MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • Krishna Death; ದುಃಖದಲ್ಲಿರುವ ಮಹೇಶ್ ಬಾಬುನ ತಬ್ಬಿ ಧೈರ್ಯ ತುಂಬಿದ ರಾಮ್, ಅಲ್ಲು, ಚಿರು ಮತ್ತು Jr.NTR

Krishna Death; ದುಃಖದಲ್ಲಿರುವ ಮಹೇಶ್ ಬಾಬುನ ತಬ್ಬಿ ಧೈರ್ಯ ತುಂಬಿದ ರಾಮ್, ಅಲ್ಲು, ಚಿರು ಮತ್ತು Jr.NTR

ತಂದೆಯ ಪಾರ್ಥಿವ ಶರೀರದ ಮುಂದೆ ಕುಳಿತು ಮಹೇಶ್ ಬಾಬು ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಅಪ್ಪನ್ನು ನೋಡಿ ಕಣ್ಣೀರಾಕುತ್ತಿದ್ದ ಮಹೇಶ್ ಬಾಬು ಅವರಿಗೆ ಟಾಲಿವುಡ್ ಸ್ಟಾರ್ ಧೈರ್ಯ ತುಂಬಿದ್ದಾರೆ. ಕೃಷ್ಣ ಅವರ ಅಂತಿಮ ದರ್ಶನ ಪಡೆದ ಟಾಲಿವುಡ್ ಗಣ್ಯರು ಮಹೇಶ್ ಬಾಬು ಅವರನ್ನು ತಬ್ಬಿಕೊಂಡು ಸಾಂತ್ವನ ಹೇಳಿದರು. 

2 Min read
Author : Shruiti G Krishna
Published : Nov 15 2022, 03:47 PM IST
Share this Photo Gallery
  • FB
  • TW
  • Linkdin
  • Whatsapp
111

ಮಹೇಶ್ ಬಾಬು ಒಂದೂವರೆ ತಿಂಗಳಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡರು. ಸೆಪ್ಟಂಬರ್ ನಲ್ಲಿ ಮಹೇಶ್ ತನ್ನ ತಾಯಿ ಇಂದಿಯಾ ಅವರನ್ನು ಕಳೆದುಕೊಂಡರು. ಅಮ್ಮನ ಅಗಲಿಕೆಯ ನೋವು ಇನ್ನೂ ಹಸಿಯಾಗಿರುವುಗಾಲೇ ತಂದೆ ಕೂಡ ದೂರ ಆಗಿದ್ದಾರೆ. 

211

ಮಹೇಶ್ ಬಾಬು ತಂದೆ ಕೃಷ್ಣ ಅವರು ಇಂದು (ನವೆಂಬರ್ 15) ಬೆಳಗ್ಗೆ ನಿಧನ ಹೊಂದಿದರು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. 

311

ತಂದೆಯ ಪಾರ್ಥಿವ ಶರೀರದ ಮುಂದೆ ಕುಳಿತು ಮಹೇಶ್ ಬಾಬು ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಅಪ್ಪನ್ನು ನೋಡಿ ಕಣ್ಣೀರಾಕುತ್ತಿದ್ದ ಮಹೇಶ್ ಬಾಬು ಅವರಿಗೆ ಟಾಲಿವುಡ್ ಸ್ಟಾರ್ ಧೈರ್ಯ ತುಂಬಿದ್ದಾರೆ. ಕೃಷ್ಣ ಅವರ ಅಂತಿಮ ದರ್ಶನ ಪಡೆದ ಟಾಲಿವುಡ್ ಗಣ್ಯರು ಮಹೇಶ್ ಬಾಬು ಅವರನ್ನು ತಬ್ಬಿಕೊಂಡು ಸಾಂತ್ವನ ಹೇಳಿದರು. 

411

ಟಾಲಿವುಡ್ ಸ್ಟಾರ್‌ಗಳಾದ ಚಿರಂಜೀವಿ, ಅಲ್ಲು ಅರ್ಜುನ್, ರಾಮ್ ಚರಣ್, ಪವನ್ ಕಲ್ಯಾಣ್, ಜೂ ಎನ್ ಟಿ ಆರ್, ವಿಜಯ್ ದೇವರಕೊಂಡ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

511

ನಟ ಚಿರಂಜೀವಿ, ರಾಮ್ ಚರಣ್, ಅಲ್ಲು ಅರ್ಜುನ್ ಮತ್ತು ಇತರ ಟಾಲಿವುಡ್ ನಟರು ಮಹೇಶ್ ಬಾಬು ಜೊತೆ ಕೆಲವು ಸಮಯ ಮಾತನಾಡಿ ಸಾಂತ್ವನ ಹೇಳಿದರು. ಅಪ್ಪನ್ನು ನೆನೆದು ಕಣ್ಣೀರಾಕುತ್ತಿರುವ ಮಹೇಶ್ ಬಾಬು ವಿಡಿಯೋ ಅಭಿಮಾನಿಗಳ ಮನಕಲಕಿದೆ. 

611
mahesh babu

mahesh babu

ಮಹೇಶ್ ಬಾಬು ಅವರಿಗೆ ಅಭಿಮಾನಿಗಳು ಧೈರ್ಯವಾಗಿ ಇರುವಂತೆ ಸಂದೇಶ ಕಳುಹಿಸುತ್ತಿದ್ದಾರೆ. ಮತ್ತಷ್ಟು ಶಕ್ತಿ ಸಿಗಲಿ ಎಂದು ಹಾರೈಸುತ್ತಿದ್ದಾರೆ. ಮಹೇಶ್ ಬಾಬು ಕಣ್ಣೀರಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

711

ಕೃಷ್ಣ ಅವರು 1960ರಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಕೃಷ್ಣ ಅವರು ಟಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿ ಮೆರೆದ್ದರು. ಸಿನಿಮಾರಂಗದ ಜೊತೆಗೆ ಕೃಷ್ಣ ಅವರು ರಾಜಕೀಯದಲ್ಲೂ ಸಕ್ರೀಯರಾಗಿದ್ದರು. 

811

ಕೃಷ್ಣ ನಿಧನದ ಬಳಿಕ ಮಹೇಶ್ ಬಾಬು ಕುಟುಂಬ ಭಾವುಕ ಪೋಸ್ಟ್ ಶೇರ್ ಮಾಡಿದ್ದಾರೆ. ಮಹೇಶ್ ಬಾಬು, ನಮ್ರತಾ ಶಿರೋಡ್ಕರ್, ಸಿತಾರಾ ಮತ್ತು ಇಡೀ ಘಟ್ಟಮನೇನಿ ಕುಟುಂಬದ ಸದ್ಯರು ಮೊದಲ ಹೇಳಕೆ ನೀಡಿದೆ. ಮಹೇಶ್ ಬಾಬು ಮತ್ತು ಪತ್ನಿ ನಮ್ರತಾ ಹಾಗೂ ಅವರ ಮಕ್ಕಳಾದ ಗೌತಮ್ ಮತ್ತು ಸಿತಾರಾ ಮತ್ತು ಮಹೇಶ್ ಬಾಬು ಸಹೋದರಿಯರಾದ ಮಂಜುಳಾ, ಪದ್ಮಾವತಿ ಮತ್ತು ಪ್ರಿಯದರ್ಶಿನಿ ಘಟ್ಟಮನೇನಿ ಕೂಡ ಹೇಳಿಕೆ ನೀಡಿದ್ದಾರೆ.

911

'ನಮ್ಮ ಪ್ರೀತಿಯ ಕೃಷ್ಣ ಅವರ ಅಗಲಿಕೆಯ ಬಗ್ಗೆ ನಾವು ನಿಮಗೆ ಅತ್ಯಂತ ದುಃಖದಿಂದ ತಿಳಿಸುತ್ತೇವೆ. ಅವರು ಸಿನಿಮಾ ಹೊರತಾಗಿಯೂ ಹಲವು ವಿಧಗಳಲ್ಲಿ ಸೂಪರ್ ಸ್ಟಾರ್ ಆಗಿದ್ದರು. ಪ್ರೀತಿ, ವಿನಮ್ರತೆ ಮತ್ತು ಸಹಾನುಭೂತಿಯಿಂದ ಮಾರ್ಗದರ್ಶನ ನೀಡಿದ್ದಾರೆ' ಎಂದು ಹೇಳಿದ್ದಾರೆ.

1011

'ಅವರು ತಮ್ಮ ಕೆಲಸದ ಮೂಲಕ ಇನ್ನೂ ಜೀವಂತವಾಗಿದ್ದಾರೆ. ಅವರು ನಮ್ಮನ್ನು ಅತೀ ಹೆಚ್ಚು ಪ್ರೀತಿಸುತ್ತಿದ್ದರು ಮತ್ತು ಪ್ರತಿ ದಿನವೂ ನಾವು ಅವನನ್ನು ಮಿಸ್ ಮಾಡಿಕೊಳ್ಳುತ್ತೆವೆ. ಆದರೆ ಅವರು ಹೇಳಿದಂತೆ, ವಿದಾಯಗಳು ಶಾಶ್ವತವಲ್ಲ. ನಾವು ಮತ್ತೆ ಭೇಟಿಯಾಗುವವರೆಗೆ' ಎಂದು  ಘಟ್ಟಮನೇನಿ  ಎಂದು ದೀರ್ಘವಾದ ನೋಟ್ ಹಂಚಿಕೊಂಡಿದ್ದಾರೆ.

1111

ಪ್ರಧಾನಿ ಮೋದಿ ಸಂತಾರ ಸೂಚಿಸಿದ್ದಾರೆ.  'ಕೃಷ್ಣ ಅವರು ತಮ್ಮ ಅದ್ಭುತ ನಟನಾ ಕೌಶಲ್ಯ ಮತ್ತು ಸ್ನೇಹಪರ ವ್ಯಕ್ತಿತ್ವದಿಂದ ಜನರ ಹೃದಯವನ್ನು ಗೆದ್ದ ಲೆಜೆಂಡರಿ ಸೂಪರ್‌ಸ್ಟಾರ್. ಅವರ ನಿಧನ ಭಾರತೀಯ ಸಿನಿಮಾರಂಗಕ್ಕೆ ದೊಡ್ಡ ನಷ್ಟ. ದುಃಖ ಭರಿಸುವ ಶಕ್ತಿ ನೀಡಲಿ ಮಹೇಶ್ ಬಾಬು ಕುಟುಂಬಕ್ಕೆ. ಆತ್ಮಕ್ಕೆ ಶಾಂತಿ' ಎಂದು ಹೇಳಿದ್ದಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SG
Shruiti G Krishna
ಮಹೇಶ್ ಬಾಬು
ಟಾಲಿವುಡ್

Latest Videos
Recommended Stories
Recommended image1
ತಂದೆ-ಮಗ ಇಬ್ಬರ ಜೊತೆನೂ ರೊಮ್ಯಾನ್ಸ್ ಮಾಡಿದ ಸ್ಟಾರ್ ನಟಿಯರು
Recommended image2
ಸಮಂತಾ ಟೀಸರ್ ನೋಡಿ 'ದಿ ಗರ್ಲ್‌ಫ್ರೆಂಡ್' ರಾಹುಲ್ ರವೀಂದ್ರನ್ ಹೇಳಿದ್ದೇನು? ವಿಷ್ಯ ಇದು ನೋಡಿ..!
Recommended image3
'ಸೊಂಟದ ವಿಷ್ಯ'ವೇ ಫಿಟ್‌ನೆಸ್‌ ಮಂತ್ರ ಎಂಬ ಸೀಕ್ರೆಟ್ ಬಯಲು ಮಾಡಿದ 'ಮೈನೆ ಪ್ಯಾರ್ ಕಿಯಾ' ಸುಂದರಿ ಭಾಗ್ಯಶ್ರೀ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved