MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Ganesh Chaturthi Special Trains
Brics Summit 2026
Bengaluru Tunnel Road Business Corridor
ED Raid on Satish Jarkiholi
Karnataka Guarantee Schemes
Bengaluru Economy by 2037
Karnataka Apex Bank Election
BJP Padayatra
Prajwal Revanna Case
Duleep Trophy Final
Bengaluru-Mangaluru Vande Bharat
  • Home
  • Sports
  • Cricket
  • 2027ರ ಏಕದಿನ ವಿಶ್ವಕಪ್ ಬಗ್ಗೆ ಉಲ್ಟಾ ಹೊಡೆದ ರೋಹಿತ್ ಶರ್ಮಾ..! ಕೊನೆಯ ಕ್ಷಣದಲ್ಲಿ ಹೀಗ್ಯಾಕೆ ಅಂದ್ರು ಹಿಟ್‌ಮ್ಯಾನ್?

2027ರ ಏಕದಿನ ವಿಶ್ವಕಪ್ ಬಗ್ಗೆ ಉಲ್ಟಾ ಹೊಡೆದ ರೋಹಿತ್ ಶರ್ಮಾ..! ಕೊನೆಯ ಕ್ಷಣದಲ್ಲಿ ಹೀಗ್ಯಾಕೆ ಅಂದ್ರು ಹಿಟ್‌ಮ್ಯಾನ್?

ಬೆಂಗಳೂರು: 2027ರ ಐಸಿಸಿ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರೋಹಿತ್ ಶರ್ಮಾ, ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದರು. ಆದರೆ ಇದೀಗ ಹಿಟ್‌ಮ್ಯಾನ್ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

2 Min read
Author : Naveen Kodase
Published : Sep 11 2026, 11:01 AM IST
Share this Photo Gallery
  • FB
  • TW
  • Linkdin
  • Whatsapp
16
2027ರ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ರೋಹಿತ್
Image Credit : Instagram

2027ರ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ರೋಹಿತ್

ಕೆಲ ತಿಂಗಳ ಹಿಂದೆ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಸರಣಿಯಾಗಲಿದೆ ಎನ್ನುವ ಚರ್ಚೆ ಜೋರಾಗಿತ್ತು. ಅದಕ್ಕೆ ತಕ್ಕಂತೆ ರೋಹಿತ್ ಶರ್ಮಾ ಕೂಡಾ ಮೊದಲೆರಡು ಪಂದ್ಯಗಳಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ವೈಫಲ್ಯ ಅನುಭವಿಸಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ ರೋಹಿತ್ ಶರ್ಮಾ
Image Credit : Asianet News

ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ ರೋಹಿತ್ ಶರ್ಮಾ

ಹೀಗಾಗಿ ಲಾರ್ಡ್ಸ್‌ನಲ್ಲಿ ನಿಗದಿಯಾಗಿದ್ದ ಮೂರನೇ ಹಾಗೂ ನಿರ್ಣಾಯಕ ಪಂದ್ಯವು ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ ಎನ್ನುವ ಚರ್ಚೆಗಳ ನಡುವೆ ಹಿಟ್‌ಮ್ಯಾನ್ ಆಕರ್ಷಕ ಶತಕ ಸಿಡಿಸುವ ಮೂಲಕ ಎಲ್ಲಾ ಟೀಕಾಕಾರರ ಬಾಯಿ ಮುಚ್ಚಿಸಿದ್ದರು. ಈ ಮೂಲಕ ತಾನು 2027ರ ಏಕದಿನ ವಿಶ್ವಕಪ್ ಆಡಲು ಫಿಟ್ ಇದ್ದೇನೆ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದರು.

Related Articles

Related image1
ಕೊಲಂಬೋ ಟೆಸ್ಟ್‌ ವಿರಾಟ್ ಕೊಹ್ಲಿ ಆಡಿದ್ರೆ ಫಲಿತಾಂಶ ಬೇರೆಯದ್ದೇ ಆಗಿರ್ತಿತ್ತು ಎಂದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!
Related image2
IPL 2027 ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್‌ ತಂಡದಿಂದ 5 ಮಹತ್ವದ ಅಪ್‌ಡೇಟ್ಸ್‌..! ರೋಹಿತ್ ಶರ್ಮಾ ಹೆಗಲೇರಿದ ಮಹತ್ವದ ಜವಾಬ್ದಾರಿ
36
2027ರ ಏಕದಿನ ವಿಶ್ವಕಪ್‌ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ
Image Credit : BCCI

2027ರ ಏಕದಿನ ವಿಶ್ವಕಪ್‌ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ

ಇದೀಗ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಭಾರತದ ಮಾಜಿ ನಾಯಕ ರೋಹಿತ್‌ ಶರ್ಮಾ ಕೊನೆಗೂ ಮೌನ ಮುರಿದಿದ್ದು, ಅದಕ್ಕಿನ್ನೂ ಸಮಯವಿದೆ, ನೋಡೋಣ ಎಂದು ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡ ರೋಹಿತ್‌ಗೆ ಪತ್ರಕರ್ತರಿಂದ 2027ರ ವಿಶ್ವಕಪ್‌ ಬಗ್ಗೆ ಪ್ರಶ್ನೆ ಎದುರಾಯಿತು.

46
2027ರ ಏಕದಿನ ವಿಶ್ವಕಪ್‌ಗೆ ಇನ್ನೂ ಸಮಯವಿದೆ ಎಂದ ಹಿಟ್‌ಮ್ಯಾನ್
Image Credit : Getty

2027ರ ಏಕದಿನ ವಿಶ್ವಕಪ್‌ಗೆ ಇನ್ನೂ ಸಮಯವಿದೆ ಎಂದ ಹಿಟ್‌ಮ್ಯಾನ್

ಅದಕ್ಕೆ ಉತ್ತರಿಸಿದ ರೋಹಿತ್‌, ‘2027ರ ಅಕ್ಟೋಬರ್‌ಗೆ ಇನ್ನೂ ಸಮಯವಿದೆ. ಅದರ ಬಗ್ಗೆ ಆಗಲೇ ನೋಡೋಣ’ ಎಂದಿದ್ದಾರೆ. ಇನ್ನು, 2024ರ ವಿಶ್ವಕಪ್‌ ಗೆಲುವಿನ ಬಳಿಕ ಮುಂಬೈನಲ್ಲಿ ನಡೆದ ತೆರೆದ ಬಸ್‌ನ ವಿಜಯಯಾತ್ರೆ ರೀತಿ 2027ರ ವಿಶ್ವಕಪ್‌ ಗೆದ್ದ ಬಳಿಕವೂ ಪರೇಡ್‌ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್‌, ‘ಬಸ್ ಪರೇಡ್‌ ಈಗ ಸಾಧ್ಯವಿದೆ ಎಂದು ನನಗೆ ಅನಿಸುವುದಿಲ್ಲ’ ಎಂದಿದ್ದಾರೆ.

56
ಏಕದಿನ ವಿಶ್ವಕಪ್ ಗೆಲ್ಲದ ರೋಹಿತ್ ಶರ್ಮಾ
Image Credit : Asianet News

ಏಕದಿನ ವಿಶ್ವಕಪ್ ಗೆಲ್ಲದ ರೋಹಿತ್ ಶರ್ಮಾ

ರೋಹಿತ್ ಶರ್ಮಾ ಒಮ್ಮೆ ಆಟಗಾರನಾಗಿ ಹಾಗೂ ಒಮ್ಮೆ ನಾಯಕನಾಗಿ ಒಟ್ಟು ಎರಡು ಟಿ20 ವಿಶ್ವಕಪ್ ಜಯಿಸಿದ್ದಾರೆ. ಅದೇ ರೀತಿ ಒಮ್ಮೆ ಆಟಗಾರನಾಗಿ ಹಾಗೂ ಒಮ್ಮೆ ನಾಯಕನಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಜಯಿಸಿದ್ದಾರೆ. ಆಟಗಾರನಾಗಿ ಒಮ್ಮೆಯೂ ಏಕದಿನ ವಿಶ್ವಕಪ್ ಗೆಲ್ಲಲು ರೋಹಿತ್ ಶರ್ಮಾಗೆ ಸಾಧ್ಯವಾಗಿಲ್ಲ. ಅದೊಂದು ಕೊರಗು ಈಗಲೂ ರೋಹಿತ್‌ಗೆ ಇದೆ.

66
ಅಭಿಮಾನಿಗಳನ್ನು ಗೊಂದಲಕ್ಕೆ ದೂಡಿದ ರೋಹಿತ್ ಶರ್ಮಾ ಮಾತು
Image Credit : Getty

ಅಭಿಮಾನಿಗಳನ್ನು ಗೊಂದಲಕ್ಕೆ ದೂಡಿದ ರೋಹಿತ್ ಶರ್ಮಾ ಮಾತು

2011ರಲ್ಲಿ ಭಾರತ ತಂಡವು ಏಕದಿನ ವಿಶ್ವಕಪ್ ಗೆದ್ದಾಗ ರೋಹಿತ್ ಶರ್ಮಾಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದಾದ ಬಳಿಕ 2015 ಹಾಗೂ 2019 ಏಕದಿನ ವಿಶ್ವಕಪ್‌ನಲ್ಲಿ ಭಾರತ ಸೆಮೀಸ್‌ನಲ್ಲೇ ಮುಗ್ಗರಿಸಿತ್ತು. ಇನ್ನು 2023ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಅಜೇಯವಾಗಿ ಫೈನಲ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಆಸ್ಟ್ರೇಲಿಯಾಗೆ ಶರಣಾಗಿತ್ತು. ಇದೀಗ ರೋಹಿತ್ ಶರ್ಮಾ ಅವರ ಈ ಹೇಳಿಕೆ ಅಭಿಮಾನಿಗಳನ್ನು ಗೊಂದಲಕ್ಕೆ ಸಿಲುಕಿಸಿರುವುದಂತೂ ಸುಳ್ಳಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ರೋಹಿತ್ ಶರ್ಮಾ
ಐಸಿಸಿ ಏಕದಿನ ವಿಶ್ವಕಪ್
ಟೀಮ್ ಇಂಡಿಯಾ

Latest Videos
Recommended Stories
Recommended image1
ದುಲೀಪ್ ಟ್ರೋಫಿ: 13 ವರ್ಷಗಳ ಟ್ರೋಫಿ ಗೆದ್ದ ಪೂರ್ವ ವಲಯ..! ದಕ್ಷಿಣ ವಲಯ ನಾಯಕನಿಗೆ ಸರಣಿ ಶ್ರೇಷ್ಠ ಪ್ರಶಸ್ತಿ
Recommended image2
Cricket: ಭಾರತ-ಅಫ್ಘಾನಿಸ್ತಾನ್ 1ನೇ ಟಿ20 ಪಂದ್ಯ ರದ್ದು?: ಆ ಒಂದು ಪತ್ರದ ಗೊಂದಲ, ಬಿಬಿಸಿಐ ಕೊಟ್ಟ ಸ್ಪಷ್ಟನೆ ಏನು?
Recommended image3
ಫೈನಲ್ ಮ್ಯಾಚ್‌ ಡ್ರಾ ಆದರೂ ದುಲಿಪ್ ಟ್ರೋಫಿ ಎತ್ತಿಹಿಡಿದ ಕಿಶನ್; ಗೆದ್ದ ತಂಡಕ್ಕೆ ಸಿಕ್ಕಿದ್ದು ಎಷ್ಟು ಕೋಟಿ?
Related Stories
Recommended image1
ಕೊಲಂಬೋ ಟೆಸ್ಟ್‌ ವಿರಾಟ್ ಕೊಹ್ಲಿ ಆಡಿದ್ರೆ ಫಲಿತಾಂಶ ಬೇರೆಯದ್ದೇ ಆಗಿರ್ತಿತ್ತು ಎಂದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!
Recommended image2
IPL 2027 ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್‌ ತಂಡದಿಂದ 5 ಮಹತ್ವದ ಅಪ್‌ಡೇಟ್ಸ್‌..! ರೋಹಿತ್ ಶರ್ಮಾ ಹೆಗಲೇರಿದ ಮಹತ್ವದ ಜವಾಬ್ದಾರಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved