MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಕಣ್ಣೀರಿನ ಕುಟಂಬಕ್ಕೆ ಕೇಂದ್ರದ ಬಜೆಟ್ ಗಿಫ್ಟ್, ರಸ್ತೆ ಅಪಘಾತ ಸಂತ್ರಸ್ತರ ಪರಿಹಾರಕ್ಕೆ ಶೂನ್ಯ ತೆರಿಗೆ

ಕಣ್ಣೀರಿನ ಕುಟಂಬಕ್ಕೆ ಕೇಂದ್ರದ ಬಜೆಟ್ ಗಿಫ್ಟ್, ರಸ್ತೆ ಅಪಘಾತ ಸಂತ್ರಸ್ತರ ಪರಿಹಾರಕ್ಕೆ ಶೂನ್ಯ ತೆರಿಗೆ

ಕಣ್ಣೀರಿನ ಕುಟಂಬಕ್ಕೆ ಕೇಂದ್ರದ ಬಜೆಟ್ ಗಿಫ್ಟ್, ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಜನ ಸಾಮಾನ್ಯರಿಗೆ ಭರ್ಜರಿ ವಿನಾಯಿತಿ ನೀಡಿದೆ. ಈ ಪೈಕಿ ಸಂಕಷ್ಟದಲ್ಲಿರುವ ಕುಟುಂಬದ ನೆರವಿಗೂ ಹೊಸ ಪದ್ಧತಿ ಘೋಷಿಸಲಾಗಿದೆ. 

1 Min read
Author : Chethan Kumar
Published : Feb 01 2026, 04:55 PM IST
Share this Photo Gallery
  • FB
  • TW
  • Linkdin
  • Whatsapp
15
ಈ ಬಾರಿಯ ಬಜೆಟ್‌ನಲ್ಲಿ ಭರ್ಜರಿ ಘೋಷಣೆ
Image Credit : ANI

ಈ ಬಾರಿಯ ಬಜೆಟ್‌ನಲ್ಲಿ ಭರ್ಜರಿ ಘೋಷಣೆ

ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ 9ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಈ ಬಾರಿಯ ಬಜೆಟ್ ಕುರಿತು ವಿಶ್ಲೇಷಣೆಗಳು ನಡೆಯುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಸಚಿವರು, ಬಿಜೆಪಿ ನಾಯಕರು ನಿರ್ಮಲಾ ಸೀತಾರಾಮನ್ ಬಜೆಟ್‌ಗೆ ಭಾರಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೆಲ ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಈ ಪೈಕಿ ಸಂಕಷ್ಟದಲ್ಲಿರುವ ಕುಟುಂಬಗಳ ಕಣ್ಣೀರಿನಲ್ಲಿ ತೆರಿಗೆ ವಸೂಲಿ ಮಾಡುವ ಸ್ವಾತಂತ್ರ್ಯ ಭಾರತದಿಂದ ಇದ್ದ ನೀತಿಗೆ ಬ್ರೇಕ್ ಹಾಕಲಾಗಿದೆ.

25
ಅಪಘಾತ ಸಂತ್ರಸ್ತರ ಪರಿಹಾರ
Image Credit : X

ಅಪಘಾತ ಸಂತ್ರಸ್ತರ ಪರಿಹಾರ

ರಸ್ತೆ ಅಪಘಾತದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರು, ಅವರ ಕುಟುಂಬಗಳಿಗೆ ನೆರವಾಗುವ ಹಾಗೂ ಜೊತೆಯಾಗಿ ನಿಲ್ಲುವ ಈ ಬಾರಿಯ ಬಜೆಟ್‌ನಲ್ಲಿ ಮಾಡಲಾಗಿದೆ. ರಸ್ತೆ ಅಪಘಾತದಲ್ಲಿನ ಸಂತ್ರಸ್ತರು, ಮಡಿದ ಕುಟುಂಬಕ್ಕೆ ನೀಡುವ ಪರಿಹಾರದ ಮೇಲಿನ ತೆರಿಗೆಯನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ. ಈ ಮೂಲಕ ಮಹತ್ವದ ನಿರ್ಧಾರವನ್ನು ಮೋದಿ ಸರ್ಕಾರ ತೆಗೆದುಕೊಂಡಿದೆ.

Related Articles

Related image1
Union Budget 2026: ಭಾರತದ ಆರ್ಥಿಕತೆಯ ಚಿತ್ರಣ ಬದಲಿಸಲಿರುವ 10 ಮಹತ್ವದ ಘೋಷಣೆಗಳು
Related image2
Union Budget 2026: ಆದಾಯ ತೆರಿಗೆಯಲ್ಲಿ ಬದಲಾವಣೆಯಿಲ್ಲ, ಏ.1 ರಿಂದ ಹೊಸ ಕಾಯ್ದೆ ಜಾರಿ, ಐಟಿಆರ್‌ ಬಗ್ಗೆ ಮಹತ್ವದ ಘೋಷಣೆ
35
ಅಪಘಾತ ಪರಿಹಾರ ತೆರಿಗೆ
Image Credit : X

ಅಪಘಾತ ಪರಿಹಾರ ತೆರಿಗೆ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬ, ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡುತ್ತದೆ. ಈ ಪರಿಹಾರ ಸಂತ್ರಸ್ರರ ಕೈಸೇರುವಾಗ ತೆರಿಗೆ ಕಡಿತಗೊಳ್ಳಲಿದೆ. ಸದ್ಯ 50,000 ರೂಪಾಯಿ ವರೆಗಿನ ಪರಿಹಾರ ಮೊತ್ತಕ್ಕೆ ಶೇಕಡಾ 10ರಷ್ಟು ತೆರಿಗೆ ವಿಧಿಸಲಾಗುತ್ತದೆ. ಈ ತೆರಿಗೆ ಇನ್ನು ಇರುವುದಿಲ್ಲ. ಸರ್ಕಾರ ಘೋಷಿಸಿದ ಸಂಪೂರ್ಣ ಮೊತ್ತ ಸಂತ್ರಸ್ತರ ಕೈಸೇರಲಿದೆ.

45
ತೆರಿಗೆಯಿಂದ ಹಲವರಿಗೆ ಸಮಸ್ಯೆ
Image Credit : Asianet News

ತೆರಿಗೆಯಿಂದ ಹಲವರಿಗೆ ಸಮಸ್ಯೆ

ಲಕ್ಷ ರೂಪಾಯಿ ಪರಿಹಾರಕ್ಕೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ಉದಾಹರಣೆಗೆ 2 ಲಕ್ಷ ರೂಪಾಯಿ ಸರ್ಕಾರ ಹರಿಹಾರ ನೀಡಿದರೆ ಅದರಲ್ಲಿ 20,000 ರೂಪಾಯಿ ತೆರಿಗೆ ರೂಪದಲ್ಲಿ ಕಡಿತಗೊಳ್ಳಲಿದೆ. ಇದರಿಂದ ಗಾಯಗೊಂಡವರ ಚಿಕಿತ್ಸೆಗಾಗಿ ಮತ್ತೆ ಪರದಾಡುವಂತಾಗುತ್ತದೆ. ಹೀಗಾಗಿ ಈ ತೆರಿಗೆ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ.

55
ಸಂತ್ರಸ್ತ ಕುಟುಂಬಕ್ಕೆ ನೆರವು
Image Credit : Getty

ಸಂತ್ರಸ್ತ ಕುಟುಂಬಕ್ಕೆ ನೆರವು

ಸರ್ಕಾರದ ಹೊಸ ತೆರಿಗೆ ನೀತಿಯಿಂದ ಸರ್ಕಾರಕ್ಕೆ ನೆರವಾಗಲಿದೆ. ರಸ್ತೆ ಅಪಘಾತ ಪ್ರಮಾಣ ತಗ್ಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭಾರಿ ಹೋರಾಟ ಮಾಡುತ್ತಿದೆ. ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಮನವಿ ಮಾಡುತ್ತಿದೆ. ಆದರೂ ರಸ್ತೆ ಅಪಘಾತದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಕೇಂದ್ರ ಸರ್ಕಾರ ಪರಿಹಾರ ಮೇಲಿನ ತೆರಿಗೆ ಕಡಿತಗೊಳಿಸಿ ಸಂತ್ರಸ್ತ ಕುಟುಂಬಗಳ ಸಮಾಧಾನಕ್ಕೆ ಕಾರಣಾಗಿದೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ತೆರಿಗೆ
ಭಾರತ ಸುದ್ದಿ
ವ್ಯವಹಾರ
ಕೇಂದ್ರ ಬಜೆಟ್ 2026

Latest Videos
Budget 2026 : SIP Calculator
Monthly Investment
₹
Expected Annual Return
%
Investment Duration
Yr
Recommended Stories
Recommended image1
Union Budget 2026: ಸಚಿವರ ವೇತನಕ್ಕೆ 1,102 ಕೋಟಿ ರೂ. ಮೀಸಲು: ಬಜೆಟ್‌ನಲ್ಲಿ ಆಡಳಿತಾತ್ಮಕ ವೆಚ್ಚ ಭಾರಿ ಏರಿಕೆ!
Recommended image2
ದಶಕದ ಬಳಿಕ ಚಾಬಹಾರ್ ಪೋರ್ಟ್‌ಗೆ ಒಂದು ಪೈಸೆಯನ್ನೂ ಮೀಸಲಿಡದ ಭಾರತ, ಬಾಂಗ್ಲಾದೇಶಕ್ಕೆ ಸಹಾಯ ಅರ್ಧದಷ್ಟು ಇಳಿಕೆ!
Recommended image3
Union Budget 2026: ವಿಬ್‌-ಜಿ-ರಾಮ್‌-ಜಿಗೆ 95,692 ಕೋಟಿ ಮೀಸಲಿಟ್ಟ ಕೇಂದ್ರ, ಜಲ್‌ ಜೀವನ್‌ ಮಿಷನ್‌ಗೆ 67,670 ಕೋಟಿ
Related Stories
Recommended image1
Union Budget 2026: ಭಾರತದ ಆರ್ಥಿಕತೆಯ ಚಿತ್ರಣ ಬದಲಿಸಲಿರುವ 10 ಮಹತ್ವದ ಘೋಷಣೆಗಳು
Recommended image2
Union Budget 2026: ಆದಾಯ ತೆರಿಗೆಯಲ್ಲಿ ಬದಲಾವಣೆಯಿಲ್ಲ, ಏ.1 ರಿಂದ ಹೊಸ ಕಾಯ್ದೆ ಜಾರಿ, ಐಟಿಆರ್‌ ಬಗ್ಗೆ ಮಹತ್ವದ ಘೋಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved