MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Sports
  • Cricket
  • ರಿಷಭ್ ಪಂತ್ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ಆತನ ಕೆನ್ನೆಗೆ ಬಾರಿಸುತ್ತೇನೆಂದ ಮಾಜಿ ನಾಯಕ..!

ರಿಷಭ್ ಪಂತ್ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ಆತನ ಕೆನ್ನೆಗೆ ಬಾರಿಸುತ್ತೇನೆಂದ ಮಾಜಿ ನಾಯಕ..!

ನವದೆಹಲಿ(ಫೆ.08): ಟೀಂ ಇಂಡಿಯಾ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್‌ ಪಂತ್, ಕಳೆದ ವರ್ಷದ ಕೊನೆಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿ, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಮಾಜಿ ನಾಯಕರೊಬ್ಬರು, ಪಂತ್ ಚೇತರಿಸಿಕೊಂಡ ಬಳಿಕ ಆತನ ಕೆನ್ನೆಗೆ ಬಾರಿಸುವುದಾಗಿ ಹೇಳಿದ್ದಾರೆ. ಅಷ್ಟಕ್ಕೂ ಯಾರು ಆ ನಾಯಕ? ಪಂತ್ ಕೆನ್ನೆಗೆ ಬಾರಿಸಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

2 Min read
Author : Naveen Kodase
| Updated : Feb 08 2023, 02:41 PM IST
Share this Photo Gallery
  • FB
  • TW
  • Linkdin
  • Whatsapp
110

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಡಿಸೆಂಬರ್ 29ರ ರಾತ್ರಿ ಗುರುವಾರ ತಮ್ಮ ಮರ್ಸಿಡೀಸ್‌ ಕಾರನ್ನು ತಾವೇ ಚಾಲನೆ ಮಾಡುತ್ತಾ ದೆಹಲಿಯಿಂದ ಉತ್ತರಾಖಂಡದ ರೂರ್ಕೀ ಎಂಬಲ್ಲಿರುವ ತಮ್ಮ ನಿವಾಸಕ್ಕೆ ಹೊರಟಿದ್ದ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210

ಹೊಸ ವರ್ಷವನ್ನು ತಾಯಿಯ ಜೊತೆ ಆಚರಿಸಲು, ಅವರಿಗೆ ಅಚ್ಚರಿ ನೀಡಲು ತೆರಳುತ್ತಿದ್ದ ಸಂದರ್ಭದಲ್ಲಿ, ಬೆಳಗ್ಗಿನ ಜಾವ 5.30ರ ಸುಮಾರಿಗೆ ಮೊಹಮದ್‌ಪುರ ಎಂಬಲ್ಲಿ ಅಪಘಾತ ಸಂಭವಿಸಿದೆ. ಕ್ಷಣಾರ್ಧದಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿತ್ತು.
 

310

ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ಮುನ್ನ ಕೂದಲೆಳೆ ಅಂತರದಲ್ಲಿ ಪಂತ್‌ ಕಾರಿನ ಗಾಜು ಒಡೆದು ಹೊರಬಂದಿದ್ದು, ಬಲುದೊಡ್ಡ ಅಪಾಯದಿಂದ ಪಾರಾಗಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಬಸ್‌ ಚಾಲಕ ಹಾಗೂ ಕಂಡಕ್ಟರ್, ರಸ್ತೆಯ ಪಕ್ಕದಲ್ಲೇ ರಿಷಭ್‌ರನ್ನು ಮಲಗಿಸಿ ತಮ್ಮ ಹೊದಿಕೆಯನ್ನು ಅವರ ಮೈ ಮೇಲೆ ಹಾಕಿ, ಬಳಿಕ ಆ್ಯಂಬುಲೆನ್ಸ್‌ಗೆ ಕರೆ ಮಾಡಿ ನೆರವಾಗಿದ್ದರು.
 

410

ಮೊದಲಿಗೆ ರೂರ್ಕೀಯ ಸಕ್ಷಮ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹರಾಡೂನ್‌ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಡೆಹರಾಡೂನ್‌ ಬಳಿಕ ಇದೀಗ ರಿಷಭ್ ಪಂತ್ ಅವರನ್ನು ಮುಂಬೈಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿ ಪಂತ್‌ಗೆ ಅಸ್ತಿಬಂಧಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ. ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.
 

510

ಇದೀಗ ರಿಷಭ್ ಪಂತ್ ಅವರ ಅಪಘಾತದ ಕುರಿತಂತೆ ಮತ್ತೊಮ್ಮೆ ತುಟಿ ಬಿಚ್ಚಿರುವ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್, ಲಘು ದಾಟಿಯಲ್ಲಿಯೇ, ಗಾಯದಿಂದ ಸಂಪೂರ್ಣ ಚೇತರಿಸಿಕೊಂಡ ಬಳಿಕ ಆತನ ಕೆನ್ನೆಗೆ ಬಾರಿಸುವುದಾಗಿ ಹೇಳಿದ್ದಾರೆ.
 

610

Uncut ವಿಡಿಯೋದಲ್ಲಿ, ರಿಷಭ್ ಪಂತ್ ಇಲ್ಲದ ಟೀಂ ಇಂಡಿಯಾ, ಒಂದು ರೀತಿ ಜಾಳಾಗಿ(ಹರಿದು ಚಿಂದಿಯಾದಂತೆ) ಕಾಣುತ್ತಿದೆ. ಮಕ್ಕಳು ತಪ್ಪು ಮಾಡಿದಾಗ, ಪೋಷಕರು ಒಂದು ಪೆಟ್ಟು ಹೊಡೆಯುವಂತೆ ತಾವು, ಪಂತ್‌ ಕೆನ್ನೆಗೆ ಬಾರಿಸಬೇಕೆಂದಿದ್ದೇನೆ ಎಂದು ಕಪಿಲ್ ದೇವ್ ಹೇಳಿದ್ದಾರೆ.

710

"ನನಗೆ ಆತನ ಮೇಲೆ ತುಂಬಾ ಪ್ರೀತಿಯಿದೆ. ನಾನು ಆತ ಆದಷ್ಟು ಬೇಗ ಗುಣಮುಖವಾಗಲಿ ಎಂದು ಆಶಿಸುತ್ತೇನೆ. ಯಾಕೆಂದರೆ ನಾನು, ನಿನ್ನನ್ನು ನೀನು ನೋಡಿಕೋ ಎಂದು ಆತನ ಕೆನ್ನೆಗೆ ಬಾರಿಸಬೇಕೆಂದಿದ್ದೇನೆ. ನೀನು ಮಾಡಿಕೊಂಡ ಅಪಘಾತದಿಂದ ಇಡೀ ತಂಡವೇ ಚಿಂದಿಯಾಗಿ ಹೋಗಿದೆ.

810

ನನಗೆ ಆತನ ಮೇಲೆ ಪ್ರೀತಿಯಿದೆ ಹಾಗೂ ಅಷ್ಟೇ ಕೋಪ ಕೂಡಾ ಇದೆ. ಯುವಕರು ಇಂದಿನ ದಿನಗಳಲ್ಲಿ ಯಾಕೆ ಹೀಗೆ ಮಾಡುತ್ತಾರೋ ಅರ್ಥವಾಗುತ್ತಿಲ್ಲ. ಈ ಕಾರಣಕ್ಕಾಗಿ ನಾನು ಅವರಿಗೆ ಬಾರಿಸಬೇಕೆಂದಿದ್ದೇನೆ ಎಂದು ಕಪಿಲ್ ದೇವ್ ಹೇಳಿದ್ದಾರೆ.
 

910

ಆತನ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನನ್ನದು ಹಾರೈಕೆಯಿದೆ. ಜಗತ್ತಿನಾದ್ಯಂತ ಆತನಿಗೆ ಪ್ರೀತಿ ಹಾಗೂ ಹಾರೈಕೆ ಸಿಕ್ಕಿದೆ. ದೇವರು ಆತನಿಗೆ ಒಳ್ಳೆಯ ಆರೋಗ್ಯ ಕರುಣಿಸಲಿ. ಎಲ್ಲಾ ಚೇತರಿಸಿಕೊಂಡ ಬಳಿಕ, ಒಂದು ವೇಳೆ ಮಕ್ಕಳು ತಪ್ಪು ಮಾಡಿದಾಗ, ಪೋಷಕರು ಒಂದು ಪೆಟ್ಟು ಕೊಡುವಂತೆ ನಾನು, ಪಂತ್‌ಗೆ ಒಂದು ಹೊಡೆತ ನೀಡಬೇಕು ಎಂದು ತಮಾಷೆಯಾಗಿಯೇ ಕಪಿಲ್ ದೇವ್ ಪ್ರತಿಕ್ರಿಯಿಸಿದ್ದಾರೆ.

1010

ಅಪಘಾತದ ಬಳಿಕ ರಿಷಭ್ ಪಂತ್ ಹಲವಾರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪಂತ್ ಸದ್ಯ ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿ, ಮುಂಬರುವ ಐಪಿಎಲ್ ಟೂರ್ನಿ ಸೇರಿದಂತೆ ಟೂರ್ನಿಗಳಿಂದ ಹೊರಗುಳಿಯಲಿದ್ದು, ಆದಷ್ಟು ಬೇಗ ಚೇತರಿಸಿಕೊಂಡು ಪಂತ್ ಕ್ರಿಕೆಟ್ ಮೈದಾನಕ್ಕಿಳಿಯಲಿ ಎನ್ನುವುದು ಅಭಿಮಾನಿಗಳ ಹಾರೈಕೆಯಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ರಿಷಭ್ ಪಂತ್

Latest Videos
Recommended Stories
Recommended image1
ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ: ಇಂದು ಭಾರತ vs ಹಾಂಕಾಂಗ್‌ ಫೈಟ್; ಯಾವ ಚಾನೆಲ್‌ನಲ್ಲಿ ನೇರಪ್ರಸಾರ? ಎಷ್ಟು ಗಂಟೆಗೆ ಆರಂಭ?
Recommended image2
ಸಚಿನ್ ಜತೆ ಬೆಸ್ಟ್ ಕ್ರಿಕೆಟರ್ ಪ್ರಶಸ್ತಿ, 16 ಎಸೆತಗಳಲ್ಲಿ ಫಿಫ್ಟಿ; ಬಿಸಿಸಿಐ ಸೆಲೆಕ್ಟರ್ಸ್‌ಗೆ ಲಂಚ ನೀಡಲು ಹೋಗಿ ಬ್ಯಾನ್ ಆದ ಪ್ರತಿಭಾನ್ವಿತ ಕ್ರಿಕೆಟಿಗ..!
Recommended image3
15 ರೂ ಹೇರ್ ಡೈ ಹೊಡೆದು ಕಿಂಗ್ ಚಾರ್ಲ್ಸ್ ಬೇಟಿಯಾದ್ರಾ ಪಾಕ್ ನಾಯಕ ಬಾಬರ್, ಫುಲ್ ಟ್ರೋಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved