MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಪಾಕ್ ಎದುರು ಹೊಸ ಅಸ್ತ್ರ ಕಣಕ್ಕಿಳಿಯಲು ಮಾಸ್ಟರ್ ಪ್ಲಾನ್ ಮಾಡಿದ ಸೂರ್ಯ-ಗಂಭೀರ್ ಜೋಡಿ!

ಪಾಕ್ ಎದುರು ಹೊಸ ಅಸ್ತ್ರ ಕಣಕ್ಕಿಳಿಯಲು ಮಾಸ್ಟರ್ ಪ್ಲಾನ್ ಮಾಡಿದ ಸೂರ್ಯ-ಗಂಭೀರ್ ಜೋಡಿ!

ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕೋಚ್ ಗೌತಮ್ ಗಂಭೀರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಏನದು ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

1 Min read
Naveen Kodase
Published : Sep 12 2025, 05:47 PM IST
Share this Photo Gallery
  • FB
  • TW
  • Linkdin
  • Whatsapp
17
ಏಷ್ಯಾಕಪ್‌ನಲ್ಲಿ ಭಾರತ ಶುಭಾರಂಭ
Image Credit : X/BCCI

ಏಷ್ಯಾಕಪ್‌ನಲ್ಲಿ ಭಾರತ ಶುಭಾರಂಭ

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಏಷ್ಯಾಕಪ್ ಟೂರ್ನಿಯಲ್ಲಿ ಯುಎಇ ಎದುರು 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಇದೀಗ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನ ಎದುರಿಸಲು ಸಜ್ಜಾಗಿದೆ.

27
ಯುಎಇ ಎದುರು ಭರ್ಜರಿ ಜಯ
Image Credit : X/BCCI

ಯುಎಇ ಎದುರು ಭರ್ಜರಿ ಜಯ

ಯುಎಇ ತಂಡವನ್ನು ಮೊದಲಿಗೆ ಕೇವಲ 57 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಆ ನಂತರ ಕೇವಲ 4.3 ಓವರ್‌ಗಳಲ್ಲಿ ಗುರಿ ತಲುಪಿದೆ.ಇದೀಗ ಭಾರತ ತಂಡವು ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.

Related Articles

Related image1
ಏಷ್ಯಾಕಪ್ 2025: ಭಾರತ vs ಪಾಕ್ ಪಂದ್ಯದ ಬಗ್ಗೆ ಮಹತ್ವದ ಅಪ್‌ಡೇಟ್ ಕೊಟ್ಟ ಸುಪ್ರೀಂ ಕೋರ್ಟ್!
Related image2
ಯಾರಾಗ್ತಾರೆ 2025ರ ಏಷ್ಯಾಕಪ್ ಚಾಂಪಿಯನ್? ಭವಿಷ್ಯ ನುಡಿದ ಸನ್ನಿ, ಡಿಕೆ, ಹರ್ಷಾ ಬೋಗ್ಲೆ!
37
ಭಾರತ-ಪಾಕ್ ಮ್ಯಾಚ್‌ಗೆ ಕ್ಷಣಗಣನೆ
Image Credit : Freepik, Social Media

ಭಾರತ-ಪಾಕ್ ಮ್ಯಾಚ್‌ಗೆ ಕ್ಷಣಗಣನೆ

ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ಇದೇ ಸೆಪ್ಟೆಂಬರ್ 14ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ.

47
ಗಂಭೀರ್-ಸೂರ್ಯ ಮಾಸ್ಟರ್ ಪ್ಲಾನ್
Image Credit : Getty

ಗಂಭೀರ್-ಸೂರ್ಯ ಮಾಸ್ಟರ್ ಪ್ಲಾನ್

ಇದೀಗ ಪಾಕ್‌ ಎದುರಿನ ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾದ ಪ್ರಮುಖ ವೇಗದ ಅಸ್ತ್ರ ಅರ್ಶದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಲು ಸೂರ್ಯ-ಗಂಭೀರ್ ಜೋಡಿ ರಣತಂತ್ರ ಹೆಣೆದಿದೆ.

57
ಅರ್ಶದೀಪ್ ಕಣಕ್ಕಿಳಿಸಲು ಪ್ಲಾನ್
Image Credit : ANI

ಅರ್ಶದೀಪ್ ಕಣಕ್ಕಿಳಿಸಲು ಪ್ಲಾನ್

ಅರ್ಶದೀಪ್ ಸಿಂಗ್ ಹೊಸ ಚೆಂಡಿನಲ್ಲಿ ಹಾಗೂ ಡೆತ್ ಓವರ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅರ್ಶದೀಪ್ ಸಿಂಗ್ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು.

67
ಅರ್ಶದೀಪ್ ಅಪಾಯಕಾರಿ ಬೌಲರ್
Image Credit : Twitter/BCCI

ಅರ್ಶದೀಪ್ ಅಪಾಯಕಾರಿ ಬೌಲರ್

ಪಾಕ್ ಅಪಾಯಕಾರಿ ಬ್ಯಾಟರ್‌ಗಳನ್ನು ಆರಂಭದಲ್ಲೇ ಕಟ್ಟಿಹಾಕುವ ಉದ್ದೇಶದಿಂದ, ಅರ್ಶದೀಪ್ ಸಿಂಗ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಮಣೆಹಾಕಲು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತೀರ್ಮಾನಿಸಿದೆ ಎಂದು ವರದಿಯಾಗಿದೆ.

77
ಭಾರತದ ಪಾಲಿಗೆ ಮಹತ್ವದ ಪಂದ್ಯ
Image Credit : Twitter

ಭಾರತದ ಪಾಲಿಗೆ ಮಹತ್ವದ ಪಂದ್ಯ

ಭಾರತ ಸೂಪರ್ 4 ಹಂತ ಪ್ರವೇಶಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಎದುರಿನ ಪಂದ್ಯವು ಟೀಂ ಇಂಡಿಯಾ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿರುವುದರಿಂದ, ಅರ್ಶದೀಪ್ ಸಿಂಗ್ ಮೇಲೆ ಸಾಕಷ್ಟು ನಿರೀಕ್ಷೆಯಿಡಲಾಗಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಏಷ್ಯಾ ಕಪ್
ಟೀಮ್ ಇಂಡಿಯಾ
ಗೌತಮ್ ಗಂಭೀರ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved