- Home
- Sports
- Cricket
- Asia Cup 2023: ನೇಪಾಳ ಎದುರಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಮೇಜರ್ ಚೇಂಜ್..! ಯಾರಿಗೆ ಸಿಗುತ್ತೆ ಸ್ಥಾನ?
Asia Cup 2023: ನೇಪಾಳ ಎದುರಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಮೇಜರ್ ಚೇಂಜ್..! ಯಾರಿಗೆ ಸಿಗುತ್ತೆ ಸ್ಥಾನ?
ಪಲ್ಲೆಕೆಲೆ(ಸೆ.04): ಭಾರತ ಹಾಗೂ ನೇಪಾಳ ತಂಡಗಳ ನಡುವಿನ ಏಷ್ಯಾಕಪ್ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಎರಡನೇ ಪಂದ್ಯದಲ್ಲಿ ಗೆಲ್ಲಲು ರೋಹಿತ್ ಶರ್ಮಾ ಪಡೆ ತುದಿಗಾಲಿನಲ್ಲಿ ನಿಂತಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತವಾಗಿದೆ. ನೇಪಾಳ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ.

1. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ದುರ್ಬಲ ನೇಪಾಳ ಎದುರು ದೊಡ್ಡ ಇನಿಂಗ್ಸ್ ಆಡಲು ಹಿಟ್ಮ್ಯಾನ್ ಎದುರು ನೋಡುತ್ತಿದ್ದಾರೆ.
2. ಶುಭ್ಮನ್ ಗಿಲ್:
16ನೇ ಆವೃತ್ತಿಯ ಐಪಿಎಲ್ ಬಳಿಕ ಮಂಕಾಗಿರುವ ಮತ್ತೋರ್ವ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್, ಫಾರ್ಮ್ಗೆ ಮರಳಲು ಇದು ಸುವರ್ಣಾವಕಾಶವಾಗಿದೆ. ಗಿಲ್ ಕಳೆದ ಪಂದ್ಯದಲ್ಲಿ ಕೇವಲ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು.
3. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಪಾಕ್ ಎದುರು ಕೇವಲ ಒಂದಂಕಿ(04) ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಸೂಪರ್ 4 ಹಂತಕ್ಕೂ ಮುನ್ನ ಕೊಹ್ಲಿ ಲಯಕ್ಕೆ ಮರಳಲು ಎದುರು ನೋಡುತ್ತಿದ್ದಾರೆ.
4. ಶ್ರೇಯಸ್ ಅಯ್ಯರ್:
ದೀರ್ಘ ಸಮಯದ ಬಳಿಕ ತಂಡಕ್ಕೆ ಕಮ್ಬ್ಯಾಕ್ ಮಾಡಿರುವ ಶ್ರೇಯಸ್ ಅಯ್ಯರ್ ಪಾಕ್ ಎದುರು ಕೇವಲ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇಂದು ನೇಪಾಳ ಎದುರು ದೊಡ್ಡ ಇನಿಂಗ್ಸ್ ಆಡುವ ನಿರೀಕ್ಷೆಯಲ್ಲಿದ್ದಾರೆ ಮುಂಬೈ ಕ್ರಿಕೆಟಿಗ.
5. ಇಶಾನ್ ಕಿಶನ್:
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ಏಕದಿನ ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನದ ಮೂಲಕ ಮಿಂಚುತ್ತಿದ್ದು, ಕಳೆದ ಪಂದ್ಯದಲ್ಲಿ ಆಕರ್ಷಕ 82 ರನ್ ಸಿಡಿಸಿದ್ದರು. ಇಶಾನ್ ಕಿಶನ್ ತಮ್ಮ ಫಾರ್ಮ್ ಮುಂದುವರೆಸಿಕೊಂಡು ಹೋಗಲು ಹಾತೊರೆಯುತ್ತಿದ್ದಾರೆ.
6. ಹಾರ್ದಿಕ್ ಪಾಂಡ್ಯ:
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಪಾಕ್ ಎದುರಿನ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಿಭಾಯಿಸಿದ್ದರು. ಪಾಂಡ್ಯ 87 ರನ್ ಬಾರಿಸಿ ಮಿಂಚಿದ್ದರು.
7. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಮತ್ತೋರ್ವ ಆಲ್ರೌಂಡರ್ ಜಡೇಜಾ, ಕಳೆದ ಪಂದ್ಯದಲ್ಲಿ ಪಾಕ್ ಎದುರು ಕೇವಲ 14 ರನ್ ಬಾರಿಸಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಇಂದು ಅವಕಾಶ ಸಿಕ್ಕಿದರೆ ಮಿಂಚುವ ವಿಶ್ವಾಸದಲ್ಲಿದ್ದಾರೆ.
8. ಶಾರ್ದೂಲ್ ಠಾಕೂರ್:
ಟೀಂ ಇಂಡಿಯಾ ಮತ್ತೋರ್ವ ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಕಳೆದ ಪಂದ್ಯದಲ್ಲಿ ಕೇವಲ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇಂದು ಠಾಕೂರ್ ಬೌಲಿಂಗ್& ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.
9. ಕುಲ್ದೀಪ್ ಯಾದವ್:
ಟೀಂ ಇಂಡಿಯಾ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್ ಕಳೆದ ಪಂದ್ಯದಲ್ಲಿ ಬೌಲಿಂಗ್ ಮಾಡಲು ಮಳೆರಾಯ ಅವಕಾಶ ಮಾಡಿಕೊಟ್ಟಿರಲಿಲ್ಲ. ಇಂದು ನೇಪಾಳ ಬ್ಯಾಟರ್ ಕಾಡಲು ಕುಲ್ದೀಪ್ ಸಜ್ಜಾಗಿದ್ದಾರೆ.
10. ಮೊಹಮ್ಮದ್ ಶಮಿ:
ಜಸ್ಪ್ರೀತ್ ಬುಮ್ರಾ ತವರಿಗೆ ವಾಪಾಸ್ಸಾಗಿದ್ದರಿಂದ ಬುಮ್ರಾ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಇಂದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.
11. ಮೊಹಮ್ಮದ್ ಸಿರಾಜ್:
ಹೈದರಾಬಾದ್ ಮೂಲದ ಮಾರಕ ವೇಗಿ ಮೊಹಮ್ಮದ್ ಸಿರಾಜ್ಗೂ ಕೂಡಾ ಕಳೆದ ಪಂದ್ಯದಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ನೇಪಾಳ ಬ್ಯಾಟರ್ಗಳ ಎದುರು ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.