ 25 ರೂ.ಗೆ ಖರೀದಿ, ಗ್ರಾಹಕರಿಗೆ 120 ರೂ. ಮಾರಾಟ

ಬೆಂಗಳೂರು (ಆ.16): ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯಾಗಿದೆ ಎಂಬ ನೆಪವೊಡ್ಡಿ ಬಾಳೆಹಣ್ಣಿನ ದರವನ್ನು ವ್ಯಾಪಾರಿಗಳೇ ಬೆಲೆ ಏರಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ರೈತರಿಂದ 25 ರೂ.ಗೆ ಹಣ್ಣು ಖರೀದಿ ಮಾಡುವ ಮಧ್ಯವರ್ತಿಗಳು ಗ್ರಾಹಕರಿಗೆ 120ರೂ.ಗೆ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ಹೇಳಿಕೊಂಡಿದ್ದಾರೆ. 

2 Min read
Author : Sathish Kumar KH
| Updated : Aug 16 2023, 08:35 PM IST
Share this Photo Gallery
  • FB
  • TW
  • Linkdin
  • Whatsapp
17

ನೈಜವಾಗಿ ಬಾಳೆಹಣ್ಣಿನ ಇಳುವರಿ ಕಡಿಮೆಯಾಗಿಲ್ಲ. ರೈತರಿಂದ ಕೇವಲ 25 ರೂ.ಗೆ ಖರೀದಿ ಮಾಡುತ್ತಿರುವ ಮಧ್ಯವರ್ತಿಗಳು ಹಾಗೂ ವ್ಯಾಪಾರಿಗಳು ಗ್ರಾಹಕರಿಗೆ 120 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರವೇ ಮದ್ಯಸ್ಥಿಕೆವಹಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

27

ಕಳೆದ ಎರಡು ತಿಂಗಳಿಂದ ದುಬಾರಿ ಬೆಲೆಯಲ್ಲಿ (ಪ್ರತಿ ಕೆ.ಜಿ ಟೊಮೆಟೊಗೆ 100 ರೂ.ಗಿಂತ ಅಧಿಕ) ಮಾರಾಟವಾಗುತ್ತಿದ್ದ ಈಗ ಇಳಿಕೆಯಾಗಿದೆ. ಆದರೆ, ಈಗ ಬಾಳೆಹಣ್ಣಿನ ಬೆಲೆ 60 ರೂ.ಗಳಿಂದ ದುಪ್ಪಟ್ಟಾಗಿದ್ದು, 120 ರೂ.ಗೆ ಏರಿಕೆಯಾಗಿದೆ. ಈಗ ಬಾಳೆಹಣ್ಣು ಬೆಲೆ ಏರಿಕೆಗೆ ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳೇ ಕಾರಣ ಎಂದು ರೈತರು ಹೇಳಿಕೊಂಡಿದ್ದಾರೆ. 

37

ಕೊಡಗು, ಮೈಸೂರು, ಹಾಸನ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಮಂದಿ ಬಾಳೆ ಬೆಳೆಯುತ್ತಿದ್ದಾರೆ. ಆದರೆ ರೈತರು ನೇರವಾಗಿ ಮಾರುಕಟ್ಟೆಗೆ ಹಣ್ಣುಗಳನ್ನು ಪೂರೈಸಲು ಆಗುತ್ತಿಲ್ಲ. ಆದರೆ, ಶ್ರಾವಣ ಮಾಸದಲ್ಲಿ ಜನರು ಎಷ್ಟೇ ದುಬಾರಿ ಇದ್ದರೂ ಬಾಳೆಹಣ್ಣು ಖರೀದಿ ಮಾಡುತ್ತಾರೆಂಬ ದೃಷ್ಟಿಯಿಂದ ವ್ಯಾಪಾರಿಗಳೇ ಬೆಲೆ ಏರಿಕೆ ಮಾಡಿದ್ದಾರೆ ಎಂದು ರೈತರು ಹೇಳಿದ್ದಾರೆ. 

47

ರೈತರು ಬೆಳೆದ ಬಾಳೆಹಣ್ಣನ್ನು ನಗರಕ್ಕೆ ಸಾಗಣೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದದ ಸಾಗಣೆದಾರರಿಗೆ ಪ್ರತಿ ಕೆ.ಜಿ. ಬಾಳೆಹಣ್ಣಿಗೆ 25 ರೂಪಾಯಿಗೆ ನೀಡುತ್ತೇವೆ. ಇಲ್ಲಿಂದ ತೆಗೆದುಕೊಂಡು ಹೋದ ಬಾಳೆಹಣ್ಣನ್ನು ದುಬಾರಿ ಬೆಲೆಗೆ ಮಾರುತ್ತಿದ್ದಾರೆ. ಕಷ್ಟಪಟ್ಟು ಹಣ್ಣು ಬೆಳೆದ ರೈತನಿಗೆ ಶೇ.30 ಲಾಭವೂ ಸಿಗುವುದಿಲ್ಲ. 
 

57

ಬಾಳೆಹಣ್ಣನ್ನು ಮಾರುಕಟ್ಟೆಯ ವ್ಯಾಪಾರಿಗಳ ಮಾಲೀಕತ್ವದ ಸಣ್ಣ ಟ್ರಕ್‌ಗಳಿಗೆ ಲೋಡ್ ಮಾಡಬೇಕು. ಅವರು 20,000 ಕೆ.ಜಿ ಲೋಡ್ ಆಗುವವರೆಗೆ ಅವರು ಹೊರಡುವುದಿಲ್ಲ. ಕೆಲವು ಬಾರಿ ಸ್ಥಳೀಯ ಜಮೀನುಗಳಲ್ಲಿ ಅಷ್ಟು ಇಳುವರಿ ಇರುವುದಿಲ್ಲ. ಇದರಿಂದ ಬಾಳೆಹಣ್ಣು ಇಳುವರಿ ಕಡಿಮೆಯಾಗಿದೆ ಎಂದು ತಮ್ಮಷ್ಟಕ್ಕೆ ತಾವೇ ಮಾರುಕಟ್ಟೆಯಲ್ಲಿನ ಹಣ್ಣಿನ ಮಾರಾಟ ಬೆಲೆ ಹೆಚ್ಚಳ ಮಾಡುತ್ತಾರೆ.

67

ಇನ್ನು ಕೆಲವು ಬಾರಿ ಬಾಳೆಯ ತೋಟದಲ್ಲಿ ಕಟಾವು ಮೂರು ಅಥವಾ ನಾಲ್ಕನೇ ಬಾರಿಗೆ ಆಗುತ್ತಿದ್ದರೆ, 20 ಟನ್‌ಗಟ್ಟಲೇ ಹಣ್ಣುಗಳು ಸಿಗೊಲ್ಲ. ಆಗ, ಕಡಿಮೆಯಿರುವ ಹಣ್ಣನ್ನು ತೆಗೆದುಕೊಂಡು ಹೋಗಲು ಮಾರುಕಟ್ಟೆಯಿಂದ ವಾಹನ ಕಳಿಸದೇ ಇದ್ದಾಗ ಅನ್ಯಾಯವಾಗಿ ಕೊಳೆತು ಹೋಗುತ್ತವೆ. ಆದ್ದರಿಂದ ಬಾಳೆಹಣ್ಣು ಇಳುವರಿ ಕಡಿಮೆ ಆಗಿದೆಯೆಂದು ವ್ಯಾಪಾರಿಗಳು ದಿಢೀರನೆ ಏರಿಕೆ ಮಾಡುತ್ತಿದ್ದಾರೆ.

77

ಚಿತ್ರದುರ್ಗ, ರಾಮನಗರ, ತುಮಕೂರು ಭಾಗದಲ್ಲಿನ ಗುಡ್ಡಗಾಡು ಪ್ರದೇಶಗಳಿಂದ ಬೆಂಗಳೂರು ಕೇವಲ 100-200 ಕಿಮೀ ದೂರದಲ್ಲಿರುವಾಗ, ನಮ್ಮ ಉತ್ಪನ್ನಗಳನ್ನು ಅಲ್ಲಿಗೆ ಸಾಗಿಸಲು ನಮಗೆ ಸಣ್ಣ ಗಾತ್ರದ ಟ್ರಕ್‌ಗಳ ಸಂಘಟಿತ ಸಾರಿಗೆ ಅಗತ್ಯವಿದೆ. ನಮ್ಮ ಕಷ್ಟವನ್ನು ಬಂಡವಾಳ ಮಾಡಿಕೊಳಳುವ ಮಧ್ಯವರ್ತಿಗಳು ನಮಗಿಂದಲೂ ದುಪ್ಪಟ್ಟು ಲಾಭ ಪಡೆಯುತ್ತಾರೆ. 

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬೆಲೆ ಏರಿಕೆ

Latest Videos
Recommended Stories
Recommended image1
ಬೆಂಗಳೂರಲ್ಲಿ ಏಷ್ಯಾದ 2ನೇ ದೊಡ್ಡ 5 ಎಕರೆ ಅಮೆಜಾನ್‌ ಕಚೇರಿ : 7000 ನೌಕರರಿಗೆ ಸ್ಥಳಾವಕಾಶ
Recommended image2
ಚಿನ್ನ- ಬೆಳ್ಳಿಯ ಬೆಲೆ ಬಗ್ಗೆ ಸಚಿವೆ ನಿರ್ಮಲಾರಿಂದ ಭರ್ಜರಿ ಗುಡ್ ನ್ಯೂಸ್ : ಆತಂಕ ಪಡಬೇಡಿ
Recommended image3
ಏಷ್ಯಾದಲ್ಲಿ 2ನೇ ಅತೀದೊಡ್ಡ ಅಮೇಜಾನ್ ಆಫೀಸ್ ಬೆಂಗಳೂರಿನಲ್ಲಿ ಆರಂಭ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved