MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಹನುಮನ ಜನ್ಮಸ್ಥಳ ಅಂಜನಾದ್ರಿಗೆ ರಿಷಬ್ ಶೆಟ್ಟಿ ಭೇಟಿ; 575 ಮೆಟ್ಟಿಲೇರಿ ದರ್ಶನ ಪಡೆದ ದಂಪತಿ!

ಹನುಮನ ಜನ್ಮಸ್ಥಳ ಅಂಜನಾದ್ರಿಗೆ ರಿಷಬ್ ಶೆಟ್ಟಿ ಭೇಟಿ; 575 ಮೆಟ್ಟಿಲೇರಿ ದರ್ಶನ ಪಡೆದ ದಂಪತಿ!

ಕಾಂತಾರ ಯಶಸ್ಸಿನ ಬಳಿಕ ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡಿರುವ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ರಾಜ್ಯದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ದರ್ಶನ ಪಡೆದರು. 

1 Min read
Ravi Janekal
Published : Dec 24 2025, 08:13 PM IST| Updated : Dec 24 2025, 08:19 PM IST
Share this Photo Gallery
  • FB
  • TW
  • Linkdin
  • Whatsapp
16
ಹನುಮನ ಜನ್ಮಸ್ಥಳ ಅಂಜನಾದ್ರಿಗೆ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಭೇಟಿ;
Image Credit : Asianet News

ಹನುಮನ ಜನ್ಮಸ್ಥಳ ಅಂಜನಾದ್ರಿಗೆ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಭೇಟಿ;

ಕಾಂತಾರ' ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ತಮ್ಮ 'ಕಾಂತಾರ' (Kantara: Chapter 1) ಯಶಸ್ಸಿನ ಬಳಿಕ, ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಪತ್ನಿಯೊಂದಿಗೆ ರಾಜ್ಯದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ರಿಷಬ್ ದಂಪತಿ, ಆಂಜನೇಯನ ದರ್ಶನ ಪಡೆದರು.

26
ದಂಪತಿ ಸಮೇತ ಅಂಜನಾದ್ರಿ ಯಾತ್ರೆ
Image Credit : Asianet News

ದಂಪತಿ ಸಮೇತ ಅಂಜನಾದ್ರಿ ಯಾತ್ರೆ

ಕಾಂತಾರ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಅವರು ರಾಜ್ಯದ ಪ್ರಮುಖ ಶಕ್ತಿಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ತಿರುಪತಿ, ಮಂತ್ರಾಲಯ ಮತ್ತು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಶೆಟ್ಟರು, ಇಂದು ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಹನುಮನ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿಗೆ ಆಗಮಿಸಿದರು.

Related Articles

Related image1
ಮಂತ್ರಾಲಯದ ಮಡಿಲಲ್ಲಿ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ: ರಾಯರ ದರ್ಶನ ಪಡೆದು ಧನ್ಯತೆ ಅನುಭವಿಸಿದ ಕಾಂತಾರ ನಟ!
Related image2
'ಕಾಂತಾರ ಚಾಪ್ಟರ್ 1' ಬಳಿಕ 2026ಕ್ಕೆ ರಿಷಬ್ ಶೆಟ್ಟಿ ಮಾಸ್ಟರ್ ಪ್ಲಾನ್.. ಶೀಘ್ರದಲ್ಲೇ ವಿಶೇಷ ಘೋಷಣೆ: ಏನದು?
36
575 ಮೆಟ್ಟಿಲೇರಿ ವಿಶೇಷ ಪೂಜೆ
Image Credit : Asianet News

575 ಮೆಟ್ಟಿಲೇರಿ ವಿಶೇಷ ಪೂಜೆ

ಬೆಟ್ಟದ ಮೇಲಿರುವ ಆಂಜನೇಯನ ದರ್ಶನಕ್ಕಾಗಿ ರಿಷಬ್ ಶೆಟ್ಟಿ ಅವರು ಸಾಮಾನ್ಯರಂತೆ 575 ಮೆಟ್ಟಿಲುಗಳನ್ನು ಹತ್ತಿ ಬೆಟ್ಟದ ತುದಿಗೆ ತಲುಪಿದರು. ದೇವಸ್ಥಾನದಲ್ಲಿ ಮಾರುತಿಗೆ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದರು. ಈ ವೇಳೆ ಅಂಜನಾದ್ರಿಯ ದೈವಿಕ ಪರಿಸರದಲ್ಲಿ ರಿಷಬ್ ಶೆಟ್ಟಿ ದಂಪತಿ ಕೆಲವು ಕಾಲ ಕಳೆದು ಭಕ್ತಿ ಪರವಶರಾದರು

46
ಅಂಜನಾದ್ರಿಯ ಇತಿಹಾಸ ತಿಳಿದ ರಿಷಬ್
Image Credit : Asianet News

ಅಂಜನಾದ್ರಿಯ ಇತಿಹಾಸ ತಿಳಿದ ರಿಷಬ್

ದರ್ಶನದ ಬಳಿಕ ಅಂಜನಾದ್ರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ಯಾದಾಸಬಾಬಾ ಅವರು ರಿಷಬ್ ಶೆಟ್ಟಿ ಅವರಿಗೆ ಹನುಮ ಜನ್ಮಸ್ಥಳದ ಪುರಾಣ ಮತ್ತು ಇತಿಹಾಸದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ಕಾಂತಾರ ಸಿನಿಮಾದ ಮೂಲಕ ದೈವಿಕ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ರಿಷಬ್ ಅವರ ಕಾರ್ಯವನ್ನು ಅರ್ಚಕರು ಈ ವೇಳೆ ಶ್ಲಾಘಿಸಿದರು.

56
ರಿಷಬ್ ಶೆಟ್ಟಿ ದಂಪತಿಗೆ ಸನ್ಮಾನ
Image Credit : Asianet News

ರಿಷಬ್ ಶೆಟ್ಟಿ ದಂಪತಿಗೆ ಸನ್ಮಾನ

ಅಂಜನಾದ್ರಿಗೆ ಭೇಟಿ ನೀಡಿದ ಈ ಸಂಭ್ರಮದ ಸಂದರ್ಭದಲ್ಲಿ ಪ್ರಧಾನ ಅರ್ಚಕ ವಿದ್ಯಾದಾಸಬಾಬಾ ಅವರು ರಿಷಬ್ ಶೆಟ್ಟಿ ಅವರಿಗೆ ದೇವಸ್ಥಾನದ ವತಿಯಿಂದ ಸನ್ಮಾನ ಮಾಡಿದರು. 

66
ರಿಷಬ್ ಶೆಟ್ಟಿ ಮುಂದಿನ ಸಿನಿಮಾ ಯಾವುದು? ಕುತೂಹಲ
Image Credit : Asianet News

ರಿಷಬ್ ಶೆಟ್ಟಿ ಮುಂದಿನ ಸಿನಿಮಾ ಯಾವುದು? ಕುತೂಹಲ

ತಮ್ಮ ನೆಚ್ಚಿನ ನಟನನ್ನು ನೋಡಲು ಬೆಟ್ಟದ ಮೇಲೆ ಅಭಿಮಾನಿಗಳು ಮುಗಿಬಿದ್ದಿದ್ದರು. ರಿಷಬ್ ಶೆಟ್ಟಿ ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರಾ ಎಂದು ಅಭಿಮಾನಿಗಳು ಮಾತಾಡಿಕೊಂಡರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಕೊಪ್ಪಳ
ರಿಷಬ್ ಶೆಟ್ಟಿ
ಕಾಂತಾರ ಚಲನಚಿತ್ರ

Latest Videos
Recommended Stories
Recommended image1
ರಣಬೀರ್-ಆಲಿಯಾ ಭಟ್ 'Love and War ' ಫಸ್ಟ್ ಲುಕ್ ಯಾವಾಗ ರಿಲೀಸ್? ಇಲ್ಲಿದೆ ಮಾಹಿತಿ
Recommended image2
Mark ಚಿತ್ರದ 'ಮಸ್ತ್​ ಮಲೈಕಾ' ಹಾಡಿಗೆ Bhargavi LLB ಭಾರ್ಗವಿ-ಅರ್ಜುನ್​ ಭರ್ಜರಿ ಸ್ಟೆಪ್​​
Recommended image3
ಮಂತ್ರಾಲಯದ ಮಡಿಲಲ್ಲಿ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ: ರಾಯರ ದರ್ಶನ ಪಡೆದು ಧನ್ಯತೆ ಅನುಭವಿಸಿದ ಕಾಂತಾರ ನಟ!
Related Stories
Recommended image1
ಮಂತ್ರಾಲಯದ ಮಡಿಲಲ್ಲಿ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ: ರಾಯರ ದರ್ಶನ ಪಡೆದು ಧನ್ಯತೆ ಅನುಭವಿಸಿದ ಕಾಂತಾರ ನಟ!
Recommended image2
'ಕಾಂತಾರ ಚಾಪ್ಟರ್ 1' ಬಳಿಕ 2026ಕ್ಕೆ ರಿಷಬ್ ಶೆಟ್ಟಿ ಮಾಸ್ಟರ್ ಪ್ಲಾನ್.. ಶೀಘ್ರದಲ್ಲೇ ವಿಶೇಷ ಘೋಷಣೆ: ಏನದು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved