MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಅಲ್ಲು ಅರ್ಜುನ್ ಬೌನ್ಸರ್ ಅರೆಸ್ಟ್, ಪುಷ್ಪಾ 2 ಚಿತ್ರದ ನಾಯಕನ ವಿಚಾರಣೆ ಬೆನ್ನಲ್ಲೇ ಶಾಕ್!

ಅಲ್ಲು ಅರ್ಜುನ್ ಬೌನ್ಸರ್ ಅರೆಸ್ಟ್, ಪುಷ್ಪಾ 2 ಚಿತ್ರದ ನಾಯಕನ ವಿಚಾರಣೆ ಬೆನ್ನಲ್ಲೇ ಶಾಕ್!

ಕಾಲ್ತುಳಿತ ಪ್ರಕರಣದಲ್ಲಿ ಅರೆಸ್ಟ್ ಆಗಿ ಜಾಮೀನು ಪಡೆದಿರುವ ಅಲ್ಲು ಅರ್ಜುನ್ ಇಂದು ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಇದರ ಬೆನ್ನಲ್ಲೇ  ಅಲ್ಲು ಅರ್ಜುನ್ ಸಿಬ್ಬಂದಿಯೊಬ್ಬರನ್ನ ಬಂಧಿಸಲಾಗಿದೆ. 

2 Min read
Chethan Kumar
Published : Dec 24 2024, 06:10 PM IST| Updated : Dec 24 2024, 06:11 PM IST
Share this Photo Gallery
  • FB
  • TW
  • Linkdin
  • Whatsapp
16

ಸಂಧ್ಯಾ ಥಿಯೇಟರ್​ನಲ್ಲಿ ನಡೆದ ನೂಕುನುಗ್ಗಲು ಘಟನೆ ಸಂಚಲನ ಮೂಡಿಸಿದೆ. ಮಹಿಳೆ ಸಾವಿನ ಬಗ್ಗೆ ಕೇಸ್ ದಾಖಲಿಸಿರೋ ಪೊಲೀಸರು ಹಲವರನ್ನ ಬಂಧಿಸಿದ್ದಾರೆ. ಅಲ್ಲು ಅರ್ಜುನ್ ಸರಿಯಾದ ಅನುಮತಿ ಇಲ್ಲದೆ ಸಂಧ್ಯಾ ಥಿಯೇಟರ್​ಗೆ ಸಿನಿಮಾ ನೋಡಲು ಹೋಗಿದ್ದೇ ಈ ಅನಾಹುತಕ್ಕೆ ಕಾರಣ ಅಂತ ಪೊಲೀಸರು ಆರೋಪಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಇನ್ನೂ ಮುಂದುವರಿದಿದೆ. ಇತ್ತ ಮತ್ತೊಂದು ಬಂಧನವಾಗಿದೆ. ಅಲ್ಲು ಅರ್ಜುನ್ ವೈಯಕ್ತಿಕ ಸಿಬ್ಬಂದಿಯಲ್ಲಿ ಒಬ್ಬರಾದ ಬೌನ್ಸರ್ ಆಂಟೋನಿ ಬಂಧನವಾಗಿದೆ. ಸಂಧ್ಯಾ ಥಿಯೇಟರ್​ನಲ್ಲಿ ಬೌನ್ಸರ್​ಗಳು ಅಲ್ಲು ಅರ್ಜುನ್ ಅಭಿಮಾನಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ.

26

ಇಂದು ತೆಲಂಗಾಣ ಪೊಲೀಸರು ಮತ್ತೊಮ್ಮೆ ಅಲ್ಲು ಅರ್ಜುನ್​ರನ್ನ ವಿಚಾರಣೆಗೆ ಕರೆದಿದ್ದಾರೆ. BNS 35(3) ಸೆಕ್ಷನ್ ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಲ್ಲು ಅರ್ಜುನ್ ಚಿಕ್ಕಡಪಳ್ಳಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ಚಿಕ್ಕಡಪಳ್ಳಿ ಸಿಐ, ಎಸಿಪಿ ಅಲ್ಲು ಅರ್ಜುನ್​ರನ್ನ ವಿಚಾರಣೆ ಮಾಡಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಕೆಲ ಕಠಿಣ ಪ್ರಶ್ನೆಗಳನ್ನು ಅಲ್ಲು ಅರ್ಜುನ್ ಎದುರಿಸಿದ್ದಾರೆ. 

 

36

ಮೂರು ಗಂಟೆಗೂ ಹೆಚ್ಚು ಕಾಲ ನಡೆದ ವಿಚಾರಣೆಯಲ್ಲಿ 20ಕ್ಕೂ ಹೆಚ್ಚು ಪ್ರಶ್ನೆಗಳನ್ನ ಅಲ್ಲು ಅರ್ಜುನ್​ಗೆ ಕೇಳಲಾಗಿದೆ. ಕೆಲವು ಪ್ರಶ್ನೆಗಳಿಗೆ ಅಲ್ಲು ಅರ್ಜುನ್ ಮೌನವಾಗಿದ್ದಾರೆ ಎನ್ನಲಾಗಿದೆ. ಅಲ್ಲು ಅರ್ಜುನ್ ಜೊತೆ ವಕೀಲ ಅಶೋಕ್ ರೆಡ್ಡಿ ಇದ್ದರು. ಅವರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 18 ಜನರನ್ನ ಆರೋಪಿಗಳನ್ನಾಗಿ ಮಾಡಲಾಗಿದೆ. ಮೈತ್ರಿ ಮೂವಿ ಮೇಕರ್ಸ್ ಜೊತೆಗೆ, ಅಲ್ಲು ಅರ್ಜುನ್ ವೈಯಕ್ತಿಕ ಸಿಬ್ಬಂದಿ ಹೆಸರುಗಳನ್ನೂ ರಿಮಾಂಡ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.

46

ಡಿಸೆಂಬರ್ 4ರಂದು ರಾತ್ರಿ ಪುಷ್ಪ 2 ಪ್ರೀಮಿಯರ್ ಪ್ರದರ್ಶನದ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ನಾಯಕಿ ರಶ್ಮಿಕಾ ಜೊತೆ ಸಂಧ್ಯಾ ಥಿಯೇಟರ್​ಗೆ ಹೋಗಿದ್ದರು. ಅಲ್ಲು ಅರ್ಜುನ್ ಬಂದಿದ್ದರಿಂದ ಅಭಿಮಾನಿಗಳು ಥಿಯೇಟರ್​ಗೆ ಮುಗಿಬಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಯ್ತು. ರೇವತಿ ಎಂಬ ಮಹಿಳೆ ಸಾವನ್ನಪ್ಪಿದರು. ರೇವತಿ 9 ವರ್ಷದ ಮಗ ಶ್ರೀತೇಜ್​ಗೆ ಗಂಭೀರ ಗಾಯಗಳಾಗಿವೆ.

56

ಈ ಘಟನೆ ಬಗ್ಗೆ ತೆಲಂಗಾಣ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಅಲ್ಲು ಅರ್ಜುನ್ ಹೆಸರನ್ನ A11 ಆಗಿ ಸೇರಿಸಿದ್ದಾರೆ. ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಬಂಧನವಾಯಿತು. ಅವರಿಗೆ ನಾಂಪಳ್ಳಿ ನ್ಯಾಯಾಲಯ 14 ದಿನಗಳ ರಿಮಾಂಡ್ ವಿಧಿಸಿತು. ಅಲ್ಲು ಅರ್ಜುನ್ ಪರ ವಕೀಲರು ಹೈಕೋರ್ಟ್ ಮೊರೆ ಹೋದರು. ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದರು. ವೈಎಸ್​ಆರ್​ಸಿಪಿ ಸಂಸದ, ವಕೀಲ ನಿರಂಜನ್ ರೆಡ್ಡಿ ಅವರನ್ನ ಕಣಕ್ಕಿಳಿಸಲಾಯಿತು.

 

66

ಅವರ ವಾದವನ್ನ ಒಪ್ಪಿಕೊಂಡ ನ್ಯಾಯಾಲಯ ಅಲ್ಲು ಅರ್ಜುನ್​ಗೆ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತು. ಆದ್ರೆ ಒಂದು ದಿನ ರಾತ್ರಿ ಅಲ್ಲು ಅರ್ಜುನ್ ಚಂಚಲ್​ಗೂಡ ಜೈಲಿನಲ್ಲಿ ಕಳೆಯಬೇಕಾಯಿತು. ಹೈಕೋರ್ಟ್​ನಲ್ಲಿ ವಾದ ನಡೆಯುತ್ತಿದ್ದಂತೆಯೇ ಕೆಳ ನ್ಯಾಯಾಲಯದ ತೀರ್ಪಿನಂತೆ ಅಲ್ಲು ಅರ್ಜುನ್​ರನ್ನ ಚಂಚಲ್​ಗೂಡ ಜೈಲಿಗೆ ಕಳುಹಿಸಲಾಯಿತು. ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ರೂ ಆದೇಶದ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪಬೇಕಿತ್ತು. ಆ ಪ್ರತಿ ಸಕಾಲಕ್ಕೆ ಸಿಗಲಿಲ್ಲ ಅನ್ನೋ ಕಾರಣಕ್ಕೆ ಅಲ್ಲು ಅರ್ಜುನ್​ರನ್ನ ಜೈಲಿನಲ್ಲಿ ಇರಿಸಲಾಗಿತ್ತು.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಅಲ್ಲು ಅರ್ಜುನ್
ಪೊಲೀಸ್
ಕಾಲ್ತುಳಿತ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved