MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಟೀಂ ಇಂಡಿಯಾಗೆ ಹೊಸ ಅಸ್ತ್ರ ಸೇರ್ಪಡೆ, ಉಳಿದ ತಂಡಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ: ಎಬಿ ಡಿ ವಿಲಿಯರ್ಸ್ ಅಚ್ಚರಿಯ ಮಾತು

ಟೀಂ ಇಂಡಿಯಾಗೆ ಹೊಸ ಅಸ್ತ್ರ ಸೇರ್ಪಡೆ, ಉಳಿದ ತಂಡಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ: ಎಬಿ ಡಿ ವಿಲಿಯರ್ಸ್ ಅಚ್ಚರಿಯ ಮಾತು

ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಹೊಸ ಅಸ್ತ್ರ ಸೇರ್ಪಡೆಯಾಗಿದೆ. ಇದೀಗ ಆ ಅಸ್ತ್ರದ ಬಗ್ಗೆ ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎನಿಸಿಕೊಂಡಿರುವ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

2 Min read
Author : Naveen Kodase
| Updated : Sep 26 2023, 02:09 PM IST
Share this Photo Gallery
  • FB
  • TW
  • Linkdin
  • Whatsapp
110

ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಿ ನವೆಂಬರ್ 19ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ.
 

210

ನವೆಂಬರ್ 05ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಆವೃತ್ತಿಯ ವಿಶ್ವಕಪ್ ರನ್ನರ್ ಅಪ್ ನ್ಯೂಜಿಲೆಂಡ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ.
 

310

ಇನ್ನು ಆತಿಥೇಯ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಅಕ್ಟೋಬರ್ 08ರಂದು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
 

410

ವಿಶ್ವಕಪ್ ಟೂರ್ನಿಗೆ ಪಾಲ್ಗೊಳ್ಳುವ ಮುನ್ನ ಟೀಂ ಇಂಡಿಯಾ ಕೊನೆಯ ಹಂತದ ತಯಾರಿಯಲ್ಲಿದೆ. ಹೀಗಾಗಿ ಆಸ್ಟ್ರೇಲಿಯಾ ಎದುರು ತವರಿನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಸದ್ಯ ಮೊದಲೆರಡು ಪಂದ್ಯಗಳನ್ನು ಜಯಿಸುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
 

510

ಇನ್ನು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದ ವೇಳೆ ಟೀಂ ಇಂಡಿಯಾ ಆಲ್ರೌಂಡರ್ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ಹೀಗಾಗಿ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ಗೆ ಭಾರತ ತಂಡಕ್ಕೆ ಬುಲಾವ್ ಬಂದಿತ್ತು.

610

ಬಿಸಿಸಿಐ ಆಯ್ಕೆ ಸಮಿತಿ ಹಾಗೂ ಟೀಂ ಮ್ಯಾನೇಜ್‌ಮೆಂಟ್‌ ತೆಗೆದುಕೊಂಡ ಮಾಸ್ಟರ್ ಪ್ಲಾನ್, ತಂಡದ ಕೈಹಿಡಿದಂತಿದ್ದು, ಮೊದಲೆರಡು ಪಂದ್ಯಗಳಲ್ಲಿ ಅಶ್ವಿನ್ ಶಿಸ್ತುಬದ್ದ ದಾಳಿ ನಡೆಸುವ ಮೂಲಕ 4 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ. ಹೀಗಾಗಿ ಅಶ್ವಿನ್ ಕೊನೆಯ ಕ್ಷಣದಲ್ಲಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.

710

ಈ ಕುರಿತಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್, ರವಿಚಂದ್ರನ್ ಅಶ್ವಿನ್ ಅವರನ್ನು ಭಾರತ ತಂಡದೊಳಗೆ ಸೇರಿಸಿಕೊಂಡಿರುವುದು ಉಳಿದ ಎದುರಾಳಿ ತಂಡಗಳ ಪಾಲಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

"ಇದಂತೂ ಯಾರೂ ಊಹೆ ಮಾಡಲೂ ಸಾಧ್ಯವಾಗದಂತ ತೀರ್ಮಾನವಾಗಿದೆ. ಇದು ಉಳಿದ ತಂಡಗಳ ಪಾಲಿಗೆ ಒಳ್ಳೆಯ ಸುದ್ದಿಯಂತೂ ಅಲ್ಲವೇ ಅಲ್ಲ. ತುಂಬಾ ಅನುಭವಿ, ಚಾಣಾಕ್ಷ, ಒತ್ತಡದ ಪರಿಸ್ಥಿತಿಯಲ್ಲೂ ಪರಿಣಾಮಕಾರಿ ಆಟವಾಡಬಲ್ಲ, ಅಸಾಧಾರಣ ಕೌಶಲ್ಯಗಳನ್ನು ಹೊಂದಿರುವ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಉಪಯುಕ್ತ ಕಾಣಿಕೆ ನೀಡಬಲ್ಲ ಆಟಗಾರ ಅಶ್ವಿನ್ ಎಂದು ಎಬಿಡಿ ಬಣ್ಣಿಸಿದ್ದಾರೆ.

810

ಅಶ್ವಿನ್ ತಂಡ ಕೂಡಿಕೊಂಡಿದ್ದು ನಿಜಕ್ಕೂ ಭಾರತಕ್ಕೆ ತುಂಬಾ ಪ್ರಯೋಜನವಾಗಲಿದೆ. ಅವರ್ಯಾಕೆ ಇಷ್ಟು ಕಾಲ ಭಾರತ ಸೀಮಿತ ಓವರ್‌ಗಳ ತಂಡದಲ್ಲಿರಲಿಲ್ಲವೆಂದು ಅರ್ಥವಾಗುತ್ತಿಲ್ಲ. ನಾನು ಅವರ ಅತಿದೊಡ್ಡ ಅಭಿಮಾನಿ. ಅವರು ಯಾವಾಗಲೂ ತಂಡದ ಗೆಲುವಿಗಾಗಿಯೇ ಚಿಂತಿಸುತ್ತಿರುತ್ತಾರೆ. ಅವರು ಪಂದ್ಯದಲ್ಲಿ ಇಂಪ್ಯಾಕ್ಟ್ ಮಾಡಬಲ್ಲ ಆಟಗಾರರಾಗಿದ್ದಾರೆ ಎಂದು ಎಬಿಡಿ ಹೇಳಿದ್ದಾರೆ.

910

ಅವರು ಒತ್ತಡದ ಪರಿಸ್ಥಿತಿಯಲ್ಲಿ ಚೆನ್ನಾಗಿ ಬೌಲಿಂಗ್ ಮಾಡಲು ಇಷ್ಟಪಡುತ್ತಾರೆ. ಒತ್ತಡದ ಪರಿಸ್ಥಿತಿಯಲ್ಲಿ ಅವರು ಬೌಲಿಂಗ್ ಮಾಡಲು ಹಿಂಜರಿಯುವಂತ ಆಟಗಾರ ಅವರಲ್ಲ ಎಂದು ಅಶ್ವಿನ್ ಪ್ರತಿಭೆಯನ್ನು ಎಬಿಡಿ ಕೊಂಡಾಡಿದ್ದಾರೆ.
 

1010

ವಿಶ್ವಕಪ್ ಟೂರ್ನಿಗೆ ತಂಡವನ್ನು ಅಂತಿಮಗೊಳಿಸಲು ಸೆಪ್ಟೆಂಬರ್ 27 ಕೊನೆಯ ದಿನಾಂಕವಾಗಿದ್ದು, ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಬಿಸಿಸಿಐ
ಕ್ರಿಕೆಟ್
ಟೀಮ್ ಇಂಡಿಯಾ

Latest Videos
Recommended Stories
Recommended image1
'ಇದು ಸೋಲಲ್ಲ, ಭಾರತಕ್ಕೆ ಆದ ಅವಮಾನ': ಟೀಮ್ ಇಂಡಿಯಾ ಹೀನಾಯ ಸೋಲಿಗೆ ಪಾಕ್ ಮಾಜಿ ಆಟಗಾರರ ಕುಚೋದ್ಯ!
Recommended image2
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
Recommended image3
ಟಿ20 ವಿಶ್ವಕಪ್‌: ವೆಸ್ಟ್‌ಇಂಡೀಸ್‌ಗೂ ಶಾಕ್‌ ನೀಡಿ ಗೆಲ್ಲುತ್ತಾ ಜಿಂಬಾಬ್ವೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved