MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Business
  • ಸಾಲಕ್ಕಾಗಿ ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು ಪಡೆಯಿರಿ 2.5 ಲಕ್ಷ ರೂ ಲೋನ್

ಸಾಲಕ್ಕಾಗಿ ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು ಪಡೆಯಿರಿ 2.5 ಲಕ್ಷ ರೂ ಲೋನ್

ದುಡ್ಡಿನ ಅವಶ್ಯಕತೆ ಬಿದ್ದಾಗ, ಮೈಕ್ರೋಫೈನಾನ್ಸ್ ಸೇರಿದಂತೆ ಇತರ ಅಪಾಯಕಾರಿ ಮಾರ್ಗದ ಮೂಲಕ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕಬೇಡಿ, ಕಡಿಮೆ ಬಡ್ಡಿ ದರದಲ್ಲಿ ಕೇಂದ್ರ ಯೋಜನೆ ಮೂಲಕ ಸಾಲ ಪಡೆಯಲು ಸಾಧ್ಯವಿದೆ ಪಿಎಂ ಸ್ವನಿಧಿ ಸಾಲ ಪಡೆಯಲು ಕೇವಲ ಆಧಾರ್ಡ್ ಕಾರ್ಡ್ ಇದ್ದರೆ ಸಾಕು.  

2 Min read
Chethan Kumar
Published : Feb 02 2025, 03:46 PM IST
Share this Photo Gallery
  • FB
  • TW
  • Linkdin
  • Whatsapp
17
PM SVANidhi ಯೋಜನೆಯಡಿ ಸಾಲ

PM SVANidhi ಯೋಜನೆಯಡಿ ಸಾಲ

ಜೀವನದಲ್ಲಿ ದುಡ್ಡಿನ ಅವಶ್ಯಕತೆ ಇದ್ದೇ ಇರುತ್ತದೆ. ಸಾಲ ರೂಪದಲ್ಲಿ ಹಣ ಪಡೆದು ಕಂತಗಳ ಮೂಲಕ ಪಾವತಿಸುವ ವಿಧಾನವೇ ಭಾರತದ ಬಹುತೇಕರ ಅನುಸರಿಸುವ ವಿಧಾನ. ಆದರೆ ಮೈಕ್ರೋಫೈನ್ಸ್ ಸೇರಿದಂತೆ ಇತರ ಅಪಾಯಾಕಾರಿ ಮಾರ್ಗದ ಮೂಲಕ ಸಾಲ ಪಡೆದು ಬಳಿಕ ಸಂಕಷ್ಟಕ್ಕೆ ಸಿಲುಕಿದ ಘಟನೆಗಳೇ ಹೆಚ್ಚಿದೆ. ಆದರೆ ಕೇಂದ್ರ ಸರ್ಕಾರ ಪಿಎಂ ಸ್ವನಿಧಿ ಯೋಜನೆ ಮೂಲಕ ಸುಲಭವಾಗಿ ಸಾಲ ನೀಡುತ್ತದೆ.  

27
ಕೇಂದ್ರದಿಂದ ಸಾಲ ಯೋಜನೆ

ಕೇಂದ್ರದಿಂದ ಸಾಲ ಯೋಜನೆ

ಸ್ವಲ್ಪ ಹಣದ ಸಾಲ ಬೇಕಾದಾಗ PM SVANidhi ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಅನ್‌‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆದುಕೊಳ್ಳಬಹುದು. ಈ ಯೋಜನೆ ಮೂಲಕ ಗರಿಷ್ಠ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ ಲಭ್ಯವಿದೆ. ಇದು ಹಲವರಿಗೆ ಪ್ರಯೋಜನವಾಗಲಿದೆ. ಕಡಿಮೆ ಬಡ್ಡಿದರ, ಸುಲಭ ಸಾಲಗಳಿಂದ ಜನರು ಸಂಕಷ್ಟಗಳಿಂದ ಹೊರಬರಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆಯಲಿದೆ. 

37

ಪ್ರಧಾನಿ ಸ್ವನಿಧಿ ಯೋಜನೆ ಪ್ರಮುಖವಾಗಿ ರಸ್ತೆ ಬದಿಯಲ್ಲಿ ಚಿಕ್ಕಪುಟ್ಟ ವ್ಯಾಪಾರ ಮಾಡುವವರಿಗಾಗಿ ತರಲಾಗಿದೆ. ಚಿಕ್ಕ ವ್ಯಾಪಾರಿಗಳಿಗೆ ಸಾಲದ ಸೌಲಭ್ಯ ನೀಡಲು ಬ್ಯಾಂಕ್ ಹಿಂದೇಟು ಹಾಕುತ್ತದೆ. ಇನ್ನು ಗ್ಯಾರೆಂಟಿ, ಶ್ಯೂರಿಟಿ ಸೇರಿದಂತೆ ಇತರ ದಾಖಲೆ ಒದಗಿಸಲು ಸಣ್ಣ ವ್ಯಾಪಾರಿಗಳು ವಿಫಲರಾಗುತ್ತಾರೆ. ಕಾರಣ ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳ ವಹಿವಾಟು ಬ್ಯಾಂಕ್ ಮೂಲಕ ಸಾಲ ಪಡೆಯುವ ಮಟ್ಟಕ್ಕೆ ಇರುವುದಿಲ್ಲ. ಆದರೆ ಪ್ರಧಾನಿ ಸ್ವನಿಧಿ ಯೋಜನೆ ಉಪಯುಕ್ತವಾಗಿದೆ. 

47
ಯೋಜನೆ ಆರಂಭ

ಯೋಜನೆ ಆರಂಭ

ಕೊರೋನಾ ಸಮಯದಲ್ಲಿ ಪ್ರಧಾನಿ ಮೋದಿ ಈ ಯೋಜನೆ ಜಾರಿಗೆ ತಂದರು. ಚಿಕ್ಕ ವ್ಯಾಪಾರಿಗಳಿಗೆ ಸಾಲ ಸಿಗುವಂತೆ ಮಾಡಿದರು. ಈ ಯೋಜನೆ ಮೂಲಕ ಹಲವು ಸಣ್ಣ ವ್ಯಾಪಾರಿಗಳು ಸಾಲ ಪಡೆದು ಉದ್ಯಮ ಬೆಳೆಸಿದ್ದಾರೆ. ವ್ಯಾಪಾರ ವಹಿವಾಟು ಹೆಚ್ಚಿಸಿದ್ದಾರೆ. ಸ್ವಾಲಂಬಿ ಬದುಕು ನಡೆಸುತ್ತಿದ್ದಾರೆ. ಸ್ವನಿಧಿ ಯೋಜನೆ ದೇಶದಲ್ಲಿನ ಆರ್ಥಿಕವಾಗಿ ಕುಗ್ಗಿಹೋದ ಸಣ್ಣ ವ್ಯಾಪಾರಿಗಳಿಗೆ ಉಪಯುಕ್ತವಾಗಿದೆ. 

57
ನಿಯಮಗಳು

ನಿಯಮಗಳು

ಕೋರೋನಾ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಸ್ವನಿಧಿ ಯೋಜನೆ ಸಾಲ ಸೌಲಭ್ಯದಲ್ಲಿ ಸೀಮಿತ ಮೊತ್ತವಿತ್ತು. ಆರಂಭದಲ್ಲಿ 10,000 ರೂಪಾಯಿ ಸಾಲ ಸೌಲಭ್ಯ ನೀಡಲಾಗುತ್ತಿತ್ತು. ಆದರೆ ಬಳಿಕ ಸ್ವನಿಧಿ ಸಾಲ ಮೊತ್ತವನ್ನು ಹೆಚ್ಚಿಸಲಾಗಿದೆ. ಇದೀಗ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಹಂತ ಹಂತವಾಗಿ ಈ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 

67
ಹಣ ಮರುಪಾವತಿ

ಹಣ ಮರುಪಾವತಿ

ಮೊದಲ ಕಂತನ್ನು ಸರಿಯಾದ ಸಮಯಕ್ಕೆ ಕಟ್ಟಬೇಕು. ಒಂದು ವರ್ಷದೊಳಗೆ ಸಾಲ ತೀರಿಸಬೇಕು. ಬಡ್ಡಿ ದರ ಕಡಿಮೆ. ಇದರಿಂದ ಮತ್ತೆ ಸಾಲ ಪಡೆಯಲು ಸುಲಭವಾಗುತ್ತದೆ. ಅತೀ ಕಡಿಮೆ ಬಡ್ಡಿ ದರ ಕಾರಣ ಯಾವತ್ತೂ ಹೊರೆಯಾಗುವುದಿಲ್ಲ. ಇನ್ನು ಸಾಲ ಪಡೆಯಲು ಆಧಾರ್, ಮೊಬೈಲ್ ನಂಬರ್ ಮತ್ತು ಬ್ಯಾಂಕ್ ಖಾತೆ ಇರಬೇಕು. ಇಷ್ಟಿದ್ದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆಯಬಹುದು. 

77
ಎಲ್ಲಿ ಅರ್ಜಿ ಸಲ್ಲಿಸಬೇಕು?

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆನ್‌ಲೈನ್ ಅಥವಾ CSC ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಬಡ್ಡಿ ದರ ಸಾಲ ಪಡೆಯುವ ಸಮಯದಲ್ಲಿ ನಿರ್ಧಾರವಾಗುತ್ತದೆ. ಆಧಾರ್ ಕಾರ್ಡ್ ಇದ್ದವರು ಯಾರೇ ಆದರೂ ಅರ್ಜಿ ಸಲ್ಲಿಸಬಹುದು. ಬೇರೆ ಕಡೆ ಸಾಲ ಪಡೆದರೆ ಬೇಗ ಹಣ ವಾಪಸ್ ಕೊಡಬೇಕಾಗುತ್ತದೆ. ಆದರೆ PM SVANidhi ಯೋಜನೆಯಲ್ಲಿ 12 ತಿಂಗಳುಗಳ ಅವಧಿ ಇರುತ್ತದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved