MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ದಾಂಪತ್ಯ ಜೀವನದಲ್ಲಿ ಬಿರುಕು; ಕೊನೆಗೂ ಮೌನ ಮುರಿದ ಯುಜುವೇಂದ್ರ ಚಹಲ್‌..!

ದಾಂಪತ್ಯ ಜೀವನದಲ್ಲಿ ಬಿರುಕು; ಕೊನೆಗೂ ಮೌನ ಮುರಿದ ಯುಜುವೇಂದ್ರ ಚಹಲ್‌..!

ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಜೋಡಿ ಬೇರ್ಪಡಲಿದೆ ಎಂದೆಲ್ಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೀಗ ಈ ಎಲ್ಲಾ ವಿಚಾರಗಳ ಕುರಿತಂತೆ ಲೆಗ್‌ ಸ್ಪಿನ್ನರ್ ಯುಜುವೇಂದ್ರ ಚಹಲ್, ಮೌನ ಮುರಿದಿದ್ದಾರೆ. 

1 Min read
Naveen Kodase
Published : Aug 19 2022, 03:22 PM IST
Share this Photo Gallery
  • FB
  • TW
  • Linkdin
  • Whatsapp
17

ಟೀಂ ಇಂಡಿಯಾ ಲೆಗ್‌ಸ್ಪಿನ್ನರ್ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ 2020ರ ಆಗಸ್ಟ್ ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡು, 2022ರ ಡಿಸೆಂಬರ್ 22ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು.

27

ಈ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಕ್ರಿಯವಾಗಿತ್ತು. ಇದರ ಜತೆಗೆ ಚಹಲ್ ಕ್ರಿಕೆಟ್‌ ಆಡಲು ಮೈದಾನಕ್ಕೆ ಇಳಿದಾಗಲೆಲ್ಲಾ, ಧನಶ್ರೀ ವರ್ಮಾ ಸ್ಟೇಡಿಯಂಗೆ ಬಂದು ತಮ್ಮ ಪತಿಯನ್ನು ಹುರುದುಂಬಿಸುತ್ತಿದ್ದರು.

37

ಸ್ವತಃ ಯೂಟ್ಯೂಬರ್, ಡ್ಯಾನ್ಸರ್ ಹಾಗೂ ಕೊರಿಯೋಗ್ರಾಫರ್ ಆಗಿರುವ ಧನಶ್ರೀ ವರ್ಮಾ, ತಮ್ಮ ಪತಿ ಚಹಲ್‌ ಜತೆಗೆ ಮಾತ್ರವಲ್ಲದೇ ಇತ್ತೀಚೆಗಿನ ದಿನಗಳಲ್ಲಿ ಶ್ರೇಯಸ್ ಅಯ್ಯರ್, ಶಿಖರ್ ಧವನ್ ಜತೆಗೂ ಡ್ಯಾನ್ಸ್‌ ಮಾಡಿ ಗಮನ ಸೆಳೆದಿದ್ದರು.
 

47

ಇದೆಲ್ಲದರ ನಡುವೆ, ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಸದ್ಯದಲ್ಲಿಯೇ ಬೇರ್ಪಡೆಯಾಗಲಿದ್ದಾರೆ ಎಂದೆಲ್ಲಾ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

57
Yuzvendra Chahal

Yuzvendra Chahal

ಇದೆಲ್ಲದರ ನಡುವೆ ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್, ಬುಧವಾರವಷ್ಟೇ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹೊಸ ಬದುಕು ಆರಂಭವಾಗುತ್ತಿದೆ(‘New Life Loading’) ಎಂದು ಬರೆದುಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

67

ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಂಚಲನ ಮೂಡಿಸುತ್ತಿದ್ದಂತೆಯೇ, ಎಚ್ಚೆತ್ತುಕೊಂಡ ಯುಜುವೇಂದ್ರ ಚಹಲ್ ಸರಿಯಾದ ಸ್ಪಷ್ಟನೆ ನೀಡುವ ಮೂಲಕ ಗಾಳಿ ಸುದ್ದಿಗೆ ತೆರೆ ಎಳೆದಿದ್ದಾರೆ.

77

ಇನ್ನು ಧನಶ್ರೀ ವರ್ಮಾ ಕೂಡಾ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ನಮ್ಮ ಸಂಬಂಧದ ಕುರಿತಂತೆ ಹಬ್ಬಿರುವ ಗಾಳಿ ಸುದ್ದಿಯನ್ನು ನಂಬಬೇಡಿ. ಇದಕ್ಕೆಲ್ಲಾ ಕೊನೆ ಹಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಯುಜ್ವೇಂದ್ರ ಚಹಲ್
ಧನಶ್ರೀ ವರ್ಮಾ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved