MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಐಸಿಸಿಯ ಒತ್ತಡಕ್ಕೆ ಮಣಿಯಲ್ಲ, ಭಾರತಕ್ಕೆ ಹೋಗಲ್ಲ: ಮೊಂಡುವಾದ ಮಾಡುತ್ತಿರುವ ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದಲೇ ಔಟ್?

ಐಸಿಸಿಯ ಒತ್ತಡಕ್ಕೆ ಮಣಿಯಲ್ಲ, ಭಾರತಕ್ಕೆ ಹೋಗಲ್ಲ: ಮೊಂಡುವಾದ ಮಾಡುತ್ತಿರುವ ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದಲೇ ಔಟ್?

ಢಾಕಾ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶದ ಪಂದ್ಯಗಳು ಭಾರತದಲ್ಲಿ ನಿಗದಿಯಾಗಿವೆ. ಆದರೆ ಬಾಂಗ್ಲಾದೇಶ ಮೊಂಡುವಾದ ಮುಂದುವರೆಸಿದ್ದು, ಭಾರತಕ್ಕೆ ಕ್ರಿಕೆಟ್ ಆಡಲು ಬರೊಲ್ಲ ಎಂದು ಪಟ್ಟು ಹಿಡಿದಿದೆ. 

1 Min read
Author : Naveen Kodase
Published : Jan 21 2026, 02:52 PM IST
Share this Photo Gallery
  • FB
  • TW
  • Linkdin
  • Whatsapp
16
ಮುಂದುವರೆದ ಬಾಂಗ್ಲಾದೇಶದ ಮೊಂಡುವಾದ
Image Credit : SOCIAL MEDIA

ಮುಂದುವರೆದ ಬಾಂಗ್ಲಾದೇಶದ ಮೊಂಡುವಾದ

ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಹೋಗಲೇಬೇಕು ಎಂಬ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ)ನ ಖಡಕ್‌ ಸೂಚನೆಯನ್ನು ಬಾಂಗ್ಲಾದೇಶ ಕಡೆಗಣಿಸಿದ್ದು, ಐಸಿಸಿಯ ಒತ್ತಡಕ್ಕೆ ಮಣಿಯಲ್ಲ ಎಂದಿದೆ.

26
ಐಸಿಸಿ ಒತ್ತಡ ಹೇರಿದ್ರೆ ಒಪ್ಪಲ್ಲ
Image Credit : Getty

ಐಸಿಸಿ ಒತ್ತಡ ಹೇರಿದ್ರೆ ಒಪ್ಪಲ್ಲ

ಬಾಂಗ್ಲಾ ಸರ್ಕಾರದ ಕ್ರೀಡಾ ಸಲಹೆಗಾರ ಆಸಿಫ್‌ ನಜ್ರುಲ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಭಾರತೀಯ ಕ್ರಿಕೆಟ್‌ನ ಒತ್ತಡಕ್ಕೆ ಮಣಿದು ಐಸಿಸಿ ನಮ್ಮ ಮೇಲೆ ಒತ್ತಡ ಹೇರಿದರೆ ಮತ್ತು ನಿಬಂಧನೆಗಳನ್ನು ಹೇರಿದರೆ ಅದನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.

Related Articles

Related image1
ಬಾಂಗ್ಲಾದೇಶ ಮಾತ್ರವಲ್ಲ ಪಾಕಿಸ್ತಾನವೂ ಟಿ20 ವಿಶ್ವಕಪ್‌ನಿಂದ ಔಟ್! ಸಿದ್ದತೆ ನಿಲ್ಲಿಸಿದ ಪಾಕ್!
Related image2
ಟಿ20 ವಿಶ್ವಕಪ್‌: ಸ್ಥಳ ಮಾತ್ರವಲ್ಲ ಗುಂಪನ್ನೂ ಬದಲಿಸುವಂತೆ ಬಾಂಗ್ಲಾದೇಶ ಪಟ್ಟು! ಸೂಪರ್-8 ಹಂತಕ್ಕೇರಲು ಮಾಸ್ಟರ್ ಪ್ಲಾನ್
36
ನಾವು ಐಸಿಸಿ ಒತ್ತಡಕ್ಕೆ ಮಣಿಯೊಲ್ಲವೆಂದ ಬಾಂಗ್ಲಾದೇಶ
Image Credit : X

ನಾವು ಐಸಿಸಿ ಒತ್ತಡಕ್ಕೆ ಮಣಿಯೊಲ್ಲವೆಂದ ಬಾಂಗ್ಲಾದೇಶ

ಈ ಹಿಂದೆ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಲ್ಲ ಎಂದು ಹೇಳಿದ್ದಾಗ ಐಸಿಸಿ ಪರ್ಯಾಯ ವ್ಯವಸ್ಥೆ ಮಾಡಿತ್ತು. ಅದೇ ರೀತಿ ನಾವು ಕೂಡಾ ಪಂದ್ಯಗಳ ಸ್ಥಳಾಂತರಕ್ಕೆ ಬೇಡಿಕೆ ಇಟ್ಟಿದ್ದೇವೆ. ನಾವು ಯಾವುದೇ ಕಾರಣಕ್ಕೂ ಭಾರತದಲ್ಲಿ ಟಿ20 ವಿಶ್ವಕಪ್‌ ಆಡುವ ಐಸಿಸಿ ಒತ್ತಡಕ್ಕೆ ಮಣಿಯಲ್ಲ’ ಎಂದಿದ್ದಾರೆ.

46
ಭಾರತದಲ್ಲಿ ಭದ್ರತಾ ಸಮಸ್ಯೆಯಿದೆ ಎನ್ನುತ್ತಿರುವ ಬಾಂಗ್ಲಾದೇಶ
Image Credit : X

ಭಾರತದಲ್ಲಿ ಭದ್ರತಾ ಸಮಸ್ಯೆಯಿದೆ ಎನ್ನುತ್ತಿರುವ ಬಾಂಗ್ಲಾದೇಶ

ಭಾರತದಲ್ಲಿ ಭದ್ರತೆ ಸಮಸ್ಯೆ ಇದೆ ಎಂದು ಹೇಳುತ್ತಿರುವ ಬಾಂಗ್ಲಾ, ತನ್ನ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಲು ಬೇಡಿಕೆ ಇಟ್ಟಿದೆ. ಆದರೆ ಭಾರತದಲ್ಲೇ ವಿಶ್ವಕಪ್‌ ಆಡಬೇಕೆಂದು ಐಸಿಸಿ ಸೂಚಿಸಿದ್ದು, ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಜ.21ರ ಮೊದಲು ತಿಳಿಸುವಂತೆಯೂ ನಿರ್ದೇಶಿಸಿದೆ.

56
ಬಾಂಗ್ಲಾದೇಶ ಬದಲು ಸ್ಕಾಟ್ಲೆಂಡ್‌ಗೆ ಚಾನ್ಸ್?
Image Credit : Getty

ಬಾಂಗ್ಲಾದೇಶ ಬದಲು ಸ್ಕಾಟ್ಲೆಂಡ್‌ಗೆ ಚಾನ್ಸ್?

ಒಂದು ವೇಳೆ ಬಾಂಗ್ಲಾದೇಶ ತಂಡವು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹಿಂದೆ ಸರಿದರೆ, ಬಾಂಗ್ಲಾದೇಶ ಬದಲಿಗೆ ಐಸಿಸಿ ಸ್ಕಾಟ್ಲೆಂಡ್ ತಂಡಕ್ಕೆ ಟಿ20 ವಿಶ್ವಕಪ್ ಟೂರ್ನಿ ಆಡಲು ಆಹ್ವಾನಿಸಲಿದೆ ಎಂದು ವರದಿಯಾಗಿದೆ.

66
ಇಂದಿಗೆ ಐಸಿಸಿ ಡೆಡ್‌ಲೈನ್ ಅಂತ್ಯ
Image Credit : Getty

ಇಂದಿಗೆ ಐಸಿಸಿ ಡೆಡ್‌ಲೈನ್ ಅಂತ್ಯ

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಜರುಗಲಿದೆ. ಇಂದು ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಗೆ ಭಾರತಕ್ಕೆ ಆಡಲು ಬರುತ್ತೀರೋ ಇಲ್ಲವೋ ಎಂದು ಹೇಳಲು ಐಸಿಸಿ ಕೊನೆಯ ಡೆಡ್‌ಲೈನ್ ನೀಡಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಬಾಂಗ್ಲಾದೇಶ
ಐಸಿಸಿ ಟಿ20 ವಿಶ್ವಕಪ್
ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ)

Latest Videos
Recommended Stories
Recommended image1
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ: ಇಂದು ಅಧಿಕೃತ ಘೋಷಣೆ? ಫ್ಯಾನ್ಸ್‌ಗೆ ಸಿಗುತ್ತಾ ಗುಡ್ ನ್ಯೂಸ್?
Recommended image2
ಕೊಹ್ಲಿ, ಶುಭಮನ್ ಗಿಲ್ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ವೈಭವ್ ಸೂರ್ಯವಂಶಿ!
Recommended image3
ಮುಂಬೈ ವಿರುದ್ಧ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇ-ಆಫ್‌ ಕನಸು ಜೀವಂತ! ಹರ್ಮನ್‌ಪ್ರೀತ್ ಕೌರ್ ಪಡೆಗೆ ಸಂಕಷ್ಟ
Related Stories
Recommended image1
ಬಾಂಗ್ಲಾದೇಶ ಮಾತ್ರವಲ್ಲ ಪಾಕಿಸ್ತಾನವೂ ಟಿ20 ವಿಶ್ವಕಪ್‌ನಿಂದ ಔಟ್! ಸಿದ್ದತೆ ನಿಲ್ಲಿಸಿದ ಪಾಕ್!
Recommended image2
ಟಿ20 ವಿಶ್ವಕಪ್‌: ಸ್ಥಳ ಮಾತ್ರವಲ್ಲ ಗುಂಪನ್ನೂ ಬದಲಿಸುವಂತೆ ಬಾಂಗ್ಲಾದೇಶ ಪಟ್ಟು! ಸೂಪರ್-8 ಹಂತಕ್ಕೇರಲು ಮಾಸ್ಟರ್ ಪ್ಲಾನ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved