ಭಾರತ್ ಲಾಕ್ಡೌನ್: ಬಡವರ ಮನೆಗೆ ತೆರಳಿ ಉಚಿತ ಹಾಲು ವಿತರಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು(ಏ.02): ನಗರದ ಕೊಳೆಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಗುರುವಾರ) ಚಾಲನೆ ನೀಡಿದ್ದಾರೆ. ಕೊರೋನಾ ಸೋಂಕು ಹರಡದಿರಲು ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ಜನರು ಮನೆ ಬಿಟ್ಟು ಹೊರಗಡೆ ಬರದಿರಲಿ ಎಂಬ ಕಾರಣಕ್ಕೆ ಬಡವರಿಗೆ ಉಚಿತವಾಗಿ ಹಾಲು ವಿತರಿಸಲು ನಿರ್ಧರಿಸಲಾಗಿದೆ.
ಕೊಳಗೇರಿ ನಿವಾಸಿಗಳಿಗೆ ಉಚಿತ ಹಾಲು ವಿತರಿಸಿದ ಸಿಎಂ ಬಿ. ಎಸ್. ಯಡಿಯೂರಪ್ಪ
ಜನರು ಮನೆ ಬಿಟ್ಟು ಹೊರಗಡೆ ಬರದಿರಲಿ ಎಂಬ ಉದ್ದೇಶದಿಂದ ಮನೆ ಮನೆಗೆ ತೆರಳಿಸಿ ಹಾಲು ವಿತರಿಸಿದ ಸಿಎಂ
ಕೊರೋನಾ ಸೋಂಕು ತಡೆಗಟ್ಟಲು ಸಾಮಾಜಿಕ ಅಂತರವೇ ಮದ್ದು
ಸಿಎಂಗೆ ಸಾಥ್ ನೀಡಿದ ಡಿಸಿಎಂ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ