MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಪೆಹಲ್ಗಾಂ ಬಗ್ಗೆ ಉಲ್ಲೇಖ: ಸೂರ್ಯಗೆ ಶಾಕ್ ಕೊಟ್ಟ ಐಸಿಸಿ!

ಪೆಹಲ್ಗಾಂ ಬಗ್ಗೆ ಉಲ್ಲೇಖ: ಸೂರ್ಯಗೆ ಶಾಕ್ ಕೊಟ್ಟ ಐಸಿಸಿ!

ದುಬೈ: ಪಹಲ್ಗಾಂ ಉಗ್ರದಾಳಿಯ ವಿಚಾರದ ಕುರಿತಂತೆ ಬಹಿರಂಗವಾಗಿ ತಮ್ಮ ಅನಿಸಿ ಹಂಚಿಕೊಂಡ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಐಸಿಸಿ ಎಚ್ಚರಿಕೆ ನೀಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

1 Min read
Naveen Kodase
Published : Sep 26 2025, 11:14 AM IST
Share this Photo Gallery
  • FB
  • TW
  • Linkdin
  • Whatsapp
15
ರಾಜಕೀಯ ಪ್ರೇರಿತ ಹೇಳಿಕೆ
Image Credit : X

ರಾಜಕೀಯ ಪ್ರೇರಿತ ಹೇಳಿಕೆ

ಕ್ರಿಕೆಟ್ ಮೈದಾನದಲ್ಲಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡದಂತೆ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್‌ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ತಾಕೀತು ಮಾಡಿದೆ.

25
ಪೆಹಲ್ಗಾಂ ಉಲ್ಲೇಖ
Image Credit : Getty

ಪೆಹಲ್ಗಾಂ ಉಲ್ಲೇಖ

ಪಹಲ್ಗಾಂ ಬಗ್ಗೆ ಉಲ್ಲೇಖಿಸಿದ್ದಕ್ಕೆ ಸೂರ್ಯ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ದೂರು ಸಲ್ಲಿ ಸಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಸೂರ್ಯರನ್ನು ಕರೆಸಿ ವಿಚಾರಣೆ ನಡೆಸಿದ ಐಸಿಸಿ ಮ್ಯಾಚ್ ರೆಫ್ರಿ ರಿಚಿ ರಿಚರ್ಡ್‌ಸನ್, ಕ್ರಿಕೆಟ್‌ನೊಂದಿಗೆ ರಾಜಕೀಯ ಬೆರೆಸದಂತೆ ಸೂಚನೆ ನೀಡಿದ್ದಾರೆ.

Related Articles

Related image1
ಏಷ್ಯಾಕಪ್ ಫೈನಲ್: ಬದ್ಧವೈರಿಗಳ ಐತಿಹಾಸಿಕ ಮುಖಾಮುಖಿಗೆ ವೇದಿಕೆ ಸಜ್ಜು! ಭಾನುವಾರ ಇಂಡೋ-ಪಾಕ್ ಫೈಟ್
Related image2
ಏಷ್ಯಾಕಪ್ 2025: ನಿನ್ನೆ ನಡೆದ ಭಾರತ-ಪಾಕ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
35
ಭಾರತೀಯ ಸೇನೆಗೆ ಗೆಲುವು ಅರ್ಪಿಸಿದ ಸೂರ್ಯ
Image Credit : Xtoxifyy18

ಭಾರತೀಯ ಸೇನೆಗೆ ಗೆಲುವು ಅರ್ಪಿಸಿದ ಸೂರ್ಯ

ಪಾಕಿಸ್ತಾನ ವಿರುದ್ದ ಏಷ್ಯಾಕಪ್ ಗುಂಪು ಹಂತದ ಪಂದ್ಯವನ್ನು ಗೆದ್ದ ಬಳಿಕ, ಆ ಗೆಲುವನ್ನು ಪಹಲ್ಗಾಂ ಉಗ್ರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕ ಭಾರತೀಯರು, ಆಪರೇಷನ್ ಸಿಂದೂರ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆಗೆ ಅರ್ಪಿಸುವುದಾಗಿ ಸೂರ್ಯಕುಮಾರ್ ಹೇಳಿದ್ದರು.

45
ಸೂರ್ಯನಿಗೆ ಎಚ್ಚರಿಕೆ ನೀಡಿದ ಐಸಿಸಿ
Image Credit : ANI

ಸೂರ್ಯನಿಗೆ ಎಚ್ಚರಿಕೆ ನೀಡಿದ ಐಸಿಸಿ

ಈ ಹೇಳಿಕೆಗೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿ, ದೂರು ಸಲ್ಲಿಸಿತ್ತು. ಈ ಸಂಬಂಧ ಐಸಿಸಿ ವಿಚಾರಣೆ ನಡೆಸಿ ಕೆಲವು ಎಚ್ಚರಿಕೆಗಳನ್ನು ನೀಡಿದೆ.

55
ಇಂದು ಫರ್ಹಾನ್, ರೌಫ್ ವಿಚಾರಣೆ
Image Credit : Getty

ಇಂದು ಫರ್ಹಾನ್, ರೌಫ್ ವಿಚಾರಣೆ

ಅರ್ಧಶತಕ ಗಳಿಸಿದ ಬಳಿಕ ಗನ್‌ಶಾಟ್ ರೀತಿ ಸಂಭ್ರ ಮಿಸಿದ್ದ ಪಾಕಿಸ್ತಾನದ ಬ್ಯಾಟರ್ ಸಾಹಿಬ್ ಝಾದಾ ಫರ್ಹಾನ್ ಹಾಗೂ ಬೌಂಡರಿ ಗೆರೆ ಬಳಿ ಭಾರತೀಯ ಅಭಿಮಾನಿಗಳತ್ತ ಕೈ ತೋರಿಸಿ ವಿಮಾನವನ್ನು ಹೊಡೆದುರುಳಿಸಿದಂತೆ ಕೈ ಸನ್ನೆ ಮಾಡಿದ್ದ ವೇಗಿ ಹ್ಯಾರಿಸ್ ರೌಫ್ ವಿರುದ್ದ ಬಿಸಿಸಿಐ, ಐಸಿಸಿಗೆ ದೂರಿದೆ. ಈ ವಿಚಾರವಾಗಿ ಶುಕ್ರವಾರ ಐಸಿಸಿ ಪಾಕ್‌ನ ಈ ಇಬ್ಬರು ಆಟಗಾರರನ್ನು ವಿಚಾರಣೆಗೆ ಕರೆದಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಏಷ್ಯಾ ಕಪ್
ಟೀಮ್ ಇಂಡಿಯಾ
ಬಿಸಿಸಿಐ
ಪಹಲ್ಗಾಮ್ ಭಯೋತ್ಪಾದಕ ದಾಳಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved