2026ರ ಟಿ20 ವಿಶ್ವಕಪ್ ಮತ್ತೆ ಭಾರತವೇ ಗೆಲ್ಲುತ್ತೆ ಅನ್ನೋದಕ್ಕೆ ಈ 5 ಕಾರಣಗಳು ಸಾಕು!
ICC ಪುರುಷರ T20 ವಿಶ್ವಕಪ್ 2026: ಈ ಬಾರಿಯೂ ಟಿ20 ವಿಶ್ವಕಪ್ ಟೀಂ ಇಂಡಿಯಾ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಕ್ರೀಡಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಬರೀ ಮಾತಲ್ಲ, ಅದಕ್ಕೆ 5 ಬಲವಾದ ಕಾರಣಗಳನ್ನೂ ಅವರು ನೀಡುತ್ತಿದ್ದಾರೆ.

2026ರ ವಿಶ್ವಕಪ್ ಭಾರತದ್ದೇ?
ICC T20 ವಿಶ್ವಕಪ್ 2026: ಐಸಿಸಿ ನಡೆಸುವ ಪ್ರಮುಖ ಟೂರ್ನಿಗಳಲ್ಲಿ ಟಿ20 ವಿಶ್ವಕಪ್ ಕೂಡ ಒಂದು. ಈ ಬಾರಿ ಭಾರತ ಮತ್ತು ಶ್ರೀಲಂಕಾ ಈ ಟೂರ್ನಿಗೆ ಆತಿಥ್ಯ ವಹಿಸುತ್ತಿವೆ. ತವರಿನಲ್ಲೇ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಸಜ್ಜಾಗಿದೆ. ಸದ್ಯ ಟಿ20 ಮಾದರಿಯಲ್ಲಿ ಭಾರತದ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ವಿಶ್ವದ ನಂಬರ್ 1 ತಂಡವಾಗಿರುವ ಭಾರತವನ್ನು ಅದರದ್ದೇ ನೆಲದಲ್ಲಿ ಸೋಲಿಸುವುದು ಸುಲಭವಲ್ಲ. ಹಾಗಾಗಿ ಈ ಬಾರಿ ಟ್ರೋಫಿ ಭಾರತದ್ದೇ ಎನ್ನುತ್ತಾರೆ ವಿಶ್ಲೇಷಕರು. ಇದಕ್ಕೆ ಅವರು ನೀಡುವ ಐದು ಕಾರಣಗಳನ್ನು ನೋಡೋಣ.
ಸೂರ್ಯಕುಮಾರ್ ನಾಯಕತ್ವದ ಮ್ಯಾಜಿಕ್
ಭಾರತದ ಟಿ20 ನಾಯಕನಾಗಿ ಸೂರ್ಯಕುಮಾರ್ ಯಾದವ್ಗೆ ಇದು ಮೊದಲ ವಿಶ್ವಕಪ್. ಹಾಗೆಯೇ, ಗೌತಮ್ ಗಂಭೀರ್ ಕೋಚ್ ಆದ ನಂತರ ಎದುರಿಸುತ್ತಿರುವ ಮೊದಲ ವಿಶ್ವಕಪ್ ಕೂಡ ಇದಾಗಿದೆ. ಹೀಗಾಗಿ ಇಬ್ಬರಿಗೂ ಈ ವಿಶ್ವಕಪ್ ಬಹಳ ವಿಶೇಷ. ಶತಾಯಗತಾಯ ಗೆಲ್ಲಲೇಬೇಕೆಂಬ ಹಠದಲ್ಲಿದ್ದಾರೆ. ಇನ್ನು, ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ಅವರಿಲ್ಲದೆ ಟೀಂ ಇಂಡಿಯಾ ಆಡುತ್ತಿರುವ ಮೊದಲ ವಿಶ್ವಕಪ್ ಇದು. ಇವರ ನಿವೃತ್ತಿ ನಂತರ ತಂಡ ದುರ್ಬಲವಾಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಯುವ ತಂಡವು ನಿರೀಕ್ಷೆ ಮೀರಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಇದೇ ಆಟ ಮುಂದುವರೆಸಿದರೆ ಕಪ್ ಗೆಲ್ಲುವುದು ಖಚಿತ ಎನ್ನುವುದು ಅಭಿಮಾನಿಗಳ ನಂಬಿಕೆ.
ಪವರ್ಪ್ಲೇನಲ್ಲಿ ಬ್ಯಾಟಿಂಗ್ ಪ್ರಾಬಲ್ಯ
ಟೀಂ ಇಂಡಿಯಾ ಪವರ್ಪ್ಲೇನಲ್ಲಿ ಪ್ರಾಬಲ್ಯ ಸಾಧಿಸುವ ಎಲ್ಲ ಲಕ್ಷಣಗಳಿವೆ. ಓಪನರ್ ಅಭಿಷೇಕ್ ಶರ್ಮಾ ಅದ್ಭುತ ಸ್ಟ್ರೈಕ್ ರೇಟ್ನೊಂದಿಗೆ ಸ್ಫೋಟಕ ಆಟವಾಡುತ್ತಿದ್ದಾರೆ. ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಜೊತೆಗೂಡಿ ಅವರು ತಂಡಕ್ಕೆ ಬಲವಾದ ಅಡಿಪಾಯ ಹಾಕುವ ನಿರೀಕ್ಷೆಯಿದೆ. ಇವರಿಬ್ಬರೂ ಮಿಂಚಿದರೆ ಭಾರತದ ಗೆಲುವು ಸುಲಭವಾಗಲಿದೆ.
ಮಧ್ಯಮ ಕ್ರಮಾಂಕದಲ್ಲಿದೆ ಆನೆ ಬಲ
ಕೋಚ್ ಗಂಭೀರ್ ಮಾರ್ಗದರ್ಶನದಲ್ಲಿ ಮಧ್ಯಮ ಕ್ರಮಾಂಕವು ಹೆಚ್ಚು ಫ್ಲೆಕ್ಸಿಬಲ್ ಆಗಿದೆ. ನಾಯಕ ಸೂರ್ಯಕುಮಾರ್, ಹಿರಿಯ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಸ್ಫೋಟಕ ಆಟಗಾರರಾದ ಶಿವಂ ದುಬೆ, ರಿಂಕು ಸಿಂಗ್ ಮತ್ತು ಅಕ್ಷರ್ ಪಟೇಲ್ ಪಂದ್ಯದ ಗತಿಯನ್ನೇ ಬದಲಿಸಬಲ್ಲರು. ಇವರೆಲ್ಲರೂ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಡುವ ಸಾಮರ್ಥ್ಯ ಹೊಂದಿದ್ದಾರೆ.
ಸ್ಪಿನ್ ಬೌಲಿಂಗ್ ತಂತ್ರ
ಬಲಿಷ್ಠ ವೇಗದ ಬೌಲಿಂಗ್ ಪಡೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

