ಕೊರೋನಾ ಸಂಕಷ್ಟ: PM CARES Fund ಗೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ ಯುವರಾಜ್ ಸಿಂಗ್..!
ನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ 50 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಈ ವಿಷಯವನ್ನು ಯುವಿ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 05ರ ರಾತ್ರಿ 9 ಗಂಟೆಗೆ ಲೈಟ್ ಆಫ್ ಮಾಡಿ 9 ನಿಮಿಷಗಳ ಕಾಲ ಮನೆಯ ಬಾಗಿಲು/ ಬಾಲ್ಕನಿಯಲ್ಲಿ ನಿಂತು ದೀಪ, ಮೊಂಬತ್ತಿ ಬೆಳಗಲು ದೇಶದ ಜನರನ್ನು ಕೇಳಿಕೊಂಡಿದ್ದರು. ಮೋದಿ ಮಾತಿಗೆ ಇಡೀ ದೇಶವೇ ಬೆಂಬಲ ಸೂಚಿಸಿದೆ. ಇಂತಹ ಸಂದರ್ಭದಲ್ಲೇ ಯುವಿ ಪಿಎಂ ಕೇರ್ಸ್ಗೆ 50 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಕೊರೋನಾ ಸಂಕಷ್ಟಕ್ಕೆ ನೆರವಾಗಿದ್ದಾರೆ
18

ಈಗಾಗಲೇ YouWeCan ಎನ್ನುವ NGO ಮೂಲಕ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ನೆರವಾಗುತ್ತಿರುವ ಯುವಿ
ಈಗಾಗಲೇ YouWeCan ಎನ್ನುವ NGO ಮೂಲಕ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ನೆರವಾಗುತ್ತಿರುವ ಯುವಿ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
28
ಕೊರೋನಾ ಸಂಕಷ್ಟಕ್ಕೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ ಕ್ಯಾನ್ಸರ್ ಗೆದ್ದ ವೀರ
ಕೊರೋನಾ ಸಂಕಷ್ಟಕ್ಕೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ ಕ್ಯಾನ್ಸರ್ ಗೆದ್ದ ವೀರ
38
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ಬಡವರಿಗೆ ನೆರವಾಗುತ್ತಿದ್ದ ಶಾಹಿದ್ ಅಫ್ರಿದಿ ಫೌಂಡೇಶನ್ಗೆ ದೇಣಿಗೆ ನೀಡಿ ಎಂದು ಹೇಳಿ ಟೀಕೆಗೆ ಗುರಿಯಾಗಿದ್ದ ಯುವರಾಜ್ ಸಿಂಗ್
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ಬಡವರಿಗೆ ನೆರವಾಗುತ್ತಿದ್ದ ಶಾಹಿದ್ ಅಫ್ರಿದಿ ಫೌಂಡೇಶನ್ಗೆ ದೇಣಿಗೆ ನೀಡಿ ಎಂದು ಹೇಳಿ ಟೀಕೆಗೆ ಗುರಿಯಾಗಿದ್ದ ಯುವರಾಜ್ ಸಿಂಗ್
48
ಆ ಬಳಿಕ ಸ್ಪಷ್ಟನೆ ನೀಡಿದ್ದ ಯುವಿ, ತಾವು ಮಾನವೀಯತೆಯ ಪರ ಎಂದು ಟೀಕಾಕಾರರ ಬಾಯಿ ಮುಚ್ಚಿಸಿದ್ದರು
ಆ ಬಳಿಕ ಸ್ಪಷ್ಟನೆ ನೀಡಿದ್ದ ಯುವಿ, ತಾವು ಮಾನವೀಯತೆಯ ಪರ ಎಂದು ಟೀಕಾಕಾರರ ಬಾಯಿ ಮುಚ್ಚಿಸಿದ್ದರು
58
ಈಗಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್, ರೋಹಿತ್ ಶರ್ಮಾ, ಸುರೇಶ್ ರೈನಾ, ಗೌತಮ್ ಗಂಭೀರ್, ಅಜಿಂಕ್ಯ ರಹಾನೆ ಸೇರಿದಂತೆ ಹಲವು ಕ್ರಿಕೆಟಿಗರು ಲಕ್ಷಾಂತರ ರುಪಾಯಿಗಳನ್ನು ಪಿಎಂ ಕೇರ್ಸ್ಗೆ ದೇಣಿಗೆ ಅರ್ಪಿಸಿದ್ದಾರೆ.
ಈಗಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್, ರೋಹಿತ್ ಶರ್ಮಾ, ಸುರೇಶ್ ರೈನಾ, ಗೌತಮ್ ಗಂಭೀರ್, ಅಜಿಂಕ್ಯ ರಹಾನೆ ಸೇರಿದಂತೆ ಹಲವು ಕ್ರಿಕೆಟಿಗರು ಲಕ್ಷಾಂತರ ರುಪಾಯಿಗಳನ್ನು ಪಿಎಂ ಕೇರ್ಸ್ಗೆ ದೇಣಿಗೆ ಅರ್ಪಿಸಿದ್ದಾರೆ.
68
ಬಿಸಿಸಿಐ ಬರೋಬ್ಬರಿ 51 ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್ಗೆ ಅರ್ಪಿಸಿದೆ, ಇನ್ನು ಹಾಕಿ ಇಂಡಿಯಾ ಸಂಸ್ಥೆ ಒಂದು ಕೋಟಿ ರುಪಾಯಿಗಳನ್ನು ನೀಡಿದೆ
ಬಿಸಿಸಿಐ ಬರೋಬ್ಬರಿ 51 ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್ಗೆ ಅರ್ಪಿಸಿದೆ, ಇನ್ನು ಹಾಕಿ ಇಂಡಿಯಾ ಸಂಸ್ಥೆ ಒಂದು ಕೋಟಿ ರುಪಾಯಿಗಳನ್ನು ನೀಡಿದೆ
78
ಯುವಿ ಕೆಲದಿನಗಳ ಹಿಂದಷ್ಟೇ ಗಂಗೂಲಿ ತಮಗೆ ಬೆಂಬಲಿಸಿದಷ್ಟು ಧೋನಿ ಹಾಗೂ ಕೊಹ್ಲಿ ನಾಯಕನಾಗಿ ಸಪೋರ್ಟ್ ಮಾಡಿರಲಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದರು
ಯುವಿ ಕೆಲದಿನಗಳ ಹಿಂದಷ್ಟೇ ಗಂಗೂಲಿ ತಮಗೆ ಬೆಂಬಲಿಸಿದಷ್ಟು ಧೋನಿ ಹಾಗೂ ಕೊಹ್ಲಿ ನಾಯಕನಾಗಿ ಸಪೋರ್ಟ್ ಮಾಡಿರಲಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದರು
88
2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಹೀರೋ ಯುವಿ 2019ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದರು
2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಹೀರೋ ಯುವಿ 2019ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದರು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos