ಪ್ರಭಾಸ್ ಜತೆ ಯಶ್.. ನೀಲ್ ಸಹ ಇದ್ದಾರೆ? ಏನ್ ಹೊಸ ಪ್ರಾಜೆಕ್ಟು?
ಹೈದರಾಬಾದ್(ಜ. 15) ಪ್ರಭಾಸ್ ನಟನೆಯ ಸಲಾರ್ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಹೈದರಾಬಾದ್ನಲ್ಲಿ ಕನ್ನಡ-ತೆಲುಗು ಚಿತ್ರರಂಗಳ ಮಹಾ ಸಮ್ಮಿಲನವಾಗಿದ್ದು ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಭಾಸ್, ವಿಜಯ್ ಕಿರಗಂದೂರು, ಪ್ರಶಾಂತ್ ನೀಲ್ ಭಾಗಿಯಾಗಿದ್ದರು.

<p>ಹೈದರಾಬಾದ್ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ ನೆರವೇರಿದೆ. </p>
ಹೈದರಾಬಾದ್ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ ನೆರವೇರಿದೆ.
<p>ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸುತ್ತಿರುವ, ʼಕೆಜಿಎಫ್ʼ ಚಿತ್ರದಂಥ ಬಿಗ್ ಬಜೆಟ್ ಇಂಡಿಯನ್ ಸಿನಿಮಾವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ಹಾಗೂ ಅದೇ ʼಕೆಜಿಎಫ್ʼ ಚಾಪ್ಟರ್ 2 ಕಟ್ಟಿಕೊಡುತ್ತಿರುವ ಪ್ರಶಾಂತ್ ನೀಲ್ ನಿರ್ದೇಶನದ ʼಸಲಾರ್ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಾಲನೆ ನೀಡಲಾಯಿತು.</p>
ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸುತ್ತಿರುವ, ʼಕೆಜಿಎಫ್ʼ ಚಿತ್ರದಂಥ ಬಿಗ್ ಬಜೆಟ್ ಇಂಡಿಯನ್ ಸಿನಿಮಾವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ಹಾಗೂ ಅದೇ ʼಕೆಜಿಎಫ್ʼ ಚಾಪ್ಟರ್ 2 ಕಟ್ಟಿಕೊಡುತ್ತಿರುವ ಪ್ರಶಾಂತ್ ನೀಲ್ ನಿರ್ದೇಶನದ ʼಸಲಾರ್ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಾಲನೆ ನೀಡಲಾಯಿತು.
<p>ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ನಾಯಕ ಪ್ರಭಾಸ್, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು, ತಾರೆಯರು ಪಾಲ್ಗೊಂಡು ಶುಭ ಹಾರೈಸಿದರು. ʼ</p>
ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ನಾಯಕ ಪ್ರಭಾಸ್, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು, ತಾರೆಯರು ಪಾಲ್ಗೊಂಡು ಶುಭ ಹಾರೈಸಿದರು. ʼ
<p>ಸಲಾರ್ʼ ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತು.</p>
ಸಲಾರ್ʼ ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತು.
<p>ಡಾ.ಸಿಎ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಹೊಂಬಾಳೆ ಅಡಿಯಲ್ಲಿ ʼಕೆಜಿಎಫ್ ಚಾಪ್ಟರ್-1ʼ, ʼಕೆಜಿಎಫ್ ಚಾಪ್ಟರ್-2ʼ ಅದಕ್ಕೂ ಹಿಂದೆ ಇನ್ನು ಹಲವು ಯಶಸ್ವಿ ಚಿತ್ರ</p>
ಡಾ.ಸಿಎ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಹೊಂಬಾಳೆ ಅಡಿಯಲ್ಲಿ ʼಕೆಜಿಎಫ್ ಚಾಪ್ಟರ್-1ʼ, ʼಕೆಜಿಎಫ್ ಚಾಪ್ಟರ್-2ʼ ಅದಕ್ಕೂ ಹಿಂದೆ ಇನ್ನು ಹಲವು ಯಶಸ್ವಿ ಚಿತ್ರ
<p>ಗಳನ್ನು ನಿರ್ಮಾಣ ಮಾಡಿರುವ ವಿಜಯ್ ಕಿರಗಂದೂರು ʼಸಲಾರ್ʼ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.</p>
ಗಳನ್ನು ನಿರ್ಮಾಣ ಮಾಡಿರುವ ವಿಜಯ್ ಕಿರಗಂದೂರು ʼಸಲಾರ್ʼ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
<p>ಹಾಗೆಯೇ ಕೆಜಿಎಫ್ ಸರಣಿ ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ ಪ್ರಶಾಂತ್ ನೀಲ್ ಅವರು ʼಸಲಾರ್ʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು.</p>
ಹಾಗೆಯೇ ಕೆಜಿಎಫ್ ಸರಣಿ ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ ಪ್ರಶಾಂತ್ ನೀಲ್ ಅವರು ʼಸಲಾರ್ʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು.
<p>ಅದರಲ್ಲೂ ಪ್ರಭಾಸ್ ಅವರ ಈ ಚಿತ್ರ ಮಾಡುತ್ತಿರುವುದು ತುಂಬಾ ಸಂತೋಷ ಉಂಟು ಮಾಡಿದೆ. ಈ ಮೂಲಕ ಭಾಷೆ, ಗಡಿಗಳನ್ನು ಮೀರಿ ಕನ್ನಡ-ತೆಲುಗು ಚಿತ್ರರಂಗಗಳು ಒಂದಾಗಿ ಮುಂದೆ ಹೋಗುತ್ತಿರುವುದಕ್ಕೆ ಆನಂದವಾಗಿದೆ ಎಂದು ಬಾಹುಬಲಿ ನೆನೆದರು.</p>
ಅದರಲ್ಲೂ ಪ್ರಭಾಸ್ ಅವರ ಈ ಚಿತ್ರ ಮಾಡುತ್ತಿರುವುದು ತುಂಬಾ ಸಂತೋಷ ಉಂಟು ಮಾಡಿದೆ. ಈ ಮೂಲಕ ಭಾಷೆ, ಗಡಿಗಳನ್ನು ಮೀರಿ ಕನ್ನಡ-ತೆಲುಗು ಚಿತ್ರರಂಗಗಳು ಒಂದಾಗಿ ಮುಂದೆ ಹೋಗುತ್ತಿರುವುದಕ್ಕೆ ಆನಂದವಾಗಿದೆ ಎಂದು ಬಾಹುಬಲಿ ನೆನೆದರು.
<p>ನಾನು ʼಬಾಹುಬಲಿʼ ಚಿತ್ರವನ್ನು ನೋಡಿ ಪ್ರಭಾಸ್ ಅವರಿಗೆ ಫಿದಾ ಆಗಿದ್ದೆ. ಈಗ ಅವರ ಜತೆಯಲ್ಲೇ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಈ ಮೂಲಕ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ʼಸಲಾರ್ʼ ಚಿತ್ರವನ್ನು ತಯಾರು ಮಾಡುತ್ತಿದ್ದೇವೆ.</p>
ನಾನು ʼಬಾಹುಬಲಿʼ ಚಿತ್ರವನ್ನು ನೋಡಿ ಪ್ರಭಾಸ್ ಅವರಿಗೆ ಫಿದಾ ಆಗಿದ್ದೆ. ಈಗ ಅವರ ಜತೆಯಲ್ಲೇ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಈ ಮೂಲಕ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ʼಸಲಾರ್ʼ ಚಿತ್ರವನ್ನು ತಯಾರು ಮಾಡುತ್ತಿದ್ದೇವೆ.
<p>ನಮ್ಮ ʼಕೆಜಿಎಫ್ʼ ಚಿತ್ರವನ್ನು ಡೈರೈಕ್ಟ್ ಮಾಡಿರುವ ಪ್ರಶಾಂತ್ ನೀಲ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು ನಿರ್ಮಾಪಕ ವಿಜಯ್ ಕಿರಗಂದೂರು.</p>
ನಮ್ಮ ʼಕೆಜಿಎಫ್ʼ ಚಿತ್ರವನ್ನು ಡೈರೈಕ್ಟ್ ಮಾಡಿರುವ ಪ್ರಶಾಂತ್ ನೀಲ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು ನಿರ್ಮಾಪಕ ವಿಜಯ್ ಕಿರಗಂದೂರು.
<p>ʼಸಲಾರ್ʼ ಚಿತ್ರಕ್ಕೆ ಪ್ರಭಾಸ್ ಅವರ ಹೊರತಾಗಿ ನಾಯಕ ನಟಿ, ಇನ್ನಿತರೆ ತಾರಾಬಳಗ ಆಯ್ಕೆಯಾಗಿಲ್ಲ. ಚಿತ್ರವನ್ನು ಅನೌನ್ಸ್ ಮಾಡಿದಾಗ ಹೊರಬಿದ್ದ ಸಲಾರ್ ಫಸ್ಟ್ಲುಕ್ ದೇಶದೆಲ್ಲೆಡೆ ವೈರಲ್ ಆಗಿತ್ತು. </p>
ʼಸಲಾರ್ʼ ಚಿತ್ರಕ್ಕೆ ಪ್ರಭಾಸ್ ಅವರ ಹೊರತಾಗಿ ನಾಯಕ ನಟಿ, ಇನ್ನಿತರೆ ತಾರಾಬಳಗ ಆಯ್ಕೆಯಾಗಿಲ್ಲ. ಚಿತ್ರವನ್ನು ಅನೌನ್ಸ್ ಮಾಡಿದಾಗ ಹೊರಬಿದ್ದ ಸಲಾರ್ ಫಸ್ಟ್ಲುಕ್ ದೇಶದೆಲ್ಲೆಡೆ ವೈರಲ್ ಆಗಿತ್ತು.
<p>ಪ್ರಭಾಸ್ ಈಗಾಗಲೇ ʼರಾಧೆ ಶ್ಯಾಂʼ ಚಿತ್ರದಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಕೊನೆ ಹಂತದಲ್ಲಿದೆ. ʼಆದಿಪುರುಷ್ʼ ಚಿತ್ರದ ಶೂಟಿಂಗ್ ಇನ್ನೇನು ಆರಂಭವಾಗಬೇಕಿದೆ. ಇದರ ಜತೆಯಲ್ಲೇ ಈಗ ʼಸಲಾರ್ʼ ಚಿತ್ರವೂ ಟೇಕಾಫ್ ಆಗಿದೆ. </p>
ಪ್ರಭಾಸ್ ಈಗಾಗಲೇ ʼರಾಧೆ ಶ್ಯಾಂʼ ಚಿತ್ರದಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಕೊನೆ ಹಂತದಲ್ಲಿದೆ. ʼಆದಿಪುರುಷ್ʼ ಚಿತ್ರದ ಶೂಟಿಂಗ್ ಇನ್ನೇನು ಆರಂಭವಾಗಬೇಕಿದೆ. ಇದರ ಜತೆಯಲ್ಲೇ ಈಗ ʼಸಲಾರ್ʼ ಚಿತ್ರವೂ ಟೇಕಾಫ್ ಆಗಿದೆ.
<p>ನಟ ಯಶ್, ರವಿ ಬಸ್ರೂರ್, ಭುವನ್ ಗೌಡ ಸೇರಿದಂತೆ ಕೆಜಿಎಫ್ ಚಿತ್ರತಂಡದ ಅನೇಕರು ಪಾಲ್ಗೊಂಡಿದ್ದರು. ಅದರಲ್ಲೂ ಯಶ್ ಪ್ರಮುಖ ಆಕರ್ಷಣೆಯಾಗಿದ್ದರು.</p>
ನಟ ಯಶ್, ರವಿ ಬಸ್ರೂರ್, ಭುವನ್ ಗೌಡ ಸೇರಿದಂತೆ ಕೆಜಿಎಫ್ ಚಿತ್ರತಂಡದ ಅನೇಕರು ಪಾಲ್ಗೊಂಡಿದ್ದರು. ಅದರಲ್ಲೂ ಯಶ್ ಪ್ರಮುಖ ಆಕರ್ಷಣೆಯಾಗಿದ್ದರು.
<p>ʼಈಶ್ವರ್ʼ ಚಿತ್ರದಿಂದ ಮೊದಲುಗೊಂಡು ʼಸಾಹೋʼ ತನಕ ಪ್ರಭಾಸ್ ನಟಿಸಿದ ಒಟ್ಟು 19 ಚಿತ್ರಗಳು ರಿಲೀಸ್ ಆಗಿವೆ. </p>
ʼಈಶ್ವರ್ʼ ಚಿತ್ರದಿಂದ ಮೊದಲುಗೊಂಡು ʼಸಾಹೋʼ ತನಕ ಪ್ರಭಾಸ್ ನಟಿಸಿದ ಒಟ್ಟು 19 ಚಿತ್ರಗಳು ರಿಲೀಸ್ ಆಗಿವೆ.
<p>ಈ ಪೈಕಿ ʼಬಾಹುಬಲಿ-ದಿ ಬಿಗಿನಿಂಗ್ʼ ಹಾಗೂ ʼಬಾಹುಬಲಿ-ಕನ್ಕ್ಲೂಶನ್ʼ ಭಾರತ ಮಾತ್ರವಲ್ಲದೆ ಜಾಗತಿಕವಾಗಿಯೂ ಸದ್ದು ಮಾಡಿದ್ದವು. ಇದೀಗ ಅವರು ನಟಿಸುತ್ತಿರುವ ʼಸಲಾರ್ʼ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ಕ್ರೇಜ್ ಸೃಷ್ಟಿ ಮಾಡಿದೆ.</p>
ಈ ಪೈಕಿ ʼಬಾಹುಬಲಿ-ದಿ ಬಿಗಿನಿಂಗ್ʼ ಹಾಗೂ ʼಬಾಹುಬಲಿ-ಕನ್ಕ್ಲೂಶನ್ʼ ಭಾರತ ಮಾತ್ರವಲ್ಲದೆ ಜಾಗತಿಕವಾಗಿಯೂ ಸದ್ದು ಮಾಡಿದ್ದವು. ಇದೀಗ ಅವರು ನಟಿಸುತ್ತಿರುವ ʼಸಲಾರ್ʼ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ಕ್ರೇಜ್ ಸೃಷ್ಟಿ ಮಾಡಿದೆ.
<p>ದಕ್ಷಿಣ ಭಾರತದ ಎಲ್ಲ ಚಿತ್ರರಂಗಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ನಾಯಕರು ಹೇಳಿದರು .</p>
ದಕ್ಷಿಣ ಭಾರತದ ಎಲ್ಲ ಚಿತ್ರರಂಗಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ನಾಯಕರು ಹೇಳಿದರು .
<p>ಸಿನಿಮಾ ಸಂಭ್ರಮ</p>
ಸಿನಿಮಾ ಸಂಭ್ರಮ