MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ದೇಶದ ಘನತೆ ಬದಿಗಿಟ್ಟು ಟಿ20 ವಿಶ್ವಕಪ್ ಆಡೊಲ್ಲ: ಬಾಂಗ್ಲಾದೇಶ ಹೊಸ ಕಿರಿಕ್!

ದೇಶದ ಘನತೆ ಬದಿಗಿಟ್ಟು ಟಿ20 ವಿಶ್ವಕಪ್ ಆಡೊಲ್ಲ: ಬಾಂಗ್ಲಾದೇಶ ಹೊಸ ಕಿರಿಕ್!

ಢಾಕಾ: ಭಾರತ ಆತಿಥ್ಯ ವಹಿಸಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ತಂಡವನ್ನು ಕಳುಹಿಸುವುದಿಲ್ಲ ಎಂದು ಬಾಂಗ್ಲಾದೇಶ ಹೇಳಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸಂಬಂಧವು ಇತಿಹಾಸದಲ್ಲೇ ಅತಿದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ.

1 Min read
Author : Naveen Kodase
Published : Jan 08 2026, 09:42 AM IST
Share this Photo Gallery
  • FB
  • TW
  • Linkdin
  • Whatsapp
17
ಮುಸ್ತಾಫಿಜುರ್ ಕೈಬಿಟ್ಟಿದ್ದೇ ಸಮಸ್ಯೆಯ ಮೂಲ ಕಾರಣ
Image Credit : Asianet News

ಮುಸ್ತಾಫಿಜುರ್ ಕೈಬಿಟ್ಟಿದ್ದೇ ಸಮಸ್ಯೆಯ ಮೂಲ ಕಾರಣ

ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ ವಿವಾದ, ಮುಂಬರುವ ಟಿ20 ವಿಶ್ವಕಪ್ ಆಯೋಜನೆಯ ಮೇಲೂ ಪರಿಣಾಮ ಬೀರಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ದಾಖಲೆಯ ಮೊತ್ತಕ್ಕೆ (9.2 ಕೋಟಿ ರೂ.) ಖರೀದಿಸಿದ್ದ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್‌ರನ್ನು ತಂಡದಿಂದ ಹೊರಗಿಡಲು ಬಿಸಿಸಿಐ ಸೂಚನೆ ನೀಡಿದ್ದೇ ಈ ವಿವಾದಕ್ಕೆ ಮೂಲ ಕಾರಣ.

27
ಬಾಂಗ್ಲಾದೇಶ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ನಡೆ
Image Credit : X

ಬಾಂಗ್ಲಾದೇಶ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ನಡೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಇದು ಬಾಂಗ್ಲಾದೇಶದ ಕ್ರಿಕೆಟ್ ಅಭಿಮಾನಿಗಳನ್ನು ಮತ್ತು ಸರ್ಕಾರವನ್ನು ಕೆರಳಿಸಿದೆ.

Related Articles

Related image1
ಬಾಂಗ್ಲಾದೇಶ ಮನವಿ ರಿಜೆಕ್ಟ್‌; ಟಿ20 ವಿಶ್ವಕಪ್‌ ಬಾಯ್ಕಾಟ್ ಮಾಡಿದ್ರೆ ಬಾಂಗ್ಲಾಕ್ಕೆ ಕೋಟ್ಯಾಂತರ ರುಪಾಯಿ ನಷ್ಟ!
Related image2
ಈ ಬಾಂಗ್ಲಾದೇಶ ಕ್ರಿಕೆಟಿಗನ ಪತ್ನಿ ಶ್ರೀಕೃಷ್ಣನ ಅಪ್ಪಟ ಆರಾಧಕಿ!
37
ಬಾಂಗ್ಲಾದೇಶ ರಿಕ್ವೆಸ್ಟ್‌ ರಿಜೆಕ್ಟ್‌
Image Credit : Getty

ಬಾಂಗ್ಲಾದೇಶ ರಿಕ್ವೆಸ್ಟ್‌ ರಿಜೆಕ್ಟ್‌

ಇದರಿಂದಾಗಿ, ಫೆಬ್ರವರಿಯಲ್ಲಿ ಭಾರತ ಆತಿಥ್ಯ ವಹಿಸುವ ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯಬೇಕಾದ ತಮ್ಮ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಐಸಿಸಿಗೆ ಮನವಿ ಮಾಡಿತು. ಆದರೆ ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ.

47
ಐಸಿಸಿ ಖಡಕ್ ಶಾಕ್‌
Image Credit : Getty

ಐಸಿಸಿ ಖಡಕ್ ಶಾಕ್‌

ಅಸ್ತಿತ್ವದಲ್ಲಿರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ಭಾರತದಲ್ಲಿ ಆಡದಿದ್ದರೆ ಅಂಕಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಐಸಿಸಿ ತಿಳಿಸಿದೆ.

57
ಐಸಿಸಿಗೆ ಪತ್ರ ಬರೆಯಲು ರೆಡಿಯಾದ ಬಾಂಗ್ಲಾದೇಶ
Image Credit : Getty

ಐಸಿಸಿಗೆ ಪತ್ರ ಬರೆಯಲು ರೆಡಿಯಾದ ಬಾಂಗ್ಲಾದೇಶ

ಆದರೆ, ಭದ್ರತಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಬಾಂಗ್ಲಾದೇಶ ಮತ್ತೊಮ್ಮೆ ಪತ್ರ ಬರೆಯಲು ಸಿದ್ಧತೆ ನಡೆಸುತ್ತಿದೆ.

67
ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಹೊಸ ಖ್ಯಾತೆ
Image Credit : Getty

ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಹೊಸ ಖ್ಯಾತೆ

ದೇಶದ ಘನತೆಯನ್ನು ಪಣಕ್ಕಿಟ್ಟು ವಿಶ್ವಕಪ್‌ನಲ್ಲಿ ಭಾಗವಹಿಸುವುದಿಲ್ಲ. ಆಟಗಾರರು, ಪ್ರೇಕ್ಷಕರು ಮತ್ತು ಪತ್ರಕರ್ತರಿಗೆ ಭಾರತದಲ್ಲಿ ಭದ್ರತೆ ಇರುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಪ್ರತಿಕ್ರಿಯಿಸಿದ್ದಾರೆ.

77
ಐಪಿಎಲ್ ಪ್ರಸಾರಕ್ಕೆ ನಿಷೇಧ
Image Credit : Getty

ಐಪಿಎಲ್ ಪ್ರಸಾರಕ್ಕೆ ನಿಷೇಧ

ಮುಸ್ತಫಿಜುರ್ ಅವರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಬಾಂಗ್ಲಾದೇಶದಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರವನ್ನು ಸರ್ಕಾರ ಅನಿರ್ದಿಷ್ಟಾವಧಿಗೆ ನಿಷೇಧಿಸಿದೆ. ಜನವರಿ 5 ರಂದು ಈ ಕುರಿತು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರ ಭಾವನೆಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಬಾಂಗ್ಲಾದೇಶ
ಭಾರತ
ಐಸಿಸಿ ಟಿ20 ವಿಶ್ವಕಪ್

Latest Videos
Recommended Stories
Recommended image1
ಆರ್‌ಸಿಬಿ ನನ್ನನ್ನು ರೀಟೈನ್‌ ಮಾಡಿದ್ದು ಕೇಳಿ ಭಾವುಕಳಾದೆ: ಶ್ರೇಯಾಂಕಾ ಪಾಟೀಲ್
Recommended image2
ಭಾರತಕ್ಕೆ ಬರದೆ ಬಾಂಗ್ಲಾಗೆ ಬೇರೆ ಆಯ್ಕೆಯಿಲ್ಲ? ನಾಡಿದ್ದು ಐಸಿಸಿಯಿಂದ ಅಧಿಕೃತ ಘೋಷಣೆ?
Recommended image3
ಅರ್ಜುನ್ ತೆಂಡೂಲ್ಕರ್ ಮದುವೆ ಡೇಟ್ ಫಿಕ್ಸ್; ಹಸೆಮಣೆ ಏರಲು ರೆಡಿಯಾದ ಸಚಿನ್ ಪುತ್ರ!
Related Stories
Recommended image1
ಬಾಂಗ್ಲಾದೇಶ ಮನವಿ ರಿಜೆಕ್ಟ್‌; ಟಿ20 ವಿಶ್ವಕಪ್‌ ಬಾಯ್ಕಾಟ್ ಮಾಡಿದ್ರೆ ಬಾಂಗ್ಲಾಕ್ಕೆ ಕೋಟ್ಯಾಂತರ ರುಪಾಯಿ ನಷ್ಟ!
Recommended image2
ಈ ಬಾಂಗ್ಲಾದೇಶ ಕ್ರಿಕೆಟಿಗನ ಪತ್ನಿ ಶ್ರೀಕೃಷ್ಣನ ಅಪ್ಪಟ ಆರಾಧಕಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved