MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಅಭಿಷೇಕ್ ಐಶ್ವರ್ಯಗೆ ಸೆಪ್ಟೆಂಬರ್ ವರೆಗೆ ಗಂಡಾಂತರ ಎಂದ ಜ್ಯೋತಿಷಿ, ವೈಮನಸ್ಸಿಗೆ ಕಾರಣ ಬಹಿರಂಗ

ಅಭಿಷೇಕ್ ಐಶ್ವರ್ಯಗೆ ಸೆಪ್ಟೆಂಬರ್ ವರೆಗೆ ಗಂಡಾಂತರ ಎಂದ ಜ್ಯೋತಿಷಿ, ವೈಮನಸ್ಸಿಗೆ ಕಾರಣ ಬಹಿರಂಗ

ಅಭಿಷೇಕ್ ಹಾಗೂ ಐಶ್ವರ್ಯ ರೈ ಬಚ್ಚನ್ ನಡುವೆ ಕೇಳಿಬಂದ ದಾಂಪತ್ಯ ಕಲಹ ಸದ್ಯ ತಣ್ಣಗಾಗಿದೆ. ಇಬ್ಬರು ಜೊತೆಯಾಗಿಕಾಣಿಸಿಕೊಂಡು ಉತ್ತರ ನೀಡಿದ್ದರು. ಆದರೆ ಇವರ ಸಮಸ್ಯೆ ಬಗೆಹರಿದಿಲ್ಲ ಎನ್ನುತ್ತಿದ್ದಾರೆ ಜ್ಯೋತಿಷಿ. ಸೆಪ್ಟೆಂಬರ್ ವರೆಗೆ ಗಂಡಾಂತರ ಇದೆ ಎಂದಿದ್ದಾರೆ. ಇದೇ ವೇಳೆ ಇವರ ವೈಮನಸ್ಸಿಕೆ ಕಾರಣ ಏನು ಅನ್ನೋದು ಬಹಿರಂಗಪಡಿಸಿದ್ದಾರೆ. 

2 Min read
Chethan Kumar
Published : Apr 17 2025, 04:38 PM IST| Updated : Apr 17 2025, 05:10 PM IST
Share this Photo Gallery
  • FB
  • TW
  • Linkdin
  • Whatsapp
16

ಬಾಲಿವುಡ್ ಸೆಲೆಬ್ರೆಟಿ ಜೋಡಿಗಳ ಪೈಕಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ಬಚ್ಚನ್ ಹೆಚ್ಚು ಜನಪ್ರಿಯ.ಆದರೆ ಕಳೆದ ಹಲವು ತಿಗಂಗಳಲ್ಲಿ ಈ ಜೋಡಿ ದಾಂಪತ್ಯ ಕಲಹದ ಕುರಿತು ನೋವು ಎದುರಿಸಿದ್ದಾರೆ. ಅಭಿಷೇಕ್ ಹಾಗೂ ಐಶ್ವರ್ಯ ದಾಂಪತ್ಯ ಜೀವನ ಸುಖಕರವಾಗಿಲ್ಲ,  ಇಬ್ಬರು ಬೇರೆಯಾಗುತ್ತಿದ್ದಾರೆ ಅನ್ನೋ ವರದಿಗಳು ಕೇಳಿಬಂದಿತ್ತು. ಕಳೆದ ಕೆಲ ದಿನಗಳಿಂದ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡು ಈ ಊಹಾಪೋಹಗಳಿಗೆ ಬ್ರೇಕ್ ಹಾಕಿತ್ತು. ಆದರೆ ಇವರ ಸಂಬಂಧ, ದಾಂಪತ್ಯ ಜೀವನದ ಸಮಸ್ಯೆ ಮುಗಿದಿಲ್ಲ ಎಂದು ಖ್ಯಾತ ಸಂಖ್ಯಾಶಾಸ್ತ್ರ ಜ್ಯೋತಿಷಿ ಹೇಳಿದ್ದಾರೆ.

26

ಖ್ಯಾತ ಸಂಖ್ಯಾಶಾಸ್ತ್ರ ಜ್ಯೋತಿಷಿ ಗೀತಾಂಜಲಿ ಸಕ್ಸೇನ್ ಇತ್ತೀಚೆಗೆ ಸಿದ್ದಾರ್ಥ ಖನ್ನಾ ನಡೆಸಿಕೊಡುವ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ.ಈ ವೇಳೆ ಹಲವು ಬಾಲಿವುಡ್ ಸೆಲೆಬ್ರೆಟಿಗಳ ರಿಲೇಶನ್‌ಶಿಪ್ ಕುರಿತು ಭವಿಷ್ಯ ನುಡಿದಿದ್ದಾರೆ. ಈ ಪೈಕಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ. ಡಾ.ಗೀತಾಂಜಲಿ ಸಕ್ಸೇನಾ ಪ್ರಕಾರ, ಸದ್ಯ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ದಾಂಪತ್ಯ ಕಲಹ ತಣ್ಣಾಗಾಗಿದ್ದರೂ ಅವರ ಕಂಟಕ ಸೆಪ್ಟೆಂಬರ್ ತನಕ ಮುಂದುವರಿಯಲಿದೆ ಎಂದಿದ್ದಾರೆ.

36

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ಅವರ ಕುಂಡಲಿ, ಸಂಖ್ಯೆಗಳ ಪ್ರಕಾರ ಸೆಪ್ಟೆಂಬರ್ ವರಗೆ ಗಂಡಾಂತರ ಇದೆ. ಸೆಪ್ಟೆಂಬರ್ ವರೆಗೆ ಈ ಜೋಡಿ ಎಲ್ಲವನ್ನೂ ನಿಭಾಯಿಸಿದರೆ, ತಾಳ್ಮೆಯಿಂದ ಇದ್ದರೆ ಮುಂದಿನ ಬದುಕು ಸುಂದರ ವಾಗಲಿದೆ ಎಂದಿದ್ದಾರೆ. ಸೆಪ್ಟೆಂಬರ್ ವರೆಗೆ ಈ ಜೋಡಿ ಹಲವು ಸಮಸ್ಯೆಗಳನ್ನು ಮಾನಸಿಕವಾಗಿ ಎದುರಿಸಲಿದ್ದಾರೆ. ಈ ಕಠಿಣ ಪರಿಸ್ಥಿತಿಯಲ್ಲಿ ಜೊತೆಯಾಗಿದ್ದರೆ ಮುಂದಿನ ಬಾಳು ಸುಂದರವವಾಗಲಿದೆ  ಎಂದಿದ್ದಾರೆ.

46

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ನಡುವಿನ ದಾಂಪತ್ಯ ಕಲಹಕ್ಕೆ ಭಾವನಾತ್ಮಕ ಕಾರಣಗಳಿಲ್ಲ. ಇದು ಆರಂಭಗೊಂಡಿದ್ದು ಆರ್ಥಿಕವಾಗಿ ಕೆಲ ವಾದ ವಿವಾದಗಳ ಮೂಲಕ ಎಂದು ಡಾ.ಗೀತಾಂಜಲಿ ಸಕ್ಸೇನಾ ಭವಿಷ್ಯ ನುಡಿದಿದ್ದಾರೆ. ಇದರ ಜೊತೆಗೆ ಕೂಡು ಕುಟುಂಬದ ಮಾನಸಿಕ ಸಮಸ್ಯೆಗಳು, ಕೆಲ ಅಡೆ ತಡೆಗಳು, ರೀತು ರಿವಾಜು, ಮಾತುಗಳು ಸೇರಿಕೊಂಡಿದೆ. ಇದರಿಂದ ದಾಂಪತ್ಯ ಕಲಹ ಹೆಚ್ಚಾಗಿತ್ತು ಎಂದಿದ್ದಾರೆ.

56

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ಬಚ್ಚನ್ ಅವರ ಮುಂದಿನ ಬದುಕು ಸುಂದರವಾಗಲು ಡಾ.ಗೀತಾಂಜಲಿ ಸಕ್ಸೇನಾ ಕೆಲ ಸಲಹೆ ನೀಡಿದ್ದಾರೆ. ಈ ಪೈಕಿ ಪ್ರಮುಖವಾಗಿ ಈ ಜೋಡಿ ಕೂಡು ಕುಟುಂಬ ಬಿಟ್ಟು ಪ್ರತ್ಯೇಕವಾಗಬೇಕು ಎಂದಿದ್ದಾರೆ. ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಹಾಗೂ ಪುತ್ರಿ ಆರಾಧ್ಯ ಬೇರೆ ನೆಲೆಸಬೇಕು ಎಂದಿದ್ದಾರೆ. ಇದು ಇವರ ಅರ್ಧ ಸಮಸ್ಯೆಗೆ ಪರಿಹಾರ ನೀಡಲಿದೆ ಎಂದಿದ್ದಾರೆ.

66

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ನಡುವಿನ ದಾಂಪತ್ಯ ಕಲಹ ಕುರಿತು ಹಲವು ಮಾಹಿತಿಗಳು ಹರಿದಾಡಿದೆ. ಈ ಪೈಕಿ ಅಭಿಷೇಕ್ ಬಚ್ಚನ್ ಅಕ್ರಮಾಗಿ ಸಹ ನಟಿ ನಿಮ್ರತ್ ಕೌರ್ ಜೊತೆ ಸಂಬಂಧ ಹೊಂದಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದೇ ಕಾರಣದಿಂದ ಜಗಳ ಶುರುವಾಗಿದೆ ಎಂದು ಹೇಳಲಾಗುತ್ತಿತ್ತು.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಬಾಲಿವುಡ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved