MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಆದರೆ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಐವರಿಗೆ ಬಿಸಿಸಿಐ ಸೆಲೆಕ್ಷನ್ ಕಮಿಟಿ ಶಾಕ್ ನೀಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ. 

1 Min read
Author : Naveen Kodase
Published : Jan 04 2026, 10:19 AM IST
Share this Photo Gallery
  • FB
  • TW
  • Linkdin
  • Whatsapp
17
ಭಾರತ ಕ್ರಿಕೆಟ್ ತಂಡ ಪ್ರಕಟ
Image Credit : Getty

ಭಾರತ ಕ್ರಿಕೆಟ್ ತಂಡ ಪ್ರಕಟ

ಇದೇ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ಶುಭ್‌ಮನ್ ಗಿಲ್ ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

27
ಪಾಂಡ್ಯ-ಶಮಿಗೆ ರೆಸ್ಟ್‌
Image Credit : Getty

ಪಾಂಡ್ಯ-ಶಮಿಗೆ ರೆಸ್ಟ್‌

ಇನ್ನು ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಬುಮ್ರಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಕಮ್‌ಬ್ಯಾಕ್ ನೀಡುವ ನಿರೀಕ್ಷೆಯಲ್ಲಿದ್ದ ಮೊಹಮ್ಮದ್ ಶಮಿಗೆ ಬಿಸಿಸಿಐ ಆಯ್ಕೆ ಸಮಿತಿ ಶಾಕ್ ನೀಡಿದೆ.

Related Articles

Related image1
'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!
Related image2
ಶಮಿ ಆಯ್ಕೆ ವಿವಾದ: ಕೊನೆಗೂ ಮೌನ ಮುರಿದು ಅಚ್ಚರಿ ಹೇಳಿಕೆ ಕೊಟ್ಟ ಸೌರವ್ ಗಂಗೂಲಿ!
37
1. ಮೊಹಮ್ಮದ್ ಶಮಿ
Image Credit : ANI

1. ಮೊಹಮ್ಮದ್ ಶಮಿ

ಅನುಭವಿ ವೇಗಿ ಮೊಹಮ್ಮದ್ ಶಮಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಿದ್ದೂ ಶಮಿಗೆ ಆಯ್ಕೆ ಸಮಿತಿಗೂ ಶಮಿಗೆ ಮಣೆ ಹಾಕದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

47
2. ಇಶಾನ್ ಕಿಶನ್
Image Credit : Getty

2. ಇಶಾನ್ ಕಿಶನ್

ಇನ್ನು ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ ಫೈನಲ್‌ನಲ್ಲಿ ಶತಕ ಸಿಡಿಸಿ ಜಾರ್ಖಂಡ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಇಶಾನ್ ಕಿಶನ್‌ಗೂ ಕೂಡಾ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇಶಾನ್ ಕಿಶನ್ ಕಿವೀಸ್ ಎದುರಿನ ಟಿ20 ಸರಣಿ ಹಾಗೂ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿದ್ದಾರೆ.

57
3. ಋತುರಾಜ್ ಗಾಯಕ್ವಾಡ್
Image Credit : Getty

3. ಋತುರಾಜ್ ಗಾಯಕ್ವಾಡ್

ಪುಣೆ ಮೂಲದ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದೆ. ಗಾಯಕ್ವಾಡ್ ಭಾರತ ಪರ ಕಳೆದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ಹೀಗಿದ್ದೂ ಋತುರಾಜ್‌ಗೆ ಆಯ್ಕೆ ಸಮಿತಿ ತಂಡದಿಂದ ಕೈಬಿಟ್ಟು ಶಾಕ್ ನೀಡಿದೆ.

67
4. ಅಕ್ಷರ್ ಪಟೇಲ್
Image Credit : Getty

4. ಅಕ್ಷರ್ ಪಟೇಲ್

ಭಾರತದ ಪ್ರತಿಭಾನ್ವಿತ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಏಕದಿನ ಸರಣಿಯಿಂದ ಕೈಬಿಟ್ಟಿದೆ. ಅಕ್ಷರ್ ಪಟೇಲ್ ಏಕಾಂಗಿಯಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಪಂದ್ಯದ ದಿಕ್ಕು ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

77
5. ದೇವದತ್ ಪಡಿಕ್ಕಲ್
Image Credit : Social Media

5. ದೇವದತ್ ಪಡಿಕ್ಕಲ್

ಇನ್ನು ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕಳೆದ 5 ಪಂದ್ಯಗಳ ಪೈಕಿ ನಾಲ್ಕು ಪಂದ್ಯಗಳಲ್ಲಿ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಪಡಿಕ್ಕಲ್ ಪ್ರದರ್ಶನ ಗಮನಿಸಿದರೆ, ಭಾರತ ತಂಡದಲ್ಲಿ ಈ ಬಾರಿ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಮೊಹಮ್ಮದ್ ಶಮಿ
ಬಿಸಿಸಿಐ
ಅಜಿತ್ ಅಗರ್ಕರ್

Latest Videos
Recommended Stories
Recommended image1
'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!
Recommended image2
ಐಪಿಎಲ್ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳ ಆಯೋಜನೆಗೆ ಸಿದ್ಧತೆ ಶುರು
Recommended image3
ಈಗ ಭಾರತ- ಬಾಂಗ್ಲಾ ಕ್ರಿಕೆಟ್‌ ಯುದ್ಧ!
Related Stories
Recommended image1
'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!
Recommended image2
ಶಮಿ ಆಯ್ಕೆ ವಿವಾದ: ಕೊನೆಗೂ ಮೌನ ಮುರಿದು ಅಚ್ಚರಿ ಹೇಳಿಕೆ ಕೊಟ್ಟ ಸೌರವ್ ಗಂಗೂಲಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved