MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಏಷ್ಯಾಕಪ್ ಟೂರ್ನಿಗೆ ಭಾರತ ತಂಡ: 3 ದಿಟ್ಟ ತೀರ್ಮಾನಕ್ಕೆ ಕೈಹಾಕಿದ ಬಿಸಿಸಿಐ! ಮೂವರಿಗೆ ನಿರಾಸೆ?

ಏಷ್ಯಾಕಪ್ ಟೂರ್ನಿಗೆ ಭಾರತ ತಂಡ: 3 ದಿಟ್ಟ ತೀರ್ಮಾನಕ್ಕೆ ಕೈಹಾಕಿದ ಬಿಸಿಸಿಐ! ಮೂವರಿಗೆ ನಿರಾಸೆ?

ಬೆಂಗಳೂರು: ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಟೂರ್ನಿಯು ಯುಎಇನ ದುಬೈ ಹಾಗೂ ಅಬುದಾಬಿಯಲ್ಲಿ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತ ತಂಡ ಪ್ರಕಟಣೆಗೂ ಕೌಂಟ್‌ಡೌನ್ ಶುರುವಾಗಿದೆ.

2 Min read
Naveen Kodase
Published : Aug 18 2025, 02:06 PM IST
Share this Photo Gallery
  • FB
  • TW
  • Linkdin
  • Whatsapp
19
Image Credit : Getty

ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ 09ರಿಂದ ಆರಂಭವಾಗಲಿದೆ. ಭಾರತ ತಂಡವು ಮತ್ತೊಮ್ಮೆ ಏಷ್ಯಾಕಪ್ ಟ್ರೋಫಿ ಉಳಿಸಿಕೊಳ್ಳಲು ಎದುರು ನೋಡುತ್ತಿದೆ.

29
Image Credit : Getty

ಅಜಿತ್‌ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಆಗಸ್ಟ್‌ 19ರಂದು ಮುಂಬೈನಲ್ಲಿ ಸಭೆ ಸೇರಲಿದ್ದು, ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಿದ್ದಾರೆ.

Related Articles

Related image1
ಏಷ್ಯಾಕಪ್ 2025: ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ ಪಾಕ್ ತಂಡದಿಂದ ಹೊರಬಿದ್ದಿದ್ದೇಕೆ?
Related image2
ಏಷ್ಯಾಕಪ್ ಟೂರ್ನಿಗೆ ಅಚ್ಚರಿಯ ಭಾರತ ತಂಡವನ್ನು ಆಯ್ಕೆ ಮಾಡಿದ ಭಜ್ಜಿ; ಸಂಜು ಸ್ಯಾಮ್ಸನ್‌ಗಿಲ್ಲ ಸ್ಥಾನ
39
Image Credit : Getty

ಕ್ರಿಕ್‌ಬಜ್ ವೆಬ್‌ಸೈಟ್ ವರದಿಯ ಪ್ರಕಾರ, ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಮೂರು ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ. ಆ 3 ತೀರ್ಮಾನಗಳು ಏನು ಎನ್ನುವುದನ್ನು ನೋಡೋಣ ಬನ್ನಿ

49
Image Credit : X

1. ಶುಭ್‌ಮನ್ ಗಿಲ್‌ಗಿಲ್ಲ ಸ್ಥಾನ

ವೆಬ್‌ಸೈಟ್ ವರದಿಯ ಪ್ರಕಾರ, ಬಿಸಿಸಿಐ ಆಯ್ಕೆ ಸಮಿತಿಯು ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಅವರನ್ನೇ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡದ ಆರಂಭಿಕರನ್ನಾಗಿ ಆಯ್ಕೆ ಮಾಡಲು ತೀರ್ಮಾನಿಸಿದೆ ಎಂದು ವರದಿಯಾಗಿದೆ.

59
Image Credit : Getty

ಇದರ ಜತೆಗೆ ನಂ.3 ಆಟಗಾರನಾಗಿ ಎಡಗೈ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್‌ಗೆ ಮಣೆಹಾಕಲು ಆಯ್ಕೆ ಸಮಿತಿ ತೀರ್ಮಾನಿಸಿದೆ ಎನ್ನಲಾಗಿದೆ. ಹೀಗಾಗಿ ಶುಭ್‌ಮನ್ ಗಿಲ್ ಅವರನ್ನು ಕೈಬಿಡಲು ಆಯ್ಕೆ ಸಮಿತಿ ಆಲೋಚಿಸಿದೆ ಎಂದು ವರದಿಯಾಗಿದೆ. ಈ ಮೊದಲು ಗಿಲ್‌ಗೆ ಏಷ್ಯಾಕಪ್ ಟೂರ್ನಿಗೆ ಆಯ್ಕೆ ಮಾಡುವುದರ ಜತೆಗೆ ಉಪನಾಯಕ ಪಟ್ಟ ಕಟ್ಟಲು ಚಿಂತನೆ ನಡೆಯುತ್ತಿದೆ ಎಂದು ವರದಿಯಾಗಿತ್ತು.

69
Image Credit : Getty

2. ಮೊಹಮ್ಮದ್‌ ಸಿರಾಜ್‌ಗೆ ವಿಶ್ರಾಂತಿ:

ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ 23 ವಿಕೆಟ್ ಕಬಳಿಸುವ ಮೂಲಕ ಸರಣಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದ ಸಿರಾಜ್‌ಗೆ ಏಷ್ಯಾಕಪ್ ಟೂರ್ನಿಯಿಂದ ರೆಸ್ಟ್ ನೀಡಲು ಆಯ್ಕೆ ಸಮಿತಿ ತೀರ್ಮಾನಿಸಿದೆ ಎಂದು ವರದಿಯಾಗಿದೆ.

79
Image Credit : Getty

ಏಷ್ಯಾಕಪ್ ಟೂರ್ನಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಹೈದರಾಬಾದ್ ಮೂಲದ ವೇಗಿ ಸಿರಾಜ್‌ಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ತೀರ್ಮಾನಿಸಿದೆ ಎಂದು ವರದಿಯಾಗಿದೆ.

89
Image Credit : Getty

3. ಶ್ರೇಯಸ್ ಅಯ್ಯರ್‌ಗೂ ಸಿಗಲ್ಲ ಚಾನ್ಸ್!

ಐಪಿಎಲ್‌ನಲ್ಲಿ ನಾಯಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಅಯ್ಯರ್‌ಗೆ ಮತ್ತೊಮ್ಮೆ ನಿರಾಸೆ ಕಾದಿದೆ ಎನ್ನುವುದು ಬಹುತೇಕ ಖಚಿತವಾಗಿದೆ.

99
Image Credit : ANI

ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಭಾರತ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಸ್ಥಾನ ಪಡೆಯಲಿದ್ದು, ಮುಂಬೈ ಮೂಲದ ಅಯ್ಯರ್‌ಗೆ ಟಿ20 ತಂಡದಲ್ಲಿ ಸ್ಥಾನ ಸಿಗಲು ಮತ್ತಷ್ಟು ಸಮಯಕಾಯಬೇಕಾಗಿ ಬರಬಹುದು.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಏಷ್ಯಾ ಕಪ್
ಬಿಸಿಸಿಐ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved