MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಸೌರವ್ ಗಂಗೂಲಿ BCCI ಅಧ್ಯಕ್ಷರಾದ ಬಳಿಕ ತೆಗೆದುಕೊಂಡ 3 ಅತಿದೊಡ್ಡ ತೀರ್ಮಾನಗಳಿವು...!

ಸೌರವ್ ಗಂಗೂಲಿ BCCI ಅಧ್ಯಕ್ಷರಾದ ಬಳಿಕ ತೆಗೆದುಕೊಂಡ 3 ಅತಿದೊಡ್ಡ ತೀರ್ಮಾನಗಳಿವು...!

ಬೆಂಗಳೂರು: ಭಾರತ ಕ್ರಿಕೆಟ್ ತಂಡ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದ ಸೌರವ್ ಗಂಗೂಲಿ, ಕ್ರಿಕೆಟ್ ಆಡಳಿತದ ವಿಚಾರದಲ್ಲೂ ತಮ್ಮ ದಿಟ್ಟ ನಿಲುವುಗಳನ್ನು ತಳೆಯುವ ಮೂಲಕ ಆಡಳಿತಾಧಿಕಾರಿಯಾಗಿ ಸೈ ಎನಿಸಿಕೊಂಡಿದ್ದರು. ಬಿಸಿಸಿಐ ಅಧ್ಯಕ್ಷರಾವಧಿಯ ಸಂಧ್ಯಾಕಾಲದಲ್ಲಿರುವ ದಾದಾ ಅವರ ತಮ್ಮ ಅಧಿಕಾರವಧಿಯಲ್ಲಿ ತೆಗೆದುಕೊಂಡ ಮೂರು ದಿಟ್ಟ ತೀರ್ಮಾನಗಳ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ. 

1 Min read
Naveen Kodase
Published : Oct 12 2022, 03:25 PM IST
Share this Photo Gallery
  • FB
  • TW
  • Linkdin
  • Whatsapp
17

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ 2019ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಇದಾದ ಬಳಿಕ ತಾವೊಬ್ಬ ಒಳ್ಳೆಯ ನಾಯಕ ಮಾತ್ರವಲ್ಲದೇ, ಅತ್ಯುತ್ತಮ ಆಟಗಾರ ಎನ್ನುವುದನ್ನು ಬಿಸಿಸಿಐ ಅಧ್ಯಕ್ಷರಾಗಿ ಸಾಬೀತುಪಡಿಸಿದ್ದಾರೆ.

27

1. ಬಿಸಿಸಿಐ ಅಧ್ಯಕ್ಷರಾದ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಹಗಲು-ರಾತ್ರಿ ಪಂದ್ಯ ಆಯೋಜಿಸಿದ ದಾದಾ:
ಜಗತ್ತಿನ ಹಲವು ರಾಷ್ಟ್ರಗಳು ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಡಲು ಆರಂಭಿಸಿ ವರ್ಷಗಳೇ ಕಳೆದರು, ಭಾರತದಲ್ಲಿ ಹಗಲು-ರಾತ್ರಿ ಟೆಸ್ಟ್‌ ಪಂದ್ಯಕ್ಕೆ ಒಪ್ಪಿಗೆ ಸಿಕ್ಕಿರಲಿಲ್ಲ.

37

ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಬಳಿಕ, ಭಾರತ ತಂಡವನ್ನು ಪಿಂಕ್ ಬಾಲ್ ಟೆಸ್ಟ್‌ ಪಂದ್ಯವನ್ನಾಡಲು ಮನವೊಲಿಸಿದರು. ಪರಿಣಾಮ 2019ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಮೊದಲ ಬಾರಿಗೆ ತವರಿನಲ್ಲಿ ಪಿಂಕ್ ಬಾಲ್ ಟೆಸ್ಟ್‌ ಪಂದ್ಯವನ್ನಾಡಿತು.

47

2. ಕೋವಿಡ್ ಭೀತಿಯ ನಡುವೆಯೇ ಐಪಿಎಲ್ ನಡೆಸಿ ಸೈ ಎನಿಸಿಕೊಂಡ ದಾದಾ  
ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಮರು ವರ್ಷವೇ ಕೋವಿಡ್ ಹೆಮ್ಮಾರಿ ಜಗತ್ತನ್ನೇ ಕಾಡಿತು. ದೃತಿಗೆಡದ ಸೌರವ್ ಗಂಗೂಲಿ ಕೋವಿಡ್ ಭೀತಿಯ ನಡುವೆಯೂ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಿ ಕ್ರಿಕೆಟ್‌ ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದರು.

57

2020ರ ಸಂಪೂರ್ಣ ಐಪಿಎಲ್ ಟೂರ್ನಿಯನ್ನು ದಾದಾ ಯುಎಇನಲ್ಲಿ ನಡೆಸಿ ಸೈ ಎನಿಸಿಕೊಂಡರೆ, 2021ರ ಐಪಿಎಲ್‌ನ ಅರ್ಧಭಾಗವನ್ನು ಯುಎಇನಲ್ಲಿ ಆಯೋಜಿಸಿ ಯಶಸ್ವಿಯಾದರು. ಇನ್ನು 2022ರ ಐಪಿಎಲ್‌ ಅನ್ನು ಭಾರತದ ಆಯ್ದ ಸ್ಟೇಡಿಯಂನಲ್ಲಿ ಯಾವುದೇ ತೊಂದರೆಯಾಗದಂತೆ ನಡೆಸಿ ಟೂರ್ನಿ ಯಶಸ್ವಿಯಾಗುವಂತೆ ನೋಡಿಕೊಂಡರು.
 

67
<p>“Yeah, absolutely. April, May we’ll have another one [IPL 2021 season]. The UAE was only for the IPL. We will host England in India. We will host the domestic cricket in India. Ranji Trophy, we will create bio-bubble and we will do it,” Ganguly was quoted as saying to <em>India Today</em>.</p>

<p>“Yeah, absolutely. April, May we’ll have another one [IPL 2021 season]. The UAE was only for the IPL. We will host England in India. We will host the domestic cricket in India. Ranji Trophy, we will create bio-bubble and we will do it,” Ganguly was quoted as saying to <em>India Today</em>.</p>

3. ದೇಶಿ ಕ್ರಿಕೆಟಿಗರ ವೇತನ ಹೆಚ್ಚು ಮಾಡಿದ ಸೌರವ್ ಗಂಗೂಲಿ:
ಭಾರತದಲ್ಲಿ ಅಸಂಖ್ಯಾತ ಪ್ರತಿಭಾವಂತ ಕ್ರಿಕೆಟಿಗರಿದ್ದಾರೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ದೇಶಿ ಕ್ರಿಕೆಟ್‌ನ ವಾತಾವರಣ ಉತ್ತಮವಾಗಿರುವುದರಿಂದಲೇ, ಭಾರತ ಇಂದು ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದು ಎನಿಸಿದೆ.

77

ದೇಶಿ ಕ್ರಿಕೆಟ್‌ನಲ್ಲಿನ ಆಟಗಾರರ ಪ್ರತಿಭೆ ಪ್ರೋತ್ಸಾಹಿಸಲು, ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ, ದೇಶಿ ಕ್ರಿಕೆಟ್ ಆಟಗಾರರ ವೇತನವನ್ನು ಗಣನೀಯವಾಗಿ ಹೆಚ್ಚಿಸಿದರು. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಸೌರವ್ ಗಂಗೂಲಿ
ಬಿಸಿಸಿಐ

Latest Videos
Recommended Stories
Recommended image1
14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
Recommended image2
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
Recommended image3
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved