MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಹರ್ಮನ್‌ಪ್ರೀತ್ ಕೌರ್ ನಾಯಕತ್ವ ತ್ಯಜಿಸಲಿ; ಕರ್ನಾಟಕ ಮೂಲದ ಮಾಜಿ ಕ್ರಿಕೆಟರ್ ಆಗ್ರಹ!

ಹರ್ಮನ್‌ಪ್ರೀತ್ ಕೌರ್ ನಾಯಕತ್ವ ತ್ಯಜಿಸಲಿ; ಕರ್ನಾಟಕ ಮೂಲದ ಮಾಜಿ ಕ್ರಿಕೆಟರ್ ಆಗ್ರಹ!

ಮುಂಬೈ: ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಐಸಿಸಿ ಏಕದಿನ ಟ್ರೋಫಿ ಗೆದ್ದು ಬೀಗಿದೆ.ಇದರ ಬೆನ್ನಲ್ಲೇ ಹರ್ಮನ್‌ ನಾಯಕತ್ವದಿಂದ ಕೆಳಗಿಳಿಯಲಿ ಎಂದು ಕನ್ನಡತಿ ಹಾಗೂ ಭಾರತದ ಮೊದಲ ಮಹಿಳಾ ಕ್ಯಾಪ್ಟನ್ ಶಾಂತಾ ರಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

1 Min read
Naveen Kodase
Published : Nov 04 2025, 08:57 AM IST
Share this Photo Gallery
  • FB
  • TW
  • Linkdin
  • Whatsapp
19
ಹರ್ಮನ್‌ಗೆ ನಾಯಕತ್ವ ತ್ಯಜಿಸಲು ಸಲಹೆ
Image Credit : Getty

ಹರ್ಮನ್‌ಗೆ ನಾಯಕತ್ವ ತ್ಯಜಿಸಲು ಸಲಹೆ

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಕಿರೀಟ ಗೆದ್ದ ಬೆನ್ನಲ್ಲೇ, ಹರ್ಮನ್‌ಪ್ರೀತ್ ಕೌರ್ ನಾಯಕತ್ವ ತ್ಯಜಿಸಬೇಕೆಂದು ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಸಲಹೆ ನೀಡಿದ್ದಾರೆ.

29
ಸ್ಮೃತಿ ಮಂಧನಾಗೆ ನಾಯಕತ್ವ ಪಟ್ಟ ಕಟ್ಟಲಿ
Image Credit : Asianet News

ಸ್ಮೃತಿ ಮಂಧನಾಗೆ ನಾಯಕತ್ವ ಪಟ್ಟ ಕಟ್ಟಲಿ

ಭಾರತೀಯ ಕ್ರಿಕೆಟ್‌ನ ಭವಿಷ್ಯದ ದೃಷ್ಟಿಯಿಂದ 36 ವರ್ಷದ ಹರ್ಮನ್‌ಪ್ರೀತ್ ಸ್ಥಾನದಿಂದ ಕೆಳಗಿಳಿದು, 29 ವರ್ಷದ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ನಾಯಕಿಯನ್ನಾಗಿ ಮಾಡಬೇಕೆಂದು ಶಾಂತಾ ರಂಗಸ್ವಾಮಿ ಪಿಟಿಐಗೆ ತಿಳಿಸಿದ್ದಾರೆ.

Related Articles

Related image1
ಚೊಚ್ಚಲ ವಿಶ್ವಕಪ್ ಗೆದ್ದು ಭಾರತೀಯ ಸಂಸ್ಕಾರ ಮೆರೆದ ನಾಯಕಿ ಹರ್ಮನ್‌ಪ್ರೀತ್ ಕೌರ್! ಗುರು ಕಾಣಿಕೆ ಸಲ್ಲಿಕೆ
Related image2
ಚೊಚ್ಚಲ ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ಭಾರತ ಮಹಿಳಾ ತಂಡಕ್ಕೆ ಬಂಪರ್ ಬಹುಮಾನ ಘೋಷಿಸಿದ BCCI! ಸಿಕ್ಕಿದ ನಗದು ಬಹುಮಾನ ಎಷ್ಟು?
39
ನಾಯಕತ್ವ ತ್ಯಜಿಸಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ
Image Credit : Getty

ನಾಯಕತ್ವ ತ್ಯಜಿಸಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ

ನಾಯಕತ್ವ ತ್ಯಜಿಸಿದರೂ, ಹರ್ಮನ್‌ ಬ್ಯಾಟರ್ ಮತ್ತು ಫೀಲ್ಡರ್ ಆಗಿ ತಂಡದಲ್ಲಿ ಮುಂದುವರಿಯಬಹುದು. ನಾಯಕತ್ವದ ಹೊರೆ ಇಳಿದರೆ, ಅವರು ಹೆಚ್ಚು ಸ್ವತಂತ್ರವಾಗಿ ಆಡಲು ಮತ್ತು ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ನಾಯಕತ್ವ ತ್ಯಜಿಸಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ.

49
ಶಾಂತಾ ರಂಗಸ್ವಾಮಿ ಕಿವಿ ಮಾತು
Image Credit : our own

ಶಾಂತಾ ರಂಗಸ್ವಾಮಿ ಕಿವಿ ಮಾತು

ವಿಶ್ವಕಪ್ ಗೆದ್ದ ನಂತರ ನಾಯಕತ್ವ ತ್ಯಜಿಸಿದರೆ ಹಲವರು ಅಸಮಾಧಾನ ವ್ಯಕ್ತಪಡಿಸಬಹುದು. ಆದರೆ ಭಾರತೀಯ ಕ್ರಿಕೆಟ್‌ನ ಭವಿಷ್ಯದ ದೃಷ್ಟಿಯಿಂದ ಇದು ಉತ್ತಮ ನಿರ್ಧಾರವಾಗಲಿದೆ. ಬ್ಯಾಟರ್ ಆಗಿ ಹರ್ಮನ್‌ ತಂಡಕ್ಕೆ ಇನ್ನಷ್ಟು ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಶಾಂತಾ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

59
ನಾಯಕತ್ವದ ಹೊರೆ ಇಳಿಸಿಕೊಳ್ಳಬೇಕು
Image Credit : Getty

ನಾಯಕತ್ವದ ಹೊರೆ ಇಳಿಸಿಕೊಳ್ಳಬೇಕು

ನಾಯಕತ್ವದ ಹೊರೆ ಇಳಿದರೆ, ಹರ್ಮನ್‌ಗೆ ಇನ್ನೂ ಮೂರ್ನಾಲ್ಕು ವರ್ಷಗಳ ಕಾಲ ಆಟ ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಶಾಂತಾ ರಂಗಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

69
ಭವಿಷ್ಯದ ದೃಷ್ಟಿಯಿಂದ ಈ ತೀರ್ಮಾನ ಅನಿವಾರ್ಯ
Image Credit : Getty

ಭವಿಷ್ಯದ ದೃಷ್ಟಿಯಿಂದ ಈ ತೀರ್ಮಾನ ಅನಿವಾರ್ಯ

ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ಈ ವರ್ಷ ಚಾಂಪಿಯನ್ಸ್ ಟ್ರೋಫಿ ಗೆದ್ದರೂ, ಭವಿಷ್ಯದ ದೃಷ್ಟಿಯಿಂದ ಶುಭಮನ್ ಗಿಲ್‌ಗೆ ನಾಯಕತ್ವವನ್ನು ಹಸ್ತಾಂತರಿಸಿದಂತೆ, ಹರ್ಮನ್‌ರಿಂದಲೂ ಇದೇ ರೀತಿಯ ನಿರ್ಧಾರವನ್ನು ನಿರೀಕ್ಷಿಸಲಾಗಿದೆ. 

79
ಭಾರತದ ಬೌಲಿಂಗ್ ಅನ್ನು ಇನ್ನಷ್ಟು ಸುಧಾರಿಸಬೇಕು
Image Credit : X/ImTanujSingh

ಭಾರತದ ಬೌಲಿಂಗ್ ಅನ್ನು ಇನ್ನಷ್ಟು ಸುಧಾರಿಸಬೇಕು

ಆಸ್ಟ್ರೇಲಿಯಾದಂತೆ ಮಹಿಳಾ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮುಂದುವರಿಸಬೇಕಾದರೆ, ಭಾರತವು ಬೌಲಿಂಗ್ ಅನ್ನು ಇನ್ನಷ್ಟು ಸುಧಾರಿಸಬೇಕು ಎಂದು ಶಾಂತಾ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

89
ಮುಂದಿನ ವರ್ಷ ಹರ್ಮನ್ ನಾಯಕತ್ವ ತ್ಯಜಿಸುವ ನಿರೀಕ್ಷೆ
Image Credit : X

ಮುಂದಿನ ವರ್ಷ ಹರ್ಮನ್ ನಾಯಕತ್ವ ತ್ಯಜಿಸುವ ನಿರೀಕ್ಷೆ

ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಹರ್ಮನ್‌ಪ್ರೀತ್ ನಾಯಕತ್ವ ತ್ಯಜಿಸುವ ನಿರೀಕ್ಷೆಯಿದೆ ಎಂದು ಭಾರತದ ಮೊದಲ ಮಹಿಳಾ ಕ್ರಿಕೆಟ್ ಕ್ಯಾಪ್ಟನ್ ಶಾಂತಾ ರಂಗಸ್ವಾಮಿ ಹೇಳಿದ್ದಾರೆ.

99
ಮುಂದಿನ ವಿಶ್ವಕಪ್ 2029ಕ್ಕೆ ನಡೆಯಲಿದೆ
Image Credit : Getty

ಮುಂದಿನ ವಿಶ್ವಕಪ್ 2029ಕ್ಕೆ ನಡೆಯಲಿದೆ

ಮುಂದಿನ ಏಕದಿನ ವಿಶ್ವಕಪ್ 2029 ರಲ್ಲಿ ನಡೆಯಲಿದೆ. ವಿಶ್ವಕಪ್‌ನ ಸ್ಥಳವನ್ನು ಐಸಿಸಿ ಇನ್ನೂ ನಿರ್ಧರಿಸಿಲ್ಲ. ಮುಂದಿನ ಏಕದಿನ ವಿಶ್ವಕಪ್‌ನಲ್ಲಿ ಆಡಲು ಹರ್ಮನ್‌ಗೆ ವಯಸ್ಸು ಒಂದು ಸವಾಲಾಗಬಹುದು ಎಂದು ಭಾವಿಸಲಾಗಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಹರ್ಮನ್‌ಪ್ರೀತ್ ಕೌರ್
ಕ್ರಿಕೆಟ್
ವಿಶ್ವಕಪ್
ಟೀಮ್ ಇಂಡಿಯಾ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved