ಪಶ್ಚಿಮ ಬಂಗಾಳದಲ್ಲಿ ಕ್ಷಿಪ್ರ ಬೆಳವಣಿಗೆ; ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!
First Published Dec 27, 2020, 5:34 PM IST
ಕಳೆದ ಕೆಲ ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆ, ಗುದ್ದಾಟಗಳು ತಾರಕಕ್ಕೇರಿದೆ. ಜೆಪಿ ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ, ಅಮಿತ್ ಶಾ ಭೇಟಿ, ತೃಣಮೂಲ ಕಾಂಗ್ರೆಸ್ ನಾಯಕು ಬಿಜೆಪಿ ಸೇರ್ಪಡೆ ಸೇರಿದಂತೆ ಹಲವು ಘಟನೆಗಳು ನಡೆದಿವೆ. ಇದೀಗ ಮತ್ತೊಂದು ಕುತೂಹಲ ಕಾರಿ ಘಟನೆ ನಡೆದಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನಡುವೆ ನೇರಾ ನೇರಾ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಕುರಿತು ಈಗಾಗಲೇ ಹಲವು ಘಟನೆಗಳು ನಡೆದಿದೆ. ಇದೀಗ ಮತ್ತೊಂದು ಕ್ಷಿಪ್ರ ಬೆಳವಣಿಗೆಯಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಿಢೀರ್ ಆಗಿ ಬಂಗಾಳ ರಾಜ್ಯಪಾಲ ಜಗದೀಪ್ ದನ್ಕರ್ ಭೇಟಿಯಾಗಿದ್ದಾರೆ. ಇದು ಈ ಭೇಟಿಯಿಂದ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?