MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Business
  • ಮುಕೇಶ್ ಅಂಬಾನಿ ನಂಬಿಕಸ್ಥ, ಇನ್ಫೋಸಿಸ್ ನಾರಾಯಣ ಮೂರ್ತಿ ಬಲಗೈನಂತಿದ್ದ ಕರಾವಳಿ ಮೂಲದ ವ್ಯಕ್ತಿ!

ಮುಕೇಶ್ ಅಂಬಾನಿ ನಂಬಿಕಸ್ಥ, ಇನ್ಫೋಸಿಸ್ ನಾರಾಯಣ ಮೂರ್ತಿ ಬಲಗೈನಂತಿದ್ದ ಕರಾವಳಿ ಮೂಲದ ವ್ಯಕ್ತಿ!

ರಿಲಯನ್ಸ್ ಇಂಡಸ್ಟ್ರೀಸ್ ಮಂಡಳಿಯು ಹಲವಾರು ದೊಡ್ಡ ಹೆಸರುಗಳನ್ನು ಹೊಂದಿರುವ ದೇಶದ ಅತ್ಯಂತ ಪ್ರತಿಷ್ಠಿತ ಮಂಡಳಿಯಾಗಿದೆ. ಇದರಲ್ಲಿ ಮುಕೇಶ್‌ ಅಂಬಾನಿಯ ನಂಬಿಕಸ್ಥನಾಗಿದ್ದ ವ್ಯಕ್ತಿ ಕರಾವಳಿ ಮೂಲದವರಾಗಿದ್ರು. ಇವರು  ನಾರಾಯಣ ಮೂರ್ತಿ ನಂತರ ಇನ್ಫೋಸಿಸ್ ನೇತೃತ್ವವನ್ನೂ ವಹಿಸಿದ್ರು. 

1 Min read
Vinutha Perla
Published : Oct 27 2023, 08:50 AM IST
Share this Photo Gallery
  • FB
  • TW
  • Linkdin
  • Whatsapp
19

ಮುಕೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಸುಮಾರು 15.35 ಟ್ರಿಲಿಯನ್ ಮಾರುಕಟ್ಟೆ ಬಂಡವಾಳದೊಂದಿಗೆ ಭಾರತದ ಅತ್ಯಂತ ಬೆಲೆಬಾಳುವ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್, ರಿಲಯನ್ಸ್ ರಿಟೇಲ್, ರಿಲಯನ್ಸ್ ಜಿಯೋ ಮತ್ತು ಇತರವುಗಳಂತಹ ಹಲವಾರು ಬೃಹತ್ ಅಂಗಸಂಸ್ಥೆಗಳೊಂದಿಗೆ ದೇಶದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. 

29

ರಿಲಯನ್ಸ್ ಇಂಡಸ್ಟ್ರೀಸ್ ಮಂಡಳಿಯು ಹಲವಾರು ದೊಡ್ಡ ಹೆಸರುಗಳನ್ನು ಹೊಂದಿರುವ ದೇಶದ ಅತ್ಯಂತ ಪ್ರತಿಷ್ಠಿತ ಮಂಡಳಿಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕರ ಮಂಡಳಿಯ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಅಂತಹ ಒಂದು ಹೆಸರು ಕೆ.ವಿ ಕಾಮತ್. ಕೆವಿ ಕಾಮತ್ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪರಿಚಿತ ಹೆಸರು. 

39

ಕುಂದಾಪುರದ ವಾಮನ್ ಕಾಮತ್, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದು, ಅಹಮದಾಬಾದ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ.

49

ಪ್ರಸ್ತುತ ರಿಲಯನ್ಸ್ ಇಂಡಸ್ಟ್ರೀಸ್‌ನಲ್ಲಿ ಇಂಡಿಪೆಂಡೆಂಟ್‌ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ವಿ ಕಾಮತ್ ಅವರನ್ನು 2022ರಲ್ಲಿ 5 ವರ್ಷಗಳ ಕಾಲ ರಿಲಯನ್ಸ್ ಇಂಡಸ್ಟ್ರೀಸ್‌ನ ಸ್ವತಂತ್ರ ನಿರ್ದೇಶಕರಾಗಿ ನೇಮಿಸಲಾಯಿತು. 

59

ಮುಕೇಶ್ ಅಂಬಾನಿ ಅವರು ಜಿಯೋ ಫೈನಾನ್ಶಿಯಲ್ ಸರ್ವಿಸಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಮತ್ ಅವರನ್ನು ನಿಯೋಜಿಸಿದ್ದರು. ಇದಕ್ಕೂ ಮೊದಲು ಕಾಮತ್ 1971 ರಲ್ಲಿ ICICI ನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1988ರಲ್ಲಿ, ಅವರು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಲ್ಲಿ ಕೆಲಸ ಆರಂಭಿಸಿದರು. 

69

1996ರಲ್ಲಿ ಅದರ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ICICIಗೆ ಮರಳಿದರು ಮತ್ತು ಐಸಿಐಸಿಐಗ ಬ್ಯಾಂಕ್‌ಗೆ ವಿಲೀನಗೊಂಡ ನಂತರ, ಐಸಿಐಸಿಐ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿದ್ದರು.

79

2009ರಲ್ಲಿ ನಿವೃತ್ತರಾದರು. 2015ರ ವರೆಗೆ ICICI ಬ್ಯಾಂಕಿನ ಅಧ್ಯಕ್ಷರಾಗಿ ಮುಂದುವರೆದರು. ಕಾಮತ್ ಅವರು ಇನ್ಫೋಸಿಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

89

2015ರಲ್ಲಿ ಅವರು ಬ್ರಿಕ್ಸ್ ದೇಶಗಳು ಸ್ಥಾಪಿಸಿದ ಹೊಸ ಅಭಿವೃದ್ಧಿ ಬ್ಯಾಂಕ್‌ನ ಮೊದಲ ಅಧ್ಯಕ್ಷರಾಗಿ ನೇಮಕಗೊಂಡರು, ಅಲ್ಲಿ 2020 ರಲ್ಲಿ ನಿವೃತ್ತರಾದರು.

99

ಪ್ರಸ್ತುತ ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್‌ನ (NaBFID) ಅಧ್ಯಕ್ಷರಾಗಿದ್ದಾರೆ. ಕಾಮತ್ ಅವರಿಗೆ 2008 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಭೂಷಣವನ್ನು ನೀಡಲಾಯಿತು.

About the Author

VP
Vinutha Perla
ಮುಕೇಶ್ ಅಂಬಾನಿ
ನಾರಾಯಣ ಮೂರ್ತಿ
ಇನ್ಫೋಸಿಸ್
ರಿಲಯನ್ಸ್ ಇಂಡಸ್ಟ್ರೀಸ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved