MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಸೆಲೆಕ್ಷನ್ ಕಮಿಟಿ ಬಳಿಕ ಎಲೆಕ್ಷನ್ ಕಮಿಷನ್‌ನಿಂದಲೂ ಶಮಿಗೆ ಶಾಕ್, SIR ಸಂಬಂಧ ಸಮನ್ಸ್

ಸೆಲೆಕ್ಷನ್ ಕಮಿಟಿ ಬಳಿಕ ಎಲೆಕ್ಷನ್ ಕಮಿಷನ್‌ನಿಂದಲೂ ಶಮಿಗೆ ಶಾಕ್, SIR ಸಂಬಂಧ ಸಮನ್ಸ್

ಸೆಲೆಕ್ಷನ್ ಕಮಿಟಿ ಬಳಿಕ ಎಲೆಕ್ಷನ್ ಕಮಿಷನ್‌ನಿಂದಲೂ ಶಮಿಗೆ ಶಾಕ್, SIR ಸಂಬಂಧ ಸಮನ್ಸ್ ನೀಡಲಾಗಿದೆ. ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕುರಿತು ಮೊಹಮ್ಮದ್ ಶಮಿ ಹಾಗೂ ಶಮಿ ಸಹೋದರನಿಗೂ ಸಮನ್ಸ್ ನೀಡಲಾಗಿದೆ. 

1 Min read
Author : Chethan Kumar
Published : Jan 05 2026, 07:03 PM IST
Share this Photo Gallery
  • FB
  • TW
  • Linkdin
  • Whatsapp
16
ಆಯ್ಕೆ ಸಮಿತಿ ಬಳಿಕ ಚನಾವಣಾ ಆಯೋಗದ ಶಾಕ್
Image Credit : ANI

ಆಯ್ಕೆ ಸಮಿತಿ ಬಳಿಕ ಚನಾವಣಾ ಆಯೋಗದ ಶಾಕ್

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಭಾರತದ ಕಂಡ ಅತ್ಯುತ್ತಮ ಬೌಲರ್ ಪೈಕಿ ಒಬ್ಬರು. ಆದರೆ ಕಳೆದ ಕೆಲ ವರ್ಷಗಳಿಂದ ಮೊಹಮ್ಮದ್ ಶಮಿಯನ್ನು ಆಯ್ಕೆ ಸಮಿತಿ ಕಡೆಗಣಿಸುತ್ತಾ ಬಂದಿದೆ. ಜನವರಿ 11ರಿಂದ ಆರಂಭಗೊಳ್ಳುತ್ತಿರುವ ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಶಮಿ ಆಯ್ಕೆಯಾಗಿಲ್ಲ. ಈ ಮೂಲಕ ಶಮಿಗೆ ಮತ್ತೆ ಆಯ್ಕೆ ಸಮಿತಿ ಶಾಕ್ ಕೊಟ್ಟಿದೆ. ಇದರ ಬೆನ್ನಲ್ಲೇ ಎಲೆಕ್ಷನ್ ಕಮಿಷನ್ ಕೂಡ ಶಾಕ್ ನಡಿದೆ.

26
SIR ಸಂಬಂಧ ಮೊಹಮ್ಮದ್ ಶಮಿಗೆ ಸಮನ್ಸ್
Image Credit : ANI

SIR ಸಂಬಂಧ ಮೊಹಮ್ಮದ್ ಶಮಿಗೆ ಸಮನ್ಸ್

ಮತದರಾರ ಪಟ್ಟಿ ತೀವ್ರ ಪರಿಷ್ಕರಣೆ( SIR) ಸಂಬಂಧ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಹಾಗೂ ಶಮಿ ಸಹೋದರ ಮೊಹಮ್ಮದ್ ಕೈಫ್‌ಗೆ ಸಮನ್ಸ್ ನೀಡಿದೆ. ಮೊಹಮ್ಮದ್ ಶಮಿ ಭರ್ತಿ ಮಾಡಿರುವ SIR ಫಾರ್ಮ್‌ನಲ್ಲಿ ಕೆಲ ವ್ಯತ್ಯಾಸಗಳಿವೆ. ಇಷ್ಟೇ ಅಲ್ಲ ದಾಖಲೆಗಳು, ಮಾಹಿತಿಗಳು ತಾಳೆಯಾಗುತ್ತಿಲ್ಲ. ಹೀಗಾಗಿ ಎಲೆಕ್ಷನ್ ಕಮಿಷನ್ ಸಮನ್ಸ್ ನೀಡಿದೆ.

Related Articles

Related image1
ಮೊಹಮ್ಮದ್ ಶಮಿ ಯಾಕೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿಲ್ಲ; ಕೊನೆಗೂ ಬಯಲಾಯ್ತು ಸತ್ಯ!
Related image2
ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!
36
ಶಮಿಗೆ ಸಮನ್ಸ್ ನೀಡಲು ಇದೆ ಮುಖ್ಯ ಕಾರಣ
Image Credit : X

ಶಮಿಗೆ ಸಮನ್ಸ್ ನೀಡಲು ಇದೆ ಮುಖ್ಯ ಕಾರಣ

ಮೊಹಮ್ಮದ್ ಶಮಿ ಮತದಾರರ ಚೀಟಿ ಕೋಲ್ಕತಾ ಮುನ್ಸಿಪಲ್ ಕಾರ್ಪೋರೇಶನ್ ವಾರ್ಡ್ ನಂ.93ರಲ್ಲಿದೆ. ಇದು ರಶಬೆಹಾರಿ ವಿಧಾನಸಭಾ ಕ್ಷೇತ್ರದಡಿ ಬರಲಿದೆ. ಆದರೆ ಮೊಹಮ್ಮದ್ ಶಮಿ ಜನನ ಉತ್ತರ ಪ್ರದೇಶದ ಅಮೋರ ಜಿಲ್ಲೆಯಲ್ಲಿ. ಇತ್ತ ಶಮಿ ಭರ್ತಿ ಮಾಡಿರುವ ಅರ್ಜಿಯಲ್ಲಿ ಕೆಲ ವ್ಯತ್ಯಾಸಗಳು ಕಂಡು ಬಂದಿದೆ. ಹೀಗಾಗಿ ಅಧಿಕಾರಿಗಳ ಮುಂದೆ ಹಾಜರಾಗಿ ಮಾಹಿತಿ ನೀಡಲು ಸೂಚಿಸಲಾಗಿದೆ.

46
ಜನವರಿ 5ಕ್ಕೆ ಡೆಡ್‌ಲೈನ್ ನೀಡಿದ್ದ ಚುನಾವಣಾ ಆಯೋಗ
Image Credit : Instagram/mdshami.11

ಜನವರಿ 5ಕ್ಕೆ ಡೆಡ್‌ಲೈನ್ ನೀಡಿದ್ದ ಚುನಾವಣಾ ಆಯೋಗ

ಮೊಹಮ್ಮದ್ ಶಮಿಗೆ ಚುನಾವಣಾ ಆಯೋಗ ನೀಡಿದ ಸಮನ್ಸ್‌ನಲ್ಲಿ ಜನವರಿ 5ರೊಳಗೆ ಚುನಾವಣಾ ಆಯೋಗ ಕಚೇರಿಗೆ ಹಾಜರಾಗಲು ಸೂಚಿಸಿತ್ತು. SIR ಕುರಿತು ಅಧಿಕಾರಿಗಳ ವಿಚಾರಣೆಗೆ ಹಾಜರಾಗಲು ಸಮನ್ಸ್‌ನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿತ್ತು. ಆದರೆ ಮೊಹಮ್ಮದ್ ಶಮಿ ಹಾಜರಾಗಲು ಸಾಧ್ಯವಾಗಿಲ್ಲ.

56
ಚುನಾವಣಾ ಆಯೋಗಕ್ಕೆ ಪತ್ರ ಬರೆದ ಶಮಿ
Image Credit : Social Media

ಚುನಾವಣಾ ಆಯೋಗಕ್ಕೆ ಪತ್ರ ಬರೆದ ಶಮಿ

ಚುನಾವಣಾ ಆಯೋಗ ಸಮನ್ಸ್ ಕುರಿತು ಮೊಹಮ್ಮದ್ ಶಮಿ ಆಯೋಗಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಸಂಬಂಧ ರಾಜ್‌ಕೋಟ್‌ನಲ್ಲಿರುವ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ. ನೀವು ಸೂಚಿಸಿದ ಸಮಯದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಶಮಿ ಪತ್ರದ ಮೂಲಕ ಹೇಳಿದ್ದಾರೆ.

66
ದಿನಾಂಕ ಮೂಂದೂಡಿದ ಚುನಾವಣಾ ಆಯೋಗ
Image Credit : Getty

ದಿನಾಂಕ ಮೂಂದೂಡಿದ ಚುನಾವಣಾ ಆಯೋಗ

ಮೊಹಮ್ಮದ್ ಶಮಿ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರವನ್ನು ಆಯೋಗ ಪರಿಗಣಿಸಿದೆ. ಹೀಗಾಗಿ ಜನವರಿ 5ರ ಡೆಡ್‌ಲೈನ್ ದಿನಾಂಕವನ್ನು ಇದೀಗ ಜನವರಿ 9 ಹಾಗೂ ಜನವರಿ 11ಕ್ಕೆ ಹಾಜರಾಗುವಂತೆ ಸೂಚಿಸಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮೊಹಮ್ಮದ್ ಶಮಿ
ಕ್ರಿಕೆಟ್

Latest Videos
Recommended Stories
Recommended image1
ಭಾರತ-ನ್ಯೂಜಿಲೆಂಡ್ ನಡುವಿನ ಮ್ಯಾಚ್ ಫ್ರೀ ಆಗಿ ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಡೀಟೈಲ್ಸ್
Recommended image2
ಈ ಬಾಂಗ್ಲಾದೇಶ ಕ್ರಿಕೆಟಿಗನ ಪತ್ನಿ ಶ್ರೀಕೃಷ್ಣನ ಅಪ್ಪಟ ಆರಾಧಕಿ!
Recommended image3
ಈತ ಭಾರತ ಏಕದಿನ ತಂಡದಲ್ಲಿ ಯಾಕಿದ್ದಾನೆ? ಗಾಯಕ್ವಾಡ್ ಬದಲಿಗೆ ಈ ಆಟಗಾರನಿಗೆ ಸ್ಥಾನ ನೀಡಿದ್ದಕ್ಕೆ ಕಿಡಿಕಾರಿದ ಮಾಜಿ ಕ್ರಿಕೆಟರ್!
Related Stories
Recommended image1
ಮೊಹಮ್ಮದ್ ಶಮಿ ಯಾಕೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿಲ್ಲ; ಕೊನೆಗೂ ಬಯಲಾಯ್ತು ಸತ್ಯ!
Recommended image2
ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved