MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಬಾಲಿವುಡ್ ತಾರೆಯರು

ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಬಾಲಿವುಡ್ ತಾರೆಯರು

ಅಯೋಧ್ಯೆ ರಾಮ ಮಂದಿರದಲ್ಲಿ ಹಿಂದೂಗಳ ಅರಾಧ್ಯ ದೈವ ರಾಮನ ಪ್ರತಿಷ್ಠಾಪನೆಯಾಗಿದೆ. ದೇಶದ ಮೂಲೆ ಮೂಲೆಯಿಂದ ಬಂದ ಸಾವಿರಾರು ಸಾಧುಗಳ ಜೊತೆ ಬಾಲಿವುಡ್‌ ಹಾಗೂ ಭಾರತೀಯ ವಿವಿಧ ಚಿತ್ರರಂಗದ ನಟ ನಟಿಯರು ಕೂಡ ಈ ಮಂದಿರ ಉದ್ಘಾಟನೆಗೆ ಸಾಕ್ಷಿಯಾದರು. 

1 Min read
Anusha Kb
Published : Jan 22 2024, 01:09 PM IST| Updated : Jan 22 2024, 01:19 PM IST
Share this Photo Gallery
  • FB
  • TW
  • Linkdin
  • Whatsapp
18

ಬಾಲಿವುಡ್‌ ನಟರಾದ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ದಂಪತಿ ಸಮೇತರಾಗಿ ಆಯೋಧ್ಯೆಗೆ ಆಗಮಿಸಿ ಶ್ರೀರಾಮನ ಈ ವೈಭವದ ಕ್ಷಣಕ್ಕೆ ಸಾಕ್ಷಿಯಾದರು.

28

ಬಹುತೇಕ ಎಲ್ಲಾ ನಟ ನಟಿಯರು ಈ ಐತಿಹಾಸಿಕ ಕ್ಷಣಕ್ಕೆ ಸಂಪ್ರದಾಯಿಕ ಧಿರಿಸಿನಲ್ಲಿ ಆಗಮಿಸಿದ್ದು, ಆಲಿಯಾ ಭಟ್ ನೀಲಿ ಬಣ್ಣದ ಸೀರೆ ಧರಿಸಿ ಸೆರಗನ್ನು ಹೊದ್ದು ಕಾಣಿಸಿಕೊಂಡರೆ ಪತಿ ರಣ್‌ಬೀರ್ ಕ್ರೀಮ್ ಕಲರ್ ಬಣ್ಣದ ಕುರ್ತಾ ಧರಿಸಿದ್ದರು. 

38

ಹಾಗೆಯೇ ಬಾಲಿವುಡ್‌ ಹಿರಿಯ ನಟ ಅಮಿತಾಭ್ ಬಚ್ಚನ್ ಕೂಡ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಮಗ ನಟ ಅಭಿಷೇಕ್ ಬಚ್ಚನ್ ಜೊತೆ ಆಗಮಿಸಿದ ಅಮಿತಾಭ್ ವಿಐಪಿಗಳಿಗೆ ಮೀಸಲಿರಿಸಿದ ಸ್ಥಳದಲ್ಲಿ ಕುಳಿತು ಕುತೂಹಲದಿಂದ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿದರು. 

48

ಹಾಗೆಯೇ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡ ತಮ್ಮ ಪತ್ನಿ ಜೊತೆ ಈ ಶುಭ ಸಮಾರಂಭದಲ್ಲಿ ಭಾಗಿಯಾಗಿದ್ದು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಮ ಮಂದಿರದ ಜೊತೆಗಿನ ಸೆಲ್ಫಿ ಶೇರ್ ಮಾಡಿಕೊಂಡಿದ್ದಾರೆ. 

58

ಹಾಗೆಯೇ ಬಾಲಿವುಡ್‌ನ ಮತ್ತೊಂದು ಖ್ಯಾತ ಜೋಡಿ ಕತ್ರೀನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಕೂಡ ಈ ಶುಭ ಸಮಾರಂಭಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದರು. 

68

90 ರ ದಶಕದ ಬಾಲಿವುಡ್ ನಟಿ ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್ ಕೂಡ ಪತಿ ಶ್ರೀರಾಮ್ ನೇನೆ ಜೊತೆ ಈ ಶುಭ ಸಮಾರಂಭಕ್ಕೆ ಆಗಮಿಸಿ  ಶ್ರೀರಾಮನ ವೈಭವವನ್ನು ಕಣ್ತುಂಬಿಕೊಂಡರು. 

78

ಟಾಲಿವುಡ್‌ ಸೂಪರ್‌ ಸ್ಟಾರ್ ಚಿರಂಜೀವಿ, ತಮ್ಮ ಪತ್ನಿ  ಸುರೇಖಾ ಕೊನ್ನಿಡೆಲ್ಲಾ ಹಾಗೂ ಪುತ್ರ ಟಾಲಿವುಡ್ ನಟ ರಾಮ್‌ಚರಣ್ ಜೊತೆ ಆಗಮಿಸಿ ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.

88

ಹಾಗೆಯೇ ಕನ್ನಡದ ನಟ ನಿರ್ದೇಶಕ ರಿಷಭ್ ಶೆಟ್ಟಿ ಹಾಗೂ ಪತ್ನಿ  ಪ್ರಗತಿ ಶೆಟ್ಟಿ ಜೊತೆ ರಾಮ ಮಂದಿರದ ಈ ವೈಭವಕ್ಕೆ ಸಾಕ್ಷಿಯಾದರು. ರಾಮಲಲ್ಲಾನ ಮೂರ್ತಿ ಕೆತ್ತಿದ್ದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ ಜೊತೆ ಸೆಲ್ಫಿ ತೆಗೆದುಕೊಂಡು ದಂಪತಿ ಸಂಭ್ರಮಿಸಿದರು.

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved