MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಸಚಿನ್ ತೆಂಡೂಲ್ಕರ್ ಮಾಡಿದ ಆ ಒಂದು ಫೋನ್ ಕಾಲ್ ಸಂಜು ಬದುಕನ್ನೇ ಬದಲಿಸಿತು! ಅಷ್ಟಕ್ಕೂ ಆಗಿದ್ದೇನು?

ಸಚಿನ್ ತೆಂಡೂಲ್ಕರ್ ಮಾಡಿದ ಆ ಒಂದು ಫೋನ್ ಕಾಲ್ ಸಂಜು ಬದುಕನ್ನೇ ಬದಲಿಸಿತು! ಅಷ್ಟಕ್ಕೂ ಆಗಿದ್ದೇನು?

2026ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಆಟವಾಡಿ 'ಟೂರ್ನಿ ಶ್ರೇಷ್ಠ' ಪ್ರಶಸ್ತಿ ಗೆದ್ದ ಸಂಜು ಸ್ಯಾಮ್ಸನ್, ತಮ್ಮ ಕಷ್ಟದ ದಿನಗಳಲ್ಲಿ ಸಚಿನ್ ತೆಂಡೂಲ್ಕರ್ ನೀಡಿದ ಬೆಂಬಲದ ಬಗ್ಗೆ ಭಾವುಕ ಮಾತುಗಳನ್ನಾಡಿದ್ದಾರೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

2 Min read
Author : Naveen Kodase
Published : Mar 09 2026, 01:31 PM IST
Share this Photo Gallery
  • FB
  • TW
  • Linkdin
  • Whatsapp
16
ಟಿ20 ವಿಶ್ವಕಪ್ ಇತಿಹಾಸದಲ್ಲೇ ದೊಡ್ಡ ದಾಖಲೆ
Image Credit : Getty

ಟಿ20 ವಿಶ್ವಕಪ್ ಇತಿಹಾಸದಲ್ಲೇ ದೊಡ್ಡ ದಾಖಲೆ

2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಭಾರತ ಮೂರನೇ ಬಾರಿಗೆ ಚಾಂಪಿಯನ್ ಆಯಿತು. ಈ ಗೆಲುವಿನಲ್ಲಿ ಕೇರಳದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಪ್ರಮುಖ ಪಾತ್ರ ವಹಿಸಿದರು. ಟೂರ್ನಿಯ ಆರಂಭದಲ್ಲಿ ಬೆಂಚ್ ಕಾದಿದ್ದ ಸಂಜು, ನಂತರ ಅದ್ಭುತ ಪ್ರದರ್ಶನ ನೀಡಿ 'ಸರಣಿ ಶ್ರೇಷ್ಠ' ಪ್ರಶಸ್ತಿ ಪಡೆದರು. ಈ ವೇಳೆ ಅವರು ತಮ್ಮ ವೃತ್ತಿಜೀವನದ ಕರಾಳ ದಿನಗಳನ್ನು ಮತ್ತು ಸಚಿನ್ ತೆಂಡೂಲ್ಕರ್ ಹೇಗೆ ಬೆಂಬಲವಾಗಿ ನಿಂತರು ಎಂಬುದನ್ನು ನೆನೆದು ಭಾವುಕರಾದರು.

26
ಕಿವೀಸ್ ಎದುರು ನೀರಸ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್
Image Credit : Getty

ಕಿವೀಸ್ ಎದುರು ನೀರಸ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್

ಟಿ20 ವಿಶ್ವಕಪ್‌ಗೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ನೀರಸ ಪ್ರದರ್ಶನ ತೋರಿದ್ದರು. ಐದು ಇನ್ನಿಂಗ್ಸ್‌ಗಳಲ್ಲಿ ಕೇವಲ 46 ರನ್ ಗಳಿಸಿದ್ದರಿಂದ ಅವರು ತಂಡದಲ್ಲಿ ಸ್ಥಾನ ಕಳೆದುಕೊಂಡರು. ಅವರ ಜಾಗಕ್ಕೆ ಇಶಾನ್ ಕಿಶನ್ ಅವರನ್ನು ಆರಂಭಿಕರಾಗಿ ತಂಡಕ್ಕೆ ಸೇರಿಸಿಕೊಳ್ಳಲಾಯಿತು. 'ನ್ಯೂಜಿಲೆಂಡ್ ಸರಣಿಯ ನಂತರ ನಾನು ಸಂಪೂರ್ಣವಾಗಿ ಕುಸಿದು ಹೋಗಿದ್ದೆ. ನನ್ನ ಕನಸುಗಳು ಮುರಿದುಬಿದ್ದವು ಎಂದು ಭಾವಿಸಿದ್ದೆ. ಆದರೆ ದೇವರ ಪ್ಲಾನ್ ಬೇರೆಯೇ ಇತ್ತು. ಕಠಿಣ ಸಮಯದಲ್ಲಿ ನನಗೆ ಅವಕಾಶ ಸಿಕ್ಕಿತು, ದೇಶಕ್ಕಾಗಿ ನನ್ನ ಕೈಲಾದಷ್ಟು ಪ್ರಯತ್ನ ಮಾಡಿದೆ' ಎಂದು ಸಂಜು ತಮ್ಮ ಮನದ ಮಾತು ಹಂಚಿಕೊಂಡರು.

Related Articles

Related image1
ಟೀಕಾಕಾರರ ಬಾಯಿ ಮುಚ್ಚಿಸಿದ ಗೌತಮ್‌ ಗಂಭೀರ್; ಆಟಗಾರನಾಗಿ, ಕೋಚ್ ಆಗಿ ವಿಶ್ವಕಪ್ ಗೆದ್ದು ಇತಿಹಾಸ!
Related image2
'ಈ ವಿಶ್ವಕಪ್ ಆ ಇಬ್ಬರಿಗೆ ಸೇರಿದ್ದು': ಟಿ20 ವಿಶ್ವಕಪ್ ಅನ್ನು ಈ ಇಬ್ಬರು ಸಹ ಆಟಗಾರರಿಗೆ ಅರ್ಪಿಸಿದ ಗೌತಮ್ ಗಂಭೀರ್!
36
ಸಚಿನ್ ತೆಂಡೂಲ್ಕರ್ ಮಾರ್ಗದರ್ಶನದಲ್ಲಿ ಸಂಜು ಶೈನಿಂಗ್
Image Credit : Getty

ಸಚಿನ್ ತೆಂಡೂಲ್ಕರ್ ಮಾರ್ಗದರ್ಶನದಲ್ಲಿ ಸಂಜು ಶೈನಿಂಗ್

ಕಷ್ಟದ ಸಮಯದಲ್ಲಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ತಮಗೆ ಹೇಗೆ ಬೆನ್ನೆಲುಬಾಗಿ ನಿಂತಿದ್ದರು ಎಂದು ಸಂಜು ಬಹಿರಂಗಪಡಿಸಿದರು. ಕಳೆದ ಎರಡು ತಿಂಗಳಿಂದ ತಾನು ಸಚಿನ್ ಸರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೆ ಎಂದು ತಿಳಿಸಿದರು. 'ಆಸ್ಟ್ರೇಲಿಯಾದಲ್ಲಿ ತಂಡದಿಂದ ಹೊರಗಿದ್ದಾಗ, ನನ್ನ ಮನಸ್ಥಿತಿ ಹೇಗಿರಬೇಕು ಎಂದು ಸಚಿನ್ ಸರ್ ಬಳಿ ಕೇಳಿ ತಿಳಿದುಕೊಂಡೆ. ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದೆ. ನಿನ್ನೆ ರಾತ್ರಿ (ಫೈನಲ್‌ಗೂ ಮುನ್ನ) ಕೂಡ ಅವರು ನನಗೆ ಫೋನ್ ಮಾಡಿ ಹೇಗಿದ್ದೀಯಾ ಎಂದು ವಿಚಾರಿಸಿದರು. ಅವರಂತಹ ದಿಗ್ಗಜರಿಂದ ಸ್ಪಷ್ಟತೆ ಮತ್ತು ಆಟದ ಬಗ್ಗೆ ತಿಳುವಳಿಕೆ ಸಿಕ್ಕಿದ್ದು ನನ್ನ ಅದೃಷ್ಟ' ಎಂದು ಸಂಜು ಹೇಳಿದರು.

46
ದಾಖಲೆಗಳ ಬೇಟೆಯಲ್ಲಿ ಸಂಜು ಪಯಣ
Image Credit : ANI

ದಾಖಲೆಗಳ ಬೇಟೆಯಲ್ಲಿ ಸಂಜು ಪಯಣ

ಈ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಕೇವಲ 5 ಪಂದ್ಯಗಳಲ್ಲಿ 321 ರನ್ ಗಳಿಸಿದರು. ಇದರಲ್ಲಿ 199.37 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದು ವಿಶೇಷ. ವೆಸ್ಟ್ ಇಂಡೀಸ್ ವಿರುದ್ಧ 97*, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 89 ಮತ್ತು ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 89 ರನ್ ಗಳಿಸಿ, ಸತತ ಮೂರು ಪ್ರಮುಖ ಪಂದ್ಯಗಳಲ್ಲಿ ಭಾರತವನ್ನು ಗೆಲ್ಲಿಸಿದರು. ಫೈನಲ್‌ನಲ್ಲಿ ಸಂಜು ಗಳಿಸಿದ 89 ರನ್‌ಗಳು, ಟಿ20 ವಿಶ್ವಕಪ್ ಫೈನಲ್‌ನಲ್ಲಿ ಬ್ಯಾಟರ್ ಒಬ್ಬರು ಗಳಿಸಿದ ಅತಿ ಹೆಚ್ಚು ವೈಯುಕ್ತಿಕ ಸ್ಕೋರ್ ಎಂಬ ದಾಖಲೆ ಬರೆಯಿತು. ಈ ಹಿಂದೆ ಮರ್ಲಾನ್ ಸ್ಯಾಮ್ಯುಯೆಲ್ಸ್ (85*) ಮತ್ತು ಕೇನ್ ವಿಲಿಯಮ್ಸನ್ (85) ಹೆಸರಿನಲ್ಲಿದ್ದ ದಾಖಲೆಗಳನ್ನು ಅವರು ಮುರಿದರು.

56
ಸಂಜು ಎರಡು ವರ್ಷಗಳ ನಿರೀಕ್ಷೆಗೆ ಸಿಕ್ಕ ಫಲ
Image Credit : Getty

ಸಂಜು ಎರಡು ವರ್ಷಗಳ ನಿರೀಕ್ಷೆಗೆ ಸಿಕ್ಕ ಫಲ

2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲೂ ಸಂಜು ಸದಸ್ಯರಾಗಿದ್ದರು. ಆದರೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಆ ಟೂರ್ನಿಯಲ್ಲಿ ಅವರಿಗೆ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. 'ಆ ಸಮಯದಲ್ಲಿ ನಾನು ಬೆಂಚ್ ಮೇಲೆ ಕುಳಿತಿದ್ದಾಗಲೇ ಈ ದಿನದ ಬಗ್ಗೆ ಕನಸು ಕಂಡಿದ್ದೆ. ಕಷ್ಟಪಟ್ಟು ಕೆಲಸ ಮಾಡಿದೆ. ಆ ಕಾಯುವಿಕೆಯೇ ಇಂದು ನನ್ನನ್ನು ಇಲ್ಲಿಗೆ ತಂದು ನಿಲ್ಲಿಸಿದೆ. ಈ ಗೆಲುವು ನನಗೊಂದು ಕನಸಿನಂತೆ ಭಾಸವಾಗುತ್ತಿದೆ' ಎಂದು ಸಂಜು ಸಂತಸ ವ್ಯಕ್ತಪಡಿಸಿದರು. ಒಂದೇ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದ ಅತಿ ಹೆಚ್ಚು ರನ್‌ಗಳ ದಾಖಲೆಯನ್ನು ಸಂಜು ಈ ಟೂರ್ನಿಯಲ್ಲಿ ಮುರಿದರು.
66
ಸಂಜುಗಾಗಿ ದೇವರೇ ಬರೆದಿದ್ದ ಸ್ಕ್ರಿಪ್ಟ್!
Image Credit : Getty

ಸಂಜುಗಾಗಿ ದೇವರೇ ಬರೆದಿದ್ದ ಸ್ಕ್ರಿಪ್ಟ್!

ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೆ ತುತ್ತಾದ ಕಾರಣ, ನಮೀಬಿಯಾ ವಿರುದ್ಧದ ಪಂದ್ಯದ ಮೂಲಕ ಸಂಜು ತಂಡಕ್ಕೆ ಬಂದರು. ಆ ನಂತರ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು. 'ಒಂದು ಹಂತದಲ್ಲಿ ನನ್ನ ವೃತ್ತಿಜೀವನ ಮುಗಿದೇ ಹೋಯಿತು ಎಂದುಕೊಂಡಿದ್ದೆ. ಆದರೆ ಕ್ವಾರ್ಟರ್ ಫೈನಲ್‌ನಂತಹ (ವೆಸ್ಟ್ ಇಂಡೀಸ್ ವಿರುದ್ಧ) ನಿರ್ಣಾಯಕ ಪಂದ್ಯದಲ್ಲಿ ಅವಕಾಶ ಸಿಕ್ಕಿತು. ಅಲ್ಲಿಂದ ಹಿಂತಿರುಗಿ ನೋಡಲೇ ಇಲ್ಲ, ಇದೆಲ್ಲಾ ದೇವರ ದಯೆ. ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನಮ್ಮ ಹಿರಿಯ ಆಟಗಾರರಿಗೆ ನಾನು ಸದಾ ಕೃತಜ್ಞ' ಎಂದು ಸಂಜು ಹೇಳಿದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಸಿಸಿ ಟಿ20 ವಿಶ್ವಕಪ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಇಶಾನ್ ಕಿಶನ್ ತೋಳಲ್ಲಿದ್ದ ಮಿಸ್ಟರಿ ಗರ್ಲ್ ಯಾರು?
Recommended image2
'ಈ ವಿಶ್ವಕಪ್ ಆ ಇಬ್ಬರಿಗೆ ಸೇರಿದ್ದು': ಟಿ20 ವಿಶ್ವಕಪ್ ಅನ್ನು ಈ ಇಬ್ಬರು ಸಹ ಆಟಗಾರರಿಗೆ ಅರ್ಪಿಸಿದ ಗೌತಮ್ ಗಂಭೀರ್!
Recommended image3
ಫಲ ನೀಡಿದ ಆಯ್ಕೆ ಸಮಿತಿ, ಟೀಮ್ ಮ್ಯಾನೇಜ್‌ಮೆಂಟ್ ಕಠಿಣ ನಿರ್ಧಾರ! ಕೊನೆಗೂ ಬಯಲಾಯ್ತು ಗೆಲುವಿನ ಗುಟ್ಟು!
Related Stories
Recommended image1
ಟೀಕಾಕಾರರ ಬಾಯಿ ಮುಚ್ಚಿಸಿದ ಗೌತಮ್‌ ಗಂಭೀರ್; ಆಟಗಾರನಾಗಿ, ಕೋಚ್ ಆಗಿ ವಿಶ್ವಕಪ್ ಗೆದ್ದು ಇತಿಹಾಸ!
Recommended image2
'ಈ ವಿಶ್ವಕಪ್ ಆ ಇಬ್ಬರಿಗೆ ಸೇರಿದ್ದು': ಟಿ20 ವಿಶ್ವಕಪ್ ಅನ್ನು ಈ ಇಬ್ಬರು ಸಹ ಆಟಗಾರರಿಗೆ ಅರ್ಪಿಸಿದ ಗೌತಮ್ ಗಂಭೀರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved