MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಸುದೀಪ್‌ ರೆಡ್ಡಿ ವಂಗಾ ಸ್ಪಿರಿಟ್‌ ಟೀಮ್‌ನಿಂದ ದೀಪಿಕಾ ಪಡುಕೋಣೆ ಔಟ್‌: ಕಾರಣವೇನು ಗೊತ್ತಾ?

ಸುದೀಪ್‌ ರೆಡ್ಡಿ ವಂಗಾ ಸ್ಪಿರಿಟ್‌ ಟೀಮ್‌ನಿಂದ ದೀಪಿಕಾ ಪಡುಕೋಣೆ ಔಟ್‌: ಕಾರಣವೇನು ಗೊತ್ತಾ?

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆಯ ಅತಿಯಾದ ಬೇಡಿಕೆಯಿಂದ ಬೇಸತ್ತು ಅವರನ್ನು ತಂಡದಿಂದ ಹೊರಹಾಕಲಾಗಿದೆ. ಹೊಸ ನಾಯಕಿಗೆ ಶೋಧ ನಡೆಯುತ್ತಿದೆ.

1 Min read
Kannadaprabha News
Published : May 23 2025, 10:19 AM IST| Updated : May 23 2025, 10:20 AM IST
Share this Photo Gallery
  • FB
  • TW
  • Linkdin
  • Whatsapp
16

‘ಅನಿಮಲ್‌’ ಖ್ಯಾತಿಯ ನಿರ್ದೇಶಕ ಸುದೀಪ್‌ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್‌’ ಚಿತ್ರದಿಂದ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಹೊರಬಿದ್ದಿದ್ದಾರೆ.

26

‘ನಟಿಯ ಅತಿಯಾದ ಬೇಡಿಕೆಯಿಂದ ಬೇಸತ್ತು ಅವರನ್ನು ತಂಡದಿಂದ ಹೊರಹಾಕಲಾಗಿದೆ. ಹೊಸ ನಾಯಕಿಗೆ ಶೋಧ ನಡೆಯುತ್ತಿದೆ’ ಎಂದು ‘ಸ್ಪಿರಿಟ್‌’ ಸಿನಿಮಾ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Related Articles

Related image1
ದೀಪಿಕಾರಿಂದ ಅನುಷ್ಕಾ ಶರ್ಮಾವರೆಗೂ ಬಾಲಿವುಡ್‌ನಲ್ಲಿ 100 ಕೋಟಿ ಕ್ಲಬ್‌ನಲ್ಲಿ ಸ್ಥಾನ ಪಡೆದ ನಟಿಯರಿವರು!
Related image2
ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇನಾ: ಏನಿದು ಸ್ಪಿರಿಟ್‌?
36

‘ದೀಪಿಕಾ ಅವರು ಸುಮಾರು 40 ಕೋಟಿ ರು.ಗಳಷ್ಟು ಸಂಭಾವನೆ ಪಡೆದಿದ್ದರೂ ಕೇವಲ 6 ಗಂಟೆಯಷ್ಟೇ ಶೂಟ್‌ನಲ್ಲಿ ಭಾಗವಹಿಸುತ್ತಾರಂತೆ, ಸಿನಿಮಾ ಚಿತ್ರೀಕರಣ 100 ದಿನ ದಾಟಿದರೆ ಅವರಿಗೆ ಎಕ್ಸ್ಟ್ರಾ ಸಂಭಾವನೆ ಕೊಡಬೇಕಂತೆ. ನಟಿಯ ಈ ಬೇಡಿಕೆಗಳು ನಿರ್ದೇಶಕ ವಂಗಾ ಅವರಿಗೆ ಬೇಸರ ತರಿಸಿದೆ. 
 

46

ಹೀಗಾಗಿ ಅವರು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ’ ಎಂದು ಮೂಲಗಳು ಹೇಳಿವೆ. ‘ಸ್ಪಿರಿಟ್‌’ ಥ್ರಿಲ್ಲರ್‌ ಪೊಲೀಸ್‌ ಸ್ಟೋರಿಯಾಗಿದ್ದು ಪ್ರಭಾಸ್‌ ನಾಯಕನಾಗಿದ್ದಾರೆ.
 

56

ನಟಿ ದೀಪಿಕಾ ಪಡುಕೋಣೆ ಕೂಡ ಈಗ ಮೊದಲಿಗಿಂತ ಹೆಚ್ಚು ಚೂಸಿ ಆಗಿದ್ದಾರೆ. ಅಳೆದು ತೂಗಿ ಪಾತ್ರ ಇಷ್ಟವಾದರೆ ಮಾತ್ರ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಕಾರಣ, ಸಿನಿಮಾ ನಟನೆಗೆ ಬಂದ ಪ್ರಾರಂಭದಲ್ಲಿ ಆಯ್ಕೆಗೆ ಅವಕಾಶ ಇರಲಿಲ್ಲ. 

66

ಬಂದ ಸಿನಿಮಾಗಳನ್ನೆಲ್ಲಾ ಒಪ್ಪಿಕೊಂಡು ಮಾಡುವ ಅನಿವಾರ್ಯತೆ ಇರುತ್ತಿತ್ತು. ಆದರೆ ಈಗ ಹಾಗಲ್ಲ, ಇಷ್ಟವಾದರೆ ಮಾತ್ರ ಒಪ್ಪಿಕೊಂಡು ಮಾಡುವ ಹಂತಕ್ಕೆ ಬೆಳೆದಿದ್ದಾರೆ. ಸದ್ಯ ಅವರು ನಟ ಶಾರುಖ್ ಖಾನ್ ಹಾಗೂ ಪ್ರಭಾಸ್ ಜೋಡಿಯಾಗಿ ಮಾತ್ರ ಸಿನಿಮಾ ಮಾಡುವ ಹಂತಕ್ಕೆ ಬಂದಿದ್ದಾರೆ. 
 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ದೀಪಿಕಾ ಪಡುಕೋಣೆ
ಪ್ರಭಾಸ್
ಬಾಲಿವುಡ್
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved