MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಸೂರ್ಯಕುಮಾರ್ ಕೈಬಿಟ್ಟ ಬಿಸಿಸಿಐ, ಸ್ಫೋಟಕ ವರದಿ ಬಯಲು

ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಸೂರ್ಯಕುಮಾರ್ ಕೈಬಿಟ್ಟ ಬಿಸಿಸಿಐ, ಸ್ಫೋಟಕ ವರದಿ ಬಯಲು

ಟೀಂ ಇಂಡಿಯಾ ಟಿ20 ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್‌ಗೆ ಕೊಕ್ ನೀಡಿದ್ದು ಮಾತ್ರವಲ್ಲ, ಟಿ20 ತಂಡಕ್ಕೆ ಆಟಗಾರನಾಗಿಯೂ ಆಯ್ಕೆ ಮಾಡುವ ಸಾಧ್ಯತೆಗಳಿಲ್ಲ. ಈ ಕುರಿತು ಸ್ಫೋಟಕ ವರದಿಯೊಂದು ಬಹಿರಂಗವಾಗಿದೆ. 

1 Min read
Author : Chethan Kumar
Published : Jun 03 2026, 10:34 PM IST
Share this Photo Gallery
  • FB
  • TW
  • Linkdin
  • Whatsapp
16
ಸೂರ್ಯಕುಮಾರ್ ಯಾದವ್‌ಗೆ ಕೊಕ್
Image Credit : Getty

ಸೂರ್ಯಕುಮಾರ್ ಯಾದವ್‌ಗೆ ಕೊಕ್

ಐಪಿಎಲ್ ಟೂರ್ನಿ ಮುಕ್ತಯಾಗೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಆಯ್ಕೆ, ನಾಯಕತ್ವ, ಪ್ಲೇಯಿಂಗ್‌ನಲ್ಲೂ ಭಾರಿ ಬದಲಾವಣೆಯಾಗುತ್ತಿದೆ. ಇದೀಗ ಟಿ20 ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ಅವರನ್ನು ಬಿಸಿಸಿಐ ಕೈಬಿಟ್ಟಿದೆ ಅನ್ನೋ ಮಾಹಿತಿ ಬಯಲಾಗಿದೆ. ಇಷ್ಟೇ ಅಲ್ಲ ಆಟಗಾರನಾಗಿಯೂ ಸೂರ್ಯಕುಮಾರ್ ಯಾದವ್ ಅವರನ್ನು ಪರಿಗಣಿಸದೇ ಇರಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಆಯ್ಕೆ ಸಮತಿಗೆ ಕೆಂಗಣ್ಣಿಗೆ ಗುರಿಯಾದ ಸೂರ್ಯಕುಮಾರ್
Image Credit : Getty

ಆಯ್ಕೆ ಸಮತಿಗೆ ಕೆಂಗಣ್ಣಿಗೆ ಗುರಿಯಾದ ಸೂರ್ಯಕುಮಾರ್

ರೋಹಿತ್ ಶರ್ಮಾ ನಿವೃತ್ತಿ ಬಳಿಕ 2024ರಲ್ಲಿ ಸೂರ್ಯಕುಮಾರ್ ಯಾದವ್‌ಗೆ ಟೀಂ ಇಂಡಿಯಾದ ಟಿ20 ನಾಯಕತ್ವ ನೀಡಲಾಗಿತ್ತು. 2026ರಲ್ಲಿ ಟಿ20 ಟ್ರೋಫಿ ಗೆದ್ದ ಭಾರತ ಐತಿಹಾಸಿಕ ಸಾಧನೆ ಮಾಡಿತ್ತು. ಆದರೆ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಇದೀಗ ಐಪಿಎಲ್‌ನಲ್ಲಿ ಸಂಪೂರ್ಣ ಕಳಪೆಯಾಗಿ ಆಯ್ಕೆ ಸಮಿತಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Related Articles

Related image1
ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೆ ಕುತ್ತು? ಹೊಸ ಕ್ಯಾಪ್ಟನ್‌ಗಾಗಿ ಬಿಸಿಸಿಐ ಹುಡುಕಾಟ!
Related image2
ಟಿ20 ವಿಶ್ವಕಪ್ ಹೀರೋ, ಈ ಬಾರಿಯ ಐಪಿಎಲ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಝೀರೋ ಆಗಿದ್ದೇಕೆ?
36
ಹೊಸ ನಾಯಕನ ಅಡಿಯಲ್ಲಿ ಟಿ20
Image Credit : Getty

ಹೊಸ ನಾಯಕನ ಅಡಿಯಲ್ಲಿ ಟಿ20

ಬಿಸಿಸಿಐ ಆಯ್ಕೆ ಸಮಿತಿ ಈಗಾಗಲೇ ಕೋಚ್ ಗೌತಮ್ ಗಂಭೀರ ಜೊತೆ ಈ ಕುರಿತು ಮಾತುಕತೆ ನಡೆಸಿದೆ. ಮುಂಬುರವ ಟಿ20 ಟೂರ್ನಿಗಳಲ್ಲಿ ಭಾರತ ತಂಡ ಹೊಸ ನಾಯಕತ್ವದಡಿಯಲ್ಲಿ ಆಡಲು ಮುಂದಾಗಿದೆ. ಈ ಕುರಿತು ಆಯ್ಕೆ ಸಮಿತಿ ಹಾಗೂ ಕೋಚ್ ಗಂಭೀರ್ ಒಲವು ತೋರಿದ್ದಾರೆ. ಇತ್ತ ಸೂರ್ಯಕುಮಾರ್ ಯಾದವ್ ಫಾರ್ಮ್ ಕೂಡ ತಂಡಕ್ಕೆ ಮುಳುವಾಗಿದೆ. ಹೀಗಾಗಿ ನಾಯಕತ್ವ ಬದಲಾವಣೆ ಅನಿವಾರ್ಯ ಎನ್ನುತ್ತಿದೆ ಬಿಸಿಸಿಐ ಎಂದು ವರದಿಯಾಗಿದೆ.

46
ಸೂರ್ಯಕುಮಾರ್ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ
Image Credit : Getty

ಸೂರ್ಯಕುಮಾರ್ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ

ಸೂರ್ಯಕುಮಾರ್ ನಾಯಕತ್ವದಲ್ಲಿ ಟಿ20 ತಂಡ ಉತ್ತಮ ಪ್ರದರ್ಶನ ನೀಡಿದೆ. 2026ರ ಟಿ20 ವಿಶ್ವಕಪ್, ಸತತ 8 ದ್ವಿಪಕ್ಷೀಯ ಸರಣಿ ಗೆಲುವು, 2025ರ ಏಷ್ಯಾಕಪ್ ಟ್ರೋಫಿ ಗೆಲುವು ಸೇರಿದಂತೆ ಐತಿಹಾಸಿಕ ಗೆಲುವು ಸೂರ್ಯಕುಮಾರ್ ನಾಯಕತ್ವದಡಿ ಬಂದಿದೆ. ಆದರೆ ಸೂರ್ಯಕುಮಾರ್ ಬ್ಯಾಟಿಂಗ್ ಅಷ್ಟಾಗಿ ಸದ್ದು ಮಾಡಿಲ್ಲ.

56
ರೇಸ್‌ನಲ್ಲಿ ಶ್ರೇಯಸ್ ಅಯ್ಯರ್
Image Credit : ANI

ರೇಸ್‌ನಲ್ಲಿ ಶ್ರೇಯಸ್ ಅಯ್ಯರ್

ಸೂರ್ಯಕುಮಾರ್ ಯಾದವ್‌ಗೆ ಕೊಕ್ ನೀಡಿ ಟೀಂ ಇಂಡಿಯಾ ಟ20 ನಾಯಕತ್ವವನ್ನು ಶ್ರೇಯಸ್ ಅಯ್ಯರ್‌ಗೆ ನೀಡಲು ಆಯ್ಕೆ ಸಮಿತಿ ಒಲವು ತೋರಿದೆ. ಐಪಿಎಲ್ ಟೂರ್ನಿಯ ಆರಂಭಿಕ ಹಂತದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದರು. ಆದರೆ ಅಂತಿಮ ಹಂತದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.

66
ಕೆಲವರ ಹೆಸರು ಮುಂಚೂಣಿಯಲ್ಲಿ
Image Credit : Pinterest

ಕೆಲವರ ಹೆಸರು ಮುಂಚೂಣಿಯಲ್ಲಿ

ಟೀಂ ಇಂಡಿಯಾ ಟಿ20 ನಾಯಕತ್ವಕ್ಕೆ ಶ್ರೇಯಸ್ ಅಯ್ಯರ್ ಜೊತೆ ಕೆಲ ಆಟಗಾರರ ಹೆಸರು ಕೇಳಿಬರುತ್ತಿದೆ. ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್ ಹೆಸರು ಕೇಳಿಬರುತ್ತಿದೆ. ಹೀಗಾಗಿ ಹೊಸ ನಾಯಕನ ಆಯ್ಕೆಯಲ್ಲಿ ತೀವ್ರ ಪೈಪೋಟಿ ಎದುರಾಗಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಸೂರ್ಯಕುಮಾರ್ ಯಾದವ್
ಟೀಮ್ ಇಂಡಿಯಾ
ಕ್ರಿಕೆಟ್
Latest Videos
Recommended Stories
Recommended image1
ಆರ್‌ಸಿಬಿಗೆ 2ನೇ ಟ್ರೋಫಿ ಗೆಲ್ಲಿಸಿಕೊಟ್ಟ ಮೂರೇ ದಿನಕ್ಕೆ ಟಿ20 ತಂಡದ ನಾಯಕನಾದ ರಜತ್ ಪಾಟಿದಾರ್
Recommended image2
ಐಪಿಎಲ್‌ ಹ್ಯಾಟ್ರಿಕ್‌ಗೆ ಆರ್‌ಸಿಬಿ ಟಾರ್ಗೆಟ್‌: 2027ರ ಸೀಸನ್‌ಗೂ ಮುನ್ನ ಆಗಲಿದೆ ಈ ಬದಲಾವಣೆ
Recommended image3
'ಏಕ್ ಬಿಹಾರಿ....' ವೈಭವ್ ಸೂರ್ಯವಂಶಿಗೆ ವಿರಾಟ್ ಕೊಹ್ಲಿ ಹೇಳಿದ್ದೇನು? ಇಲ್ಲಿದೆ ಇನ್‌ಸೈಡ್ ಡೀಟೈಲ್ಸ್
Related Stories
Recommended image1
ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೆ ಕುತ್ತು? ಹೊಸ ಕ್ಯಾಪ್ಟನ್‌ಗಾಗಿ ಬಿಸಿಸಿಐ ಹುಡುಕಾಟ!
Recommended image2
ಟಿ20 ವಿಶ್ವಕಪ್ ಹೀರೋ, ಈ ಬಾರಿಯ ಐಪಿಎಲ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಝೀರೋ ಆಗಿದ್ದೇಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved