ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ ಸೆಲೆಬ್ರಿಟಿಗಳು..!
ಇಡೀ ದೇಶವೇ ಈಗ ಡೆಡ್ಲಿ ಕೊರೋನಾ ವೈರಸ್ ಎನ್ನುವ ಮಾರಿ ವಿರುದ್ಧ ಸಮರ ಸಾರಿದೆ. ಇದಕ್ಕೆ ದಿಗ್ಗಜರು ಆರ್ಥಿಕ ಸಹಾಯ ಮೂಲಕ ಸಾಥ್ ನೀಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಸರ್ಕಾರ ಜನರಿಗೆ ಅಗತ್ಯ ಸೇವೆಗಳು ಕೊರತೆಯಾಗದ್ದಂತೆ ನೋಡಿಕೊಳ್ಳಬೇಕಿದೆ. ಅಗತ್ಯ ವೈದ್ಯಕೀಯ ಸೌಲಭ್ಯ ಕೂಡ ಒದಗಿಸಬೇಕಿದೆ. ಇಂತಹ ಕಷ್ಟದ ಸಮಯದಲ್ಲಿ ಪರಿಹಾರ ಕಾರ್ಯಕ್ಕೆ ಸರ್ಕಾರದ ಜೊತೆ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ.
ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಕೊರೋನಾ ವೈರಸ್ ವಿರುದ್ಧ ಹೋರಾಡಲು ಆಂಧ್ರಪ್ರದೇಶ ಮತ್ತು ತೆಲಂಗಾಣ ಸಿಎಂ ಪರಿಹಾರ ನಿಧಿಗೆ 1 ಒಂದು ಕೋಟಿ ನೀಡಿದ್ದಾರೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿರುವ ಚಿರಂಜೀವಿ ಕೊರೋನಾ ವಿರುದ್ಧ ಹೋರಾಟಕ್ಕೆ 1 ಕೋಟಿ ನೀಡಿದ್ದಾರೆ. ಏಪ್ರಿಲ್ 14ರ ವರೆಗೂ ಲಾಕ್ ಡೌನ್ ಆಗಿರುವ ಪರಿಣಾಮ, ಕೂಲಿ ಕಾರ್ಮಿಕರ ಜೀವನಕ್ಕೆ ಕಷ್ಟವಾಗುತ್ತೆ ಎಂದು ಚಿರಂಜೀವಿ ಅವರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ 1 ಕೋಟಿ ನೀಡಿದ್ದಾರೆ.
ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಟ್ಟು 1.25 ಕೋಟಿ ರೂ. ನೀಡಿದ್ದಾರೆ.
ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಕ್ಕೆ ತಲಾ 50 ಲಕ್ಷ ರೂ ದೇಣಿಗೆ ನೀಡಿದ್ದಲ್ಲದೇ ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ಒಟ್ಟು 2 ಕೋಟಿ ರೂ. ಸಹಾಯ ಮಾಡಿದ್ದಾರೆ.
ನಟ ರಾಮ್ ಚರಣ್ ಕೂಡ ನೆರವಿಗೆ ದಾವಿಸಿದ್ದು, ಆಂಧ್ರ ಮತ್ತು ತೆಲಂಗಾಣ ಸಿಎಂ ಪರಿಹಾರ ನಿಧಿಗೆ 70 ಲಕ್ಷ ದೇಣಿಗೆ ನೀಡಿದ್ದಾರೆ.
ಜೂನಿಯರ್ ಎನ್ಟಿಆರ್ ತಮ್ಮ 75 ಲಕ್ಷ ರೂ. ಸಹಾಯ ಮಾಡಿದ್ದು, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಿಎಂ ಫಂಡ್ಗೆ 50 ಲಕ್ಷ ಮತ್ತು ತೆಲುಗು ಚಲನಚಿತ್ರೋದ್ಯಮದ ಕಾರ್ಮಿಕರಿಗೆ 25 ಲಕ್ಷ ರೂ. ಅನೌನ್ಸ್ ಮಾಡಿದ್ದಾರೆ.
ಮಹೇಶ್ ಬಾಬು ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣದ ಸಿಎಂ ರಿಲೀಫ್ ಫಂಡ್ಗೆ ತಲಾ 50 ಲಕ್ಷ ರೂ.ನಂತೆ ಒಟ್ಟು 1 ಕೋಟಿ ರೂ. ಘೋಷಣೆ ಮಾಡಿದ್ದಾರೆ,.