ಅಬ್ಬಬ್ಬಾ.. ಆ ಸಿನಿಮಾದ ಲಾಭದಿಂದ ಅಗರಂಗೆ 10 ಕೋಟಿ ದೇಣಿಗೆ ನೀಡಿದ ನಟ ಸೂರ್ಯ!
ಸೂರ್ಯ ನಟಿಸಿದ್ದ 'ರೆಟ್ರೋ' ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಈ ಚಿತ್ರದ ಲಾಭದಿಂದ 10 ಕೋಟಿ ರೂಪಾಯಿಗಳನ್ನು ಅಗರಂ ಫೌಂಡೇಶನ್ಗೆ ದೇಣಿಗೆ ನೀಡಿದ್ದಾರೆ.

ಕಾರ್ತಿಕ್ ಸುಬ್ಬರಾಜ್ ನಿರ್ದೇಶನದಲ್ಲಿ ಸೂರ್ಯ ನಟಿಸಿದ 'ರೆಟ್ರೋ' ಚಿತ್ರ ಮೇ 1 ರಂದು ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಪ್ರಕಾಶ್ ರಾಜ್, ನಾಸರ್, ಜೋಜು ಜಾರ್ಜ್, ಜಯರಾಮ್ ಮುಂತಾದ ದಿಗ್ಗಜ ಕಲಾವಿದರು ಈ ಚಿತ್ರದಲ್ಲಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ. ಸೂರ್ಯ ಮತ್ತು ಜ್ಯೋತಿಕಾ 2D ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಸತತ ಸೋಲುಗಳಿಂದ ಕಂಗೆಟ್ಟಿದ್ದ ಸೂರ್ಯ 'ರೆಟ್ರೋ' ಚಿತ್ರದ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಈ ಚಿತ್ರ ಬಿಡುಗಡೆಯಾದ ಐದು ದಿನಗಳಲ್ಲಿ 100 ಕೋಟಿ ರೂ.ಗೂ ಹೆಚ್ಚು ಗಳಿಕೆ ಕಂಡಿದೆ. 65 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣವಾದ ಈ ಚಿತ್ರ ಮೊದಲ ವಾರದಲ್ಲೇ ಲಾಭ ಗಳಿಸಿದೆ. ಇದರಿಂದ ಚಿತ್ರತಂಡ ಸಂತಸಗೊಂಡಿದೆ. ನಿರ್ಮಾಪಕ ಮತ್ತು ನಟ ಸೂರ್ಯಗೆ ಈ ಚಿತ್ರ ಉತ್ತಮ ಲಾಭ ತಂದುಕೊಟ್ಟಿದೆ.
'ರೆಟ್ರೋ' ಚಿತ್ರದ ಯಶಸ್ಸನ್ನು ಚಿತ್ರತಂಡ ಆಚರಿಸಿಕೊಂಡಿದೆ. ಚೆನ್ನೈನಲ್ಲಿ ನಡೆದ ಯಶಸ್ಸಿನ ಸಮಾರಂಭದಲ್ಲಿ ಸೂರ್ಯ, ಕಾರ್ತಿಕ್ ಸುಬ್ಬರಾಜ್ ಸೇರಿದಂತೆ ಇಡೀ ಚಿತ್ರತಂಡ ಭಾಗವಹಿಸಿತ್ತು. ಕೇಕ್ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡಕ್ಕೆ ನಿರ್ಮಾಪಕ ಸೂರ್ಯ ಭರ್ಜರಿ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟವನ್ನು ಮಾದಂಬಟ್ಟಿ ರಂಗರಾಜ್ ಅವರು ತಯಾರಿಸಿದ್ದರು.
ಸೂರ್ಯ ಅವರು ಅಗರಂ ಎಂಬ ಒಂದು ಟ್ರಸ್ಟ್ ನಡೆಸುತ್ತಿದ್ದಾರೆ. ಇದರ ಮೂಲಕ ಅನೇಕ ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಓದುತ್ತಿದ್ದಾರೆ. 'ರೆಟ್ರೋ' ಚಿತ್ರದ ಲಾಭದಿಂದ 10 ಕೋಟಿ ರೂ.ಗಳನ್ನು ಅಗರಂ ಟ್ರಸ್ಟ್ಗೆ ದೇಣಿಗೆ ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಗರಂ ಫೌಂಡೇಶನ್ ಮೂಲಕ ಓದಿದ ಅನೇಕ ಬಡವರು ಇಂದು ವೈದ್ಯರು ಮತ್ತು ಎಂಜಿನಿಯರ್ಗಳಾಗಿದ್ದಾರೆ ಎಂಬುದು ಗಮನಾರ್ಹ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

