MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಕಿವೀಸ್ ಕಿವಿಹಿಂಡಿದ ಬೀದರ್ ಹುಡುಗ ವರುಣ್ ಚಕ್ರವರ್ತಿಯ ಬಗ್ಗೆ ನಿಮಗೆಷ್ಟು ಗೊತ್ತು?

ಕಿವೀಸ್ ಕಿವಿಹಿಂಡಿದ ಬೀದರ್ ಹುಡುಗ ವರುಣ್ ಚಕ್ರವರ್ತಿಯ ಬಗ್ಗೆ ನಿಮಗೆಷ್ಟು ಗೊತ್ತು?

ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಭಾರತ ತಂಡದ ಆಟಗಾರ, ತಮಿಳುನಾಡಿನ ವರುಣ್ ಚಕ್ರವರ್ತಿ 5 ವಿಕೆಟ್ ಕಿತ್ತು ಪಂದ್ಯ ಶ್ರೇಷ್ಠರಾಗಿ ಮಿಂಚಿದ್ದಾರೆ. ಈ ವರುಣ್ ಚಕ್ರವರ್ತಿ ಯಾರು ಅಂತ ನೋಡೋಣ.

1 Min read
Naveen Kodase
Published : Mar 03 2025, 06:18 PM IST| Updated : Mar 03 2025, 07:31 PM IST
Share this Photo Gallery
  • FB
  • TW
  • Linkdin
  • Whatsapp
16

ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವರುಣ್ ಚಕ್ರವರ್ತಿ 5 ವಿಕೆಟ್ ಪಡೆದರು. ದುಬೈನಲ್ಲಿ 4 ವರ್ಷಗಳ ಹಿಂದೆ ಅವಮಾನಗೊಂಡ ಅದೇ ಜಾಗದಲ್ಲಿ ಪಂದ್ಯ ಶ್ರೇಷ್ಠರಾಗಿದ್ದಾರೆ.

26
ವರುಣ್ ಚಕ್ರವರ್ತಿ

ವರುಣ್ ಚಕ್ರವರ್ತಿ

ತಮಿಳುನಾಡಿನ 33 ವರ್ಷದ ವರುಣ್ ಚಕ್ರವರ್ತಿ ತಮ್ಮ ಮ್ಯಾಜಿಕ್ ಸ್ಪಿನ್ ಬೌಲಿಂಗ್ ಮೂಲಕ ನ್ಯೂಜಿಲೆಂಡ್ ತಂಡವನ್ನು ಸಂಪೂರ್ಣವಾಗಿ ಕಟ್ಟಿಹಾಕಿದರು. ವರುಣ್ ಚಕ್ರವರ್ತಿ ಹುಟ್ಟಿ ಬೆಳೆದ ಆರಂಭಿಕ ದಿನಗಳು ಕರ್ನಾಟಕದ ಬೀದರ್‌ನಲ್ಲಿ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ.

36
ವರುಣ್ ಚಕ್ರವರ್ತಿ 5 ವಿಕೆಟ್

ವರುಣ್ ಚಕ್ರವರ್ತಿ 5 ವಿಕೆಟ್

ವರುಣ್ ಚಕ್ರವರ್ತಿ ಹುಟ್ಟಿದ್ದು ಆಗಸ್ಟ್ 29, 1991ರಲ್ಲಿ, ಬೀದರ್‌ನಲ್ಲಿ ಹುಟ್ಟಿದ ವರುಣ್ ಚಕ್ರವರ್ತಿ ಬಾಲ್ಯದ ಕೆಲ ವರ್ಷಗಳನ್ನು ಬೀದರ್‌ನಲ್ಲೇ ಕಳೆದಿದ್ದಾರೆ. ಆದರೆ ತಂದೆ ವಿನೋದ್ ಚಕ್ರವರ್ತಿಗೆ ಸ್ಥಳಾಂತರಗೊಂಡ ಕಾರಣ ತಮಿಳುನಾಡಿನಲ್ಲಿ ಶಾಲಾ ಕಾಲೇಜು ಪೂರೈಸಿದ್ದರು.

 

46

ಚೆನ್ನೈನ ಎಸ್ಆರ್‌ಎಂ ವಿಶ್ವಿವಿದ್ಯಾಲಯದಲ್ಲಿ ಆರ್ಕಿಟೆಕ್ಟ್ ಪದವಿ ಪಡೆದಿರುವ ವರುಣ್ ಚಕ್ರವರ್ತಿಗೆ ಕ್ರಿಕೆಟ್ ಎಂದರೆ ಪಂಚ ಪ್ರಾಣವಾಗಿತ್ತು.ವರುಣ್ ಚಕ್ರವರ್ತಿ ಒಂಬತ್ತು ವರ್ಷಗಳ ಹಿಂದೆ, ಒಂದು ಕಟ್ಟಡ ನಿರ್ಮಾಣ ಕಂಪನಿಯಲ್ಲಿ ಬಿಲ್ಡಿಂಗ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು.

 

56

2021ರಲ್ಲಿ ದುಬೈನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದರು. ಆದರೆ 3 ಪಂದ್ಯಗಳಲ್ಲಿಯೂ ಅವರಿಂದ ಸರಿಯಾಗಿ ಆಡಲು ಸಾಧ್ಯವಾಗಲಿಲ್ಲ.

66

ಆದರೆ ಇದೀಗ ಅದೇ ದುಬೈ ಮೈದಾನದಲ್ಲಿ ಕಿವೀಸ್ ಎದುರು ಮಾರಕ ದಾಳಿ ನಡೆಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವಲ್ಲಿ ಯಶಸ್ವಿಯಾದರು.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved