MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • 4 ದಿನದಲ್ಲಿ 6 ಸೆಲೆಬ್ರಿಟಿಗಳ ವಿದಾಯ: ಇಬ್ಬರು ಅಪಘಾತಕ್ಕೆ ಬಲಿಯಾದರೆ, ಒಬ್ಬರ ಸಾವು ನಿಗೂಢ!

4 ದಿನದಲ್ಲಿ 6 ಸೆಲೆಬ್ರಿಟಿಗಳ ವಿದಾಯ: ಇಬ್ಬರು ಅಪಘಾತಕ್ಕೆ ಬಲಿಯಾದರೆ, ಒಬ್ಬರ ಸಾವು ನಿಗೂಢ!

ಮನರಂಜನಾ ಪ್ರಪಂಚದಿಂದ ಕೆಟ್ಟ ಸುದ್ದಿಗಳು ನಿರಂತರವಾಗಿ ಬರುತ್ತಿವೆ. ಕಳೆದ 4 ದಿನಗಳಲ್ಲಿ, 6 ಜನಪ್ರಿಯ ಸೆಲೆಬ್ರಿಟಿಗಳು ಜಗತ್ತಿಗೆ ವಿದಾಯ ಹೇಳಿದರು. ಅವರಲ್ಲಿ ಇಬ್ಬರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ, ಒಬ್ಬ ನಟ ನಿಗೂಢ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.  

2 Min read
Author : Suvarna News
Published : May 25 2023, 08:11 PM IST
Share this Photo Gallery
  • FB
  • TW
  • Linkdin
  • Whatsapp
16

ಸುಚಂದ್ರ ದಾಸ್‌ಗುಪ್ತಾ: ಮೇ 20 ರಂದು 29 ವರ್ಷದ ಬೆಂಗಾಲಿ ನಟಿ ಸುಚಂದ್ರ ದಾಸ್‌ಗುಪ್ತಾ ಜಗತ್ತಿಗೆ ವಿದಾಯ ಹೇಳಿದರು. 'ಗೌರಿ ಎಲೋ' ಬಂಗಾಳಿ ಶೋನಲ್ಲಿ ಕಾಣಿಸಿಕೊಂಡಿದ್ದ ಸುಚಂದ್ರ ದಾಸ್‌ಗುಪ್ತ ಶೂಟಿಂಗ್ ಮುಗಿಸಿ ಆ್ಯಪ್ ಆಧಾರಿತ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೈಕ್‌ನ ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಸೈಕ್ಲಿಸ್ಟ್‌ನನ್ನು ರಕ್ಷಿಸಲು ಸುಚಂದ್ರ ಜಿಗಿದಿದ್ದಾರೆ ಎಂದು ಹೇಳಲಾಗುತ್ತಿದೆ. ರಸ್ತೆಯಲ್ಲಿ ಬಿದ್ದ ಆಕೆಗೆ ಹಿಂಬದಿಯಿಂದ ಬರುತ್ತಿದ್ದ 10 ಚಕ್ರದ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ

26

ರೇ ಸ್ಟೀವನ್ಸನ್: ಎಸ್ ಎಸ್ ರಾಜಮೌಳಿ ನಿರ್ದೇಶನದ 'ಆರ್ ಆರ್ ಆರ್' ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರೇ ಸ್ಟೀವನ್ಸನ್ ಈಗ ಈ ಲೋಕದಲ್ಲಿಲ್ಲ. ಮೇ 21ರಂದು ಅವರ ಸಾವಿನ ಸುದ್ದಿ ಮಾಧ್ಯಮಗಳಲ್ಲಿ ಬಂದಿತ್ತು. ಆದರೆ, ಅವರ ಸಾವಿಗೆ ಕಾರಣ ತಿಳಿದುಬಂದಿಲ್ಲ. ಅವರು ತಮ್ಮ 59 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು.


 

36
bollywood actor aditya singh rajput found dead at andheri residence nsn

bollywood actor aditya singh rajput found dead at andheri residence nsn

ಆದಿತ್ಯ ಸಿಂಗ್ ರಜಪೂತ್: ಸ್ಪ್ಲಿಟ್ಸ್ವಿಲ್ಲಾ 9' ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಕೋ-ಆರ್ಡಿನೇಟರ್ ಆದಿತ್ಯ ಸಿಂಗ್ ರಜಪೂತ್ ಮೇ 22 ರಂದು ನಿಗೂಢ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಮುಂಬೈನ ಅವರ ಅಪಾರ್ಟ್‌ಮೆಂಟ್‌ನ ವಾಶ್‌ರೂಮ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅವರು ಮಾದಕ ದ್ರವ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಹಲವು ವರದಿಗಳಲ್ಲಿ ಹೇಳಲಾಗುತ್ತಿದೆ. ಆದರೆ, ಆತನ ಸ್ನೇಹಿತರು ಇದನ್ನು ಅಲ್ಲಗಳೆಯುತ್ತಿದ್ದಾರೆ.

46
Photo Courtesy: Instagram

Photo Courtesy: Instagram

ನಿತೇಶ್ ಪಾಂಡೆ: ಮೇ 23 ರಂದು ‘ಅನುಪಮಾ’ ಧಾರಾವಾಹಿ ಹಾಗೂ ‘ಓಂ ಶಾಂತಿ ಓಂ’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ  ಕಿರುತೆರೆಯ ಪರಿಚಿತ ನಟ ನಿತೇಶ್ ಪಾಂಡೆ ಜಗತ್ತಿಗೆ ವಿದಾಯ ಹೇಳಿದರು. ಶೂಟಿಂಗ್ ನಿಮಿತ್ತ ಮಹಾರಾಷ್ಟ್ರದ ಇಗತ್ಪುರಿಗೆ ತೆರಳಿದ್ದ ಅವರು ಹೋಟೆಲ್ ನಲ್ಲಿ ತಂಗಿದ್ದರು. ಈ ಸಮಯದಲ್ಲಿ, ಅವರು ಹೃದಯ ಸ್ತಂಭನದಿಂದ ನಿಧನರಾದರು.

56
Vaibhavi Upadhyaya

Vaibhavi Upadhyaya

ವೈಭವಿ ಉಪಾಧ್ಯಾಯ: ಮೇ 23 ರಂದು, 'ಸಾರಾ ಭಾಯ್ ವರ್ಸಸ್ ಸಾರಾ ಭಾಯ್ 2' ಧಾರಾವಾಹಿಯ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ನಿಧನರಾದರು. ನಿಶ್ಚಿತ ವರ ಸುರೇಶ್ ಗಾಂಧಿ ಅವರೊಂದಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಅವರ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಬಂಜಾರಿನ ತೀರ್ಥನ್ ಕಣಿವೆ ಬಳಿ 50 ಅಡಿ ಆಳದ ಕಮರಿಗೆ ಬಿದ್ದು ವೈಭವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


 

66
sharath babu

sharath babu

ಶರತ್ ಬಾಬು: ತಮಿಳು ಮತ್ತು ತೆಲುಗು ಚಿತ್ರರಂಗದ ಜನಪ್ರಿಯ ನಟ ಶರತ್ ಬಾಬು ಮೇ 22 ರಂದು ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
ಆಪ್ತರಿಗೆ ವಿರೋಶ್ ಜೋಡಿಯ ಪಾರ್ಟಿ; ಮಹೆಂದಿ, ಹಳದಿ , ಸಂಗೀತ್ ಸೆರೆಮನಿ ದಿನಾಂಕ ಬಹಿರಂಗ
Recommended image2
'ಸ್ಪೀಕರ್​ ಆನ್​ ಇದೆ, ಎಲ್ಲರೂ ಇದ್ದಾರೆ': ಭಾವಿ ಪತಿಗೆ ಹಿಂಟ್​ ಕೊಟ್ಟು ಪೇಚಿನಲ್ಲಿ​ Rashmika Mandanna- ವಿಡಿಯೋ ವೈರಲ್
Recommended image3
ತಳ್ಳಬೇಡಿ ಪ್ಲೀಸ್, ಮುತ್ತಿಗೆ ಹಾಕಿದ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ನಟಿ ಸಾಯಿ ಪಲ್ಲವಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved