- Home
- Sports
- Cricket
- Asia Cup 2025 ಟೂರ್ನಿಗೆ ಭಾರತದ 17 ಆಟಗಾರರ ಹೆಸರು ಫೈನಲ್! ಘೋಷಣೆಯೊಂದೇ ಬಾಕಿ? ಸಂಭಾವ್ಯ ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?
Asia Cup 2025 ಟೂರ್ನಿಗೆ ಭಾರತದ 17 ಆಟಗಾರರ ಹೆಸರು ಫೈನಲ್! ಘೋಷಣೆಯೊಂದೇ ಬಾಕಿ? ಸಂಭಾವ್ಯ ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?
ಬೆಂಗಳೂರು: ಏಷ್ಯಾಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಆದರೆ ಹಾಲಿ ಚಾಂಪಿಯನ್ ಭಾರತ ತಂಡದ ಘೋಷಣೆ ಇನ್ನೂ ಆಗಿಲ್ಲ. ಕೆಲವೇ ದಿನಗಳಲ್ಲಿ ತಂಡದ ಅಂತಿಮ ಪಟ್ಟಿ ಹೊರಬೀಳಲಿದೆ. ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

2025ರ ಏಷ್ಯಾಕಪ್ ಟೂರ್ನಿಗೆ ಕೌಂಟ್ ಡೌನ್ ಶುರುವಾಗಿದೆ. ಸೆಪ್ಟೆಂಬರ್ 09ರಿಂದ ಅಧಿಕೃತವಾಗಿ ಏಷ್ಯಾಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಏಷ್ಯಾದ 8 ಬಲಿಷ್ಠ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
ಹಾಲಿ ಚಾಂಪಿಯನ್ ಭಾರತ ಈ ಬಾರಿ ಕೂಡಾ ಏಷ್ಯಾಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಇದುವರೆಗೂ ಏಷ್ಯಾಕಪ್ ಟೂರ್ನಿಗೆ ಬಿಸಿಸಿಐ ಅಧಿಕೃತವಾಗಿ ಭಾರತ ತಂಡವನ್ನು ಪ್ರಕಟಿಸಿಲ್ಲ.
ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು, ಏಷ್ಯಾಕಪ್ ಟೂರ್ನಿಯನ್ನು ಈ ಬಾರಿ ಟಿ20 ಮಾದರಿಯಲ್ಲಿ ನಡೆಸಲು ಆಯೋಜಕರು ತೀರ್ಮಾನಿಸಿದೆ.
ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಫಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿ ಸೂರ್ಯಕುಮಾರ್ ಯಾದವ್ ಹೆಗಲೇರಿದೆ.
ಮಾಧ್ಯಮಗಳ ವರದಿಯ ಪ್ರಕಾರ, ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಇದರ ಜತೆಗೆ ಶುಭ್ಮನ್ ಗಿಲ್ಗೂ ಭಾರತ ತಂಡದಲ್ಲಿ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.
ಇಂಗ್ಲೆಂಡ್ ಸರಣಿಯಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಗಿಲ್ ಅವರಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಉಪನಾಯಕ ಪಟ್ಟ ಕಟ್ಟಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಅಗ್ರಕ್ರಮಾಂಕದ ಬ್ಯಾಟರ್ಗಳಾಗಿ ಸೂರ್ಯಕುಮಾರ್ ಯಾದವ್, ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ ಹಾಗೂ ತಿಲಕ್ ವರ್ಮಾ ಅವರ ಹೆಸರು ಅಂತಿಮಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.
ಇನ್ನುಳಿದಂತೆ ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಥಾನ ಪಡೆಯಲಿದ್ದು, ಎರಡನೇ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಹಾಗೂ ಧ್ರುವ್ ಜುರೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ.
ಆಲ್ರೌಂಡರ್ ರೂಪದಲ್ಲಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ ಹಾಗೂ ಪ್ರಸಿದ್ದ್ ಕೃಷ್ಣ ಹೆಸರುಗಳು ಬಹುತೇಕ ಅಂತಿಮಗೊಂಡಿವೆ ಎಂದು ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
