MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಮೇ.17ರ ಬೆಂಗಳೂರು ಪಂದ್ಯಕ್ಕೆ ಮಳೆ ಭೀತಿ, ಮ್ಯಾಚ್ ರದ್ದಾದ್ರೆ ಆರ್‌ಸಿಬಿ-ಕೆಕೆಆರ್ ಪ್ಲೇಆಫ್ ಕತೆ ಏನು?

ಮೇ.17ರ ಬೆಂಗಳೂರು ಪಂದ್ಯಕ್ಕೆ ಮಳೆ ಭೀತಿ, ಮ್ಯಾಚ್ ರದ್ದಾದ್ರೆ ಆರ್‌ಸಿಬಿ-ಕೆಕೆಆರ್ ಪ್ಲೇಆಫ್ ಕತೆ ಏನು?

ಮೇ.17ರಿಂದ ಪುನರ್ ಆರಂಭಗೊಳ್ಳುತ್ತಿರುವ ಐಪಿಎಲ್ 2025 ಟೂರ್ನಿಗೆ ಇದೀಗ ಮಳೆ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ವರದಿಯಂತೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ. ಹೀಗೆ ಮಳೆಯಿಂದ ಆರ್‌ಸಿಬಿ-ಕೆಕೆಆರ್ ನಡುವಿನ ಪಂದ್ಯ ರದ್ದಾದರೆ ತಂಡಗಳ ಪ್ಲೇ ಆಫ್ ಕತೆ ಏನು? 

2 Min read
Chethan Kumar
Published : May 15 2025, 09:15 PM IST
Share this Photo Gallery
  • FB
  • TW
  • Linkdin
  • Whatsapp
17

ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಿ ಇದೀಗ ಮೇ.17ರಿಂದ ಪುನರ್ ಆರಂಭಗೊಳ್ಳುತ್ತಿದೆ. ಪುನರ್ ಆರಂಭದ  ಮೊದಲ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡ ಹೋರಾಟ ನಡೆಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗದಲ್ಲಿ ನಡೆಯಲಿದೆ. ಆದರೆ ಹವಾಮಾನ ಇಲಾಖೆ ವರದಿ ಪ್ರಕಾರ ಮೇ.17ರಂದು ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

27

ಮಳೆಯಿಂದ ಪಂದ್ಯರದ್ದಾದರೆ ಆರ್‌ಸಿಬಿ ಅಭಿಮಾನಿಗಳು ಆತಂಕ ಪಡಬೇಕಿಲ್ಲ. ಕಾರಣ ಈ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳು ಒಂದೊಂದು ಅಂಕ ಹಂಚಿಕೊಳ್ಳಲಿದೆ. ಈ ಮೂಲಕ ಆರ್‌ಸಿಬಿ 17 ಅಂಕ ಪಡೆಯಲಿದೆ. ಇಷ್ಟೇ ಅಲ್ಲ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಇಷ್ಟೇ ಅಲ್ಲ ಪ್ಲೇ ಆಫ್ ಸ್ಥಾನಕ್ಕೇರಲಿದೆ.  ಈ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್ ಹಂತಕ್ಕೇರಲಿದೆ.

Related Articles

Related image1
ಐಪಿಎಲ್ ಫೈನಲ್, ಕೊಹ್ಲಿ ಜರ್ಸಿ ಎಲ್ಲವೂ 18, ಸಂಖ್ಯಾಶಾಸ್ತ್ರ ಹೇಳುತ್ತಿದೆ ಆರ್‌ಸಿಬಿಗೆ ಟ್ರೋಫಿ
Related image2
IPL 2025: ಹೊಸ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಆರ್‌ಸಿಬಿ ಶುರುವಾಯ್ತು ಹೊಸ ತಲೆನೋವು
37

ಆರ್‌ಸಿಬಿ ಈ ಪಂದ್ಯದಲ್ಲಿ ಗೆದ್ದರೂ ಅಥವಾ ಮಳೆಯಿಂದ ಪಂದ್ಯ ರದ್ದಾದರೂ ಪ್ಲೇ ಆಫ್ ಸ್ಥಾನಕ್ಕೇರಲಿದೆ. ಆದರೆ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರಿಸ್ಥಿತಿ ಶೋಚನೀಯಾಗಲಿದೆ. ಕಾರಣ ಮಳೆಯಿಂದ ಪಂದ್ಯ ರದ್ದಾದರೆ ಕೆಕೆಆರ್ ಪ್ಲೇ ಆಫ್ ರೇಸ್‌ನಿಂದ ಹೊರಬೀಳಲಿದೆ.  ಈ ಮೂಲಕ ಐಪಿಎಲ್ 2025 ಟೂರ್ನಿಯಿಂದ ಹೊರಬಿದ್ದ ನಾಲ್ಕನೇ ತಂಡವಾಗಲಿದೆ.

47

ಆರ್‌ಸಿಬಿ ಆಟಗಾರರ ಸ್ವಾಗತಿಸಿದ ಮಳೆರಾಯ
ಮೇ.14ರಂದು ಆರ್‌ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಆದರೆ ಮಂಗಳವಾರ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿತ್ತು. ಆಟಗಾರರು ಆಗಮಿಸುತ್ತಿದ್ದಂತೆ ಮಳೆರಾಯ ಭರ್ಜರಿ ಸ್ವಾಗತ ನೀಡಿತ್ತು. ಇದೀಗ ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೇ.17ರ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಇದೆ.

57

ಶೇಕಡಾ 75ರಷ್ಟು ಮಳೆ ಚಾನ್ಸ್
ಮೇ.17ರ ಸಂಜೆ ಬೆಂಗಳೂರಿನಲ್ಲಿ ಮಳೆ ಸಂಭವ ಹೆಚ್ಚು ಎಂದು ವರದಿ ಹೇಳುತ್ತಿದೆ. ಶೇಕಡಾ 75ರಷ್ಟು ಪಂದ್ಯದ ದಿನ ಮಳೆ ಸಂಭವ ಇದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿರುವ ಕಾರಣ ಹಾಗೂ ತವರಿನಲ್ಲೂ ಲಯಕ್ಕೆ ಬಂದಿರುವ ಕಾರಣ ಅಭಿಮಾನಿಗಳು ಇದೀಗ ರೋಚಕ ಪಂದ್ಯ ನಿರೀಕ್ಷಿಸುತ್ತಿದ್ದಾರೆ.

67

ಗಡಿ ಸಂಘರ್ಷದಿಂದ ಮುಂದೂಡಿಕೆಯಾಗಿದ್ದ ಐಪಿಎಲ್
ಭಾರತ ಹಾಗೂ ಪಾಕಿಸ್ತಾನ ನಡುವಿನ ಗಡಿ ಸಂಘರ್ಷದಿಂದ ಐಪಿಎಲ್ ಟೂರ್ನಿ ಮೇಲೆ ಹೊಡೆತ ಬಿದ್ದಿತ್ತು. ಸುರಕ್ಷತಾ ದೃಷ್ಟಿಯಿಂದ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗತಿಗೊಳಿಸಲಾಗಿತ್ತು. ಆದರೆ ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಕಾರಣ ಇದೀಗ ಮೇ.17 ರಿಂದ ಐಪಿಎಲ್ ಟೂರ್ನಿ ಪುನರ್ ಆರಂಭಗೊಳ್ಳುತ್ತಿದೆ.

77

ನಿಯಮ ಬದಲಿಸಿದ ಬಿಸಿಸಿಐ
ಐಪಿಎಲ್ ವೇಳಾಪಟ್ಟಿ ಬದಲಾವಣೆ ಹಾಗೂ ಇತರ ಕಾರಣಗಳಿಂದ ಹಲವು ವಿದೇಶಿ ಆಟಾರರು ಐಪಿಎಲ್ ಟೂರ್ನಿಗೆ ಲಭ್ಯರಿಲ್ಲ. ಹೀಗಾಗಿ ಬಸಿಸಿಐ ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮದಲ್ಲಿ ಬದಲಾವಣೆ ಮಾಡಿದೆ. ಇದೀಗ ಫ್ರಾಂಚೈಸಿಗಳಿಗೆ ಅಲಭ್ಯರಾಗಿರುವ ಆಟಗಾರರ ಸ್ಥಾನದಲ್ಲಿ ಬದಲಿ ಆಟಗಾರರ ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಆರ್‌ಸಿಬಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved