- Home
- Sports
- Cricket
- ಬಾಂಗ್ಲಾದೇಶದ ರಿಕ್ವೆಸ್ಟ್ ರಿಜೆಕ್ಟ್; ಭಾರತದಲ್ಲಿ ಆಡಿ ಇಲ್ಲದಿದ್ದರೇ ಹೊರ ಹೋಗಿ ಐಸಿಸಿ ಖಡಕ್ ವಾರ್ನಿಂಗ್!
ಬಾಂಗ್ಲಾದೇಶದ ರಿಕ್ವೆಸ್ಟ್ ರಿಜೆಕ್ಟ್; ಭಾರತದಲ್ಲಿ ಆಡಿ ಇಲ್ಲದಿದ್ದರೇ ಹೊರ ಹೋಗಿ ಐಸಿಸಿ ಖಡಕ್ ವಾರ್ನಿಂಗ್!
ದುಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನಾಡಲು ನಾವು ಭಾರತಕ್ಕೆ ಬರಲ್ಲ ಎಂದಿದ್ದ ಬಾಂಗ್ಲಾದೇಶ ತಂಡಕ್ಕೆ ಐಸಿಸಿ ಮುಟ್ಟಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಟಿ20 ವಿಶ್ವಕಪ್ ಫೆಬ್ರವರಿ 07ರಿಂದ ಆರಂಭ
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿದ್ದು, ಟೂರ್ನಿಗೆ ಭಾರತ ಹಾಗೂ ಶ್ರೀಲಂಕ ಜಂಟಿ ಆತಿಥ್ಯ ವಹಿಸಿವೆ. ಹೀಗಿರುವಾಗಲೇ ವಿವಾದವೊಂದು ತಲೆದೂರಿದೆ.
ಲಂಕಾಗೆ ಸ್ಥಳಾಂತರಿಸಲು ಮನವಿ
ಮುಸ್ತಾಫಿಜುರ್ ರಹಮಾನ್ರನ್ನು ಐಪಿಎಲ್ನಿಂದ ಹೊರಹಾಕಿದ ಬಿಸಿಸಿಐ ನಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಾಂಗ್ಲಾದೇಶ, ತಾನು ವಿಶ್ವಕಪ್ನಲ್ಲಿ ಆಡಲು ಭಾರತಕ್ಕೆ ಪ್ರಯಾಣಿಸುವುದಿಲ್ಲ. ಬದಲಿಗೆ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸುವಂತೆ ಐಸಿಸಿಗೆ ಒತ್ತಾಯಿಸಿತ್ತು.
ಐಸಿಸಿ ಮಧ್ಯ ಪ್ರವೇಶ
ಎರಡೂ ಕ್ರಿಕೆಟ್ ಮಂಡಳಿಗಳ ನಡುವಿನ ತಿಕ್ಕಾಟ ನಿಲ್ಲಿಸಲು ಐಸಿಸಿ ಮಧ್ಯಪ್ರವೇಶ ಮಾಡಿದ್ದು, ಬಾಂಗ್ಲಾ ಕ್ರಿಕೆಟ್ ಮಂಡಳಿಯ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದೆ ಎಂದು ವರದಿಯಾಗಿತ್ತು.
ಸರ್ಕಾರದ ಬಳಿ ಚರ್ಚಿಸಿ ತೀರ್ಮಾನಿಸಲು ನಿರ್ಧಾರ
ಬಾಂಗ್ಲಾ ಜೊತೆ ಮಾತುಕತೆ ನಡೆಸಿರುವ ಐಸಿಸಿ, ಭಾರತಕ್ಕೆ ಪ್ರಯಾಣಿಸದೆ ಇರಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಳಿಕೊಂಡಿತ್ತು. ಅದಕ್ಕೆ ಬಿಸಿಬಿ ತನ್ನ ಸರ್ಕಾರವನ್ನು ಕೇಳಿ ತಿಳಿಸುವುದಾಗಿ ಹೇಳಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಮರು ಪರಿಶೀಲನೆಗೆ ಚಿಂತನೆ
ಮುಂದಿನ ತಿಂಗಳ ಟಿ20 ವಿಶ್ವಕಪ್ನಲ್ಲಿ ತಾನು ಭಾರತದಲ್ಲಿ ಆಡುವುದಿಲ್ಲ ಎಂದಿದ್ದ ಬಾಂಗ್ಲಾದೇಶ, ಇದೀಗ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ನಿರ್ಧರಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಳಿ ಸಮಯಾವಕಾಶ ಕೇಳಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಬಾಂಗ್ಲಾ ಮನವಿ ರಿಜೆಕ್ಟ್
ಇದೀಗ ಭಾರತದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಸ್ಥಳಾಂತರ ಮಾಡಲು ಬಾಂಗ್ಲಾದೇಶ ಮಾಡಿದ ಮನವಿಯನ್ನು ಐಸಿಸಿ ತಿರಸ್ಕರಿಸಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶಕ್ಕೆ ಐಸಿಸಿ ಖಡಕ್ ವಾರ್ನಿಂಗ್
ಭಾರತದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಆಡಿ ಇಲ್ಲದಿದ್ದರೇ ಟೂರ್ನಿಯಿಂದಲೇ ಹೊರಹೋಗಿ ಎನ್ನುವ ಖಡಕ್ ಎಚ್ಚರಿಕೆಯನ್ನು ಬಾಂಗ್ಲಾದೇಶಕ್ಕೆ ಐಸಿಸಿ ರವಾನಿಸಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶ ವೇಳಾಪಟ್ಟಿ
ಬಾಂಗ್ಲಾದೇಶ ಆಡುವ ಗ್ರೂಪ್ ಹಂತದ ಎಲ್ಲಾ ಪಂದ್ಯಗಳು ಭಾರತದಲ್ಲೇ ನಿಗದಿಯಾಗಿದ್ದು, ಮೊದಲ ನಾಲ್ಕು ಪಂದ್ಯಗಳಿಗೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದ್ದರೇ, ಕೊನೆಯ ಲೀಗ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

