MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಸಾಲ ಮರುಪಾವತಿಯಲ್ಲಿ ದೇಶದಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ, ಇದು ಕರಾವಳಿಗರ ಪ್ರಾಮಾಣಿಕತೆ

ಸಾಲ ಮರುಪಾವತಿಯಲ್ಲಿ ದೇಶದಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ, ಇದು ಕರಾವಳಿಗರ ಪ್ರಾಮಾಣಿಕತೆ

ಮಂಗಳೂರಿನ ಬೋಳೂರಿನಲ್ಲಿ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನೂತನ ಕಟ್ಟಡ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಕೃಷಿ ಸಾಲ ಮರುಪಾವತಿಯಲ್ಲಿ ಅವಿಭಜಿತ ಕರಾವಳಿ ಜಿಲ್ಲೆ ದೇಶದಲ್ಲೇ ಅಗ್ರಸ್ಥಾನದಲ್ಲಿದೆ  

2 Min read
Author : Gowthami K
Published : Mar 02 2026, 09:25 PM IST
Share this Photo Gallery
  • FB
  • TW
  • Linkdin
  • Whatsapp
16
ದೇಶದಲ್ಲಿಯೇ ಅವಿಭಜಿತ ಕರಾವಳಿ ಜಿಲ್ಲೆ ಅಗ್ರಸ್ಥಾನ
Image Credit : Asianet News

ದೇಶದಲ್ಲಿಯೇ ಅವಿಭಜಿತ ಕರಾವಳಿ ಜಿಲ್ಲೆ ಅಗ್ರಸ್ಥಾನ

ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ 5ನೇ ಬೋಳೂರು ಶಾಖೆಯ ನೂತನ ಸ್ವಂತ ಕಚೇರಿ ಕಟ್ಟಡ ಮತ್ತು ಮುಖ್ಯ ಸಭಾಭವನದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್ . ರಾಜೇಂದ್ರ ಕುಮಾರ್ ಭಾನುವಾರ ನಗರದ ಸುಲ್ತಾನ್ ಬತ್ತೇರಿ ರಸ್ತೆಯ ಬೋಳೂರಿನಲ್ಲಿ ನೆರವೇರಿಸಿದರು. ಈ ವೇಳೆ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕೃಷಿ ಸಾಲ ಮತ್ತು ಸಾಲ ಮರು ಪಾವತಿಯ ವಿಚಾರದಲ್ಲಿ ದೇಶದಲ್ಲಿಯೇ ಅವಿಭಜಿತ ಕರಾವಳಿ ಜಿಲ್ಲೆ ಅಗ್ರಸ್ಥಾನದಲ್ಲಿದ್ದು, ಸಾಲ ಸಿಗದೇ ರೈತರು ಸಂಕಷ್ಟಪಡುವ ಸ್ಥಿತಿ ಇಲ್ಲ ಎಂದರು.

26
ದೇಶದಲ್ಲಿಯೇ ಅಗ್ರಸ್ಥಾನ
Image Credit : Getty

ದೇಶದಲ್ಲಿಯೇ ಅಗ್ರಸ್ಥಾನ

ಕಳೆದ 29 ವರ್ಷಗಳಲ್ಲಿ ಕೃಷಿ ಸಾಲ ಶೇ.100ರಷ್ಟು ಮರು ಪಾವತಿ ಮಾಡುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಈ ಬಗ್ಗೆ ನಬಾರ್ಡ್ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಲು ನಬಾರ್ಡ್ ಕೂಡ ಮುಂದಾಗಿದೆ ಎಂದರು.

Related Articles

Related image1
30 ಸಾವಿರ ಸಂಬಳಕ್ಕೆ 40 ಲಕ್ಷ ಸಾಲ! ಇದು ಜೆನ್‌ Zನ ಡಿಜಿಟಲ್ ಸಾಲದ ಬಲೆಯ 7 ಲಕ್ಷಣ
Related image2
ಮಗಳ ಮದುವೆ, ಬೋರ್‌ವೆಲ್‌ಗಾಗಿ ಮಾಡಿದ 6 ಲಕ್ಷ ರೂ. ಸಾಲ, 120 ಅಡಿ ಟವರ್ ಏರಿ ಸಾಯಲು ಯತ್ನಿಸಿದ ರೈತನ ರಕ್ಷಣೆ
36
ವಾಣಿಜ್ಯ ಬ್ಯಾಂಕ್‌ಗಳ ತವರೂರು
Image Credit : Getty

ವಾಣಿಜ್ಯ ಬ್ಯಾಂಕ್‌ಗಳ ತವರೂರು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬ್ಯಾಂಕ್‌ಗಳ ತವರೂರು. ಆದರೆ ಈಗ ಬಹುತೇಕ ಬ್ಯಾಂಕ್‌ಗಳು ವಿಲೀನಗೊಂಡಿದೆ. ವಾಣಿಜ್ಯ ಬ್ಯಾಂಕಿಂಗ್ ಸಿರಿವಂತರಿಗೆ ಮಾತ್ರ ಸಾಲ ನೀಡುತ್ತವೆ. ಆದರೆ ಸಹಕಾರಿ ಬ್ಯಾಂಕ್‌ಗಳು ಊರಿನ ಪ್ರತಿಯೊಬ್ಬರಿಗೂ ಸುಲಭದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಪ್ರತೀ ಮನೆಗೂ ಬೆಳಕಾಗಿದೆ. ಮಹಿಳೆಯರಿಗೆ ಸಹಕಾರ ಕ್ಷೇತ್ರದ ಮೂಲಕ ಸ್ವಾವಲಂಬಿ ಬದುಕು ನಿರ್ಮಾಣ ಸಾಧ್ಯವಾಗಿದೆ ಎಂದರು.

46
ಸಹಕಾರಿ ಕ್ಷೇತ್ರ ಅವಿಭಜಿತ ಜಿಲ್ಲೆಯಲ್ಲಿ ಪ್ರಗತಿ
Image Credit : Social Media

ಸಹಕಾರಿ ಕ್ಷೇತ್ರ ಅವಿಭಜಿತ ಜಿಲ್ಲೆಯಲ್ಲಿ ಪ್ರಗತಿ

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಇಲ್ಲ. ನಾನು ಕೂಡ ರಾಜಕೀಯಕ್ಕೆ ಬರೋದಿಲ್ಲ. ಈ ವಿಚಾರದಲ್ಲಿ ನಾನು ಯಾವುದೇ ಒತ್ತಡಕ್ಕೂ ಬಗ್ಗುವುದಿಲ್ಲ. ರಾಜಕೀಯ ರಹಿತವಾಗಿ ಸಹಕಾರಿ ಕ್ಷೇತ್ರ ಅವಿಭಜಿತ ಜಿಲ್ಲೆಯಲ್ಲಿ ಪ್ರಗತಿಯನ್ನು ಕಾಣುತ್ತಿದೆ ಎಂದು ಡಾ.ಎಂ.ಎನ್. ಆರ್. ಹೇಳಿದರು.

ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇಂದು ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕ್‌ಗಳಿಗೆ ಮೇಲ್ಪಂಕ್ತಿಯಾಗಿದೆ. ಸಹಕಾರಿ ಬ್ಯಾಂಕ್ ನಡೆಸುವುದು ಸುಲಭದ ಮಾತಲ್ಲ. ಆದರೆ ಸಾಲ ನೀಡುವಿಕೆಯ ವಿಚಾರದಲ್ಲಿ ಸಹಕಾರಿ ಬ್ಯಾಂಕ್‌ಗಳ ಸಾಧನೆ ಅತ್ಯುತ್ತಮವಾಗಿದೆ. ಸಾಕಷ್ಟು ಉದ್ಯಮಿಗಳು ತಮ್ಮ ಉದ್ಯಮವನ್ನು ಬೆಳೆಸಿದ್ದಾರೆ. ಸಾಕಷ್ಟು ಮಂದಿಯ ಜೀವನದಲ್ಲಿ ಸಹಕಾರಿ ಬ್ಯಾಂಕ್‌ಗಳು ಬದಲಾವಣೆ ತಂದಿದೆ ಎಂದರು.

56
ಯಾರೆಲ್ಲ ಇದ್ರು
Image Credit : Asianet News

ಯಾರೆಲ್ಲ ಇದ್ರು

ಇದೇ ಸಂದರ್ಭ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಬ್ಯಾಂಕಿನ ವತಿಯಿಂದ ಸನ್ಮಾನಿಸಲಾಯಿತು. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ ಮುಗ್ರೋಡಿ ಕನ್‌ಸ್ಟ್ರಕ್ಷನ್ ಮಾಲೀಕ ಸುಧಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು. ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಬೋಳೂರು ಜಾರಂದಾಯ ದೈವಸ್ಥಾನದ ಅಧ್ಯಕ್ಷ ಬಲರಾಜ ಸಿ.ಕೋಟ್ಯಾನ್ ಮುಖ್ಯ ಅತಿಥಿಗಳಾಗಿದ್ದರು. ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಭಾಸ್ಕರ ಕೊಂಡೆ, ತುಕಾರಾಂ ಸನಿಲ್, ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಉಪಾಧ್ಯಕ್ಷ ಧನಂಜಯ ಬಂಗೇರ, ನಿರ್ದೇಶಕರಾದ ಪ್ರೇಮ, ನೇಮಿರಾಜ್ ಶೆಟ್ಟಿ, ಶ್ರೀರಂಜಿನಿ, ಸಿತೇಶ್ ಕೊಂಡೆ, ಗಣೇಶ್ ಶೆಟ್ಟಿ, ಶರ್ಮಿಳಾ, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ, ಪ್ರಧಾನ ವ್ಯವಸ್ಥಾಪಕ (ಪ್ರಭಾರ) ಪ್ರೀತಮ್ ಪಿ.ಪೂಜಾರಿ ಇದ್ದರು.

66
5. 42 ಕೋ. ರು. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ
Image Credit : Google

5. 42 ಕೋ. ರು. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ

ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎ.ಲೋಕೇಶ್ ಭಂಡಾರಿ ಸ್ವಾಗತಿಸಿದರು. ನಿರ್ದೇಶಕ ಸುಮಂತ್ ರಾವ್ ವಂದಿಸಿದರು. ರೋಹಿತ್ ಉಳ್ಳಾಲ್ ನಿರೂಪಿಸಿದರು. ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸೇವೆಯೊಂದಿಗೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದೆ. 5. 42 ಕೋ. ರು. ವೆಚ್ಚದಲ್ಲಿ ಹೊಸ ಕಟ್ಟಡ ಹಾಗೂ ಸಭಾಭವನದ ನಿರ್ಮಾಣ ಮಾಡಲಾಗಿದೆ. ಶೇ.18ರಷ್ಟು ಡಿವಿಡೆಂಟ್ ನೀಡಿದೆ. ಬ್ಯಾಂಕ್ ಸಾಕಷ್ಟು ಪ್ರಗತಿಯನ್ನು ಹೊಂದುತ್ತಿದ್ದು, ಉತ್ತಮ ಲಾಭವನ್ನು ಪಡೆಯುತ್ತಿದೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಶ್ಲಾಘಿಸಿದರು.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ದಕ್ಷಿಣ ಕನ್ನಡ
ಬ್ಯಾಂಕ್
ಕೃಷಿ
ಮಂಗಳೂರು
ಉಡುಪಿ
ವ್ಯವಹಾರ

Latest Videos
Recommended Stories
Recommended image1
ಸೌದಿ ಅರೇಬಿಯಾದ ತೈಲ ಸಂಸ್ಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ: ಬ್ರೆಂಟ್ ಕಚ್ಚಾ ತೈಲ ಬ್ಯಾರೆಲ್‌ಗೆ 80 ಡಾಲರ್‌ಗೆ ಏರಿಕೆ
Recommended image2
ಅಬುಧಾಬಿಯಲ್ಲಿ ಫ್ರಾನ್ಸ್‌ನ ನೌಕಾನೆಲೆ ಮೇಲೆ ಇರಾನ್ ಡ್ರೋನ್ ದಾಳಿ: ಇರಾನ್ ಆಕ್ರಮಣದ ವಿರುದ್ಧ ಒಟ್ಟಾದ ಗಲ್ಫ್‌ ರಾಷ್ಟ್ರಗಳು
Recommended image3
ಯುದ್ಧ ವಿದೇಶದಲ್ಲಾದ್ರೂ ತಲೆ ಮೇಲೆ ಕೈಹೊತ್ತು ಕುಳಿತ ಭಾರತೀಯರು, ಷೇರು ಮಾರ್ಕೆಟ್ ನಲ್ಲಿ ಭೂಕಂಪ
Related Stories
Recommended image1
30 ಸಾವಿರ ಸಂಬಳಕ್ಕೆ 40 ಲಕ್ಷ ಸಾಲ! ಇದು ಜೆನ್‌ Zನ ಡಿಜಿಟಲ್ ಸಾಲದ ಬಲೆಯ 7 ಲಕ್ಷಣ
Recommended image2
ಮಗಳ ಮದುವೆ, ಬೋರ್‌ವೆಲ್‌ಗಾಗಿ ಮಾಡಿದ 6 ಲಕ್ಷ ರೂ. ಸಾಲ, 120 ಅಡಿ ಟವರ್ ಏರಿ ಸಾಯಲು ಯತ್ನಿಸಿದ ರೈತನ ರಕ್ಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved