MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ವಿಶ್ವಕಪ್‌ಗೂ ಬೆಂಬಿಡದ ವಿವಾದಗಳು! ಟೂರ್ನಿ ಆರಂಭಕ್ಕೂ ಮುನ್ನವೇ ಗಮನ ಸೆಳೆದ ಕಾಂಟ್ರೊವರ್ಸಿಗಳಿವು

ವಿಶ್ವಕಪ್‌ಗೂ ಬೆಂಬಿಡದ ವಿವಾದಗಳು! ಟೂರ್ನಿ ಆರಂಭಕ್ಕೂ ಮುನ್ನವೇ ಗಮನ ಸೆಳೆದ ಕಾಂಟ್ರೊವರ್ಸಿಗಳಿವು

ಬೆಂಗಳೂರು: 2023ರ ವಿಶ್ವಕಪ್‌ ಆರಂಭಕ್ಕೂ ಮೊದಲೇ ಹಲವು ವಿವಾದಗಳಿಗೆ ತುತ್ತಾಗಿದೆ. ಟೂರ್ನಿಯ ವೇಳಾಪಟ್ಟಿ ವಿಳಂಬದಿಂದ ಹಿಡಿದು, ಟಿಕೆಟ್‌ ಮಾರಾಟದ ವರೆಗೂ ಹಲವು ಅನಗತ್ಯ ವಿವಾದಗಳನ್ನು ಐಸಿಸಿ ಹಾಗೂ ಬಿಸಿಸಿಐ ಮೈಮೇಲೆ ಎಳೆದುಕೊಂಡಿವೆ. ವಿವಾದಗಳ ವಿವರ ಇಲ್ಲಿದೆ. 

2 Min read
Author : Naveen Kodase
Published : Oct 03 2023, 01:54 PM IST
Share this Photo Gallery
  • FB
  • TW
  • Linkdin
  • Whatsapp
18

ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. 
 

28

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. 

38

ಇನ್ನು ಅತಿಥೇಯ ಭಾರತ ಕ್ರಿಕೆಟ್ ತಂಡವು ಅಕ್ಟೋಬರ್ 08ರಂದು 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಚೆನ್ನೈನಲ್ಲಿ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
 

48
1. ವೇಳಾಪಟ್ಟಿ ಪ್ರಕಟಣೆ ವಿಳಂಬ!

1. ವೇಳಾಪಟ್ಟಿ ಪ್ರಕಟಣೆ ವಿಳಂಬ!

ಸಾಮಾನ್ಯವಾಗಿ ವಿಶ್ವಕಪ್‌ ಆರಂಭಕ್ಕೆ ಒಂದು ವರ್ಷ ಮೊದಲು ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ. ಆದರೆ ಈ ಬಾರಿ ವಿಶ್ವಕಪ್‌ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೂ ವೇಳಾಪಟ್ಟಿ ಪ್ರಕಟಗೊಂಡಿರಲಿಲ್ಲ. ಇದಕ್ಕೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗಳ ನಡುವಿನ ತಿಕ್ಕಾಟ ಪ್ರಮುಖ ಕಾರಣ.
 

58

ಏಷ್ಯಾಕಪ್‌ ಆಡಲು ಪಾಕಿಸ್ತಾನಕ್ಕೆ ಬರದಿದ್ದರೆ, ವಿಶ್ವಕಪ್‌ ಆಡಲು ಭಾರತಕ್ಕೆ ಬರುವುದಿಲ್ಲ ಎಂದು ಪಾಕ್‌ ಪಟ್ಟು ಹಿಡಿದಿತ್ತು. ಕೊನೆಗೂ ಪಾಕಿಸ್ತಾನದ ಬೇಡಿಕೆಗೆ ಜಗ್ಗದ ಬಿಸಿಸಿಐ, ಜೂನ್‌ನಲ್ಲಿ ವೇಳಾಪಟ್ಟಿ ಪ್ರಕಟಿಸಿತು.
 

68
2. ಪಂದ್ಯ ಸಿಗದವರ ಸಿಟ್ಟು!

2. ಪಂದ್ಯ ಸಿಗದವರ ಸಿಟ್ಟು!

ವಿಶ್ವಕಪ್‌ ಪಂದ್ಯಗಳ ಆತಿಥ್ಯ ಸಿಗದ್ದಕ್ಕೆ ಹಲವು ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಬಿಸಿಸಿಐ ಮೇಲೆ ಸಿಟ್ಟಾದವು. ಮೊಹಾಲಿ, ರಾಜ್‌ಕೋಟ್‌, ರಾಂಚಿ, ಇಂದೋರ್‌ ಸೇರಿ ಕೆಲ ಪ್ರಮುಖ ನಗರಗಳಿಗೆ ಪಂದ್ಯಗಳು ಕೈತಪ್ಪುತ್ತಿದ್ದಂತೆ ಆಯಾ ರಾಜ್ಯ ಸಂಸ್ಥೆಗಳ ಅಧಿಕಾರಿಗಳು ಬಹಿರಂಗವಾಗಿ ಬಿಸಿಸಿಐ ಮೇಲೆ ಆಕ್ರೋಶ ವ್ಯಕ್ತಪಡಿಸಲಾರಂಭಿಸಿದರು. ಆಕ್ರೋಶದ ಜ್ವಾಲೆಯನ್ನು ನಂದಿಸಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹಲವು ಅಸ್ತ್ರಗಳನ್ನು ಪ್ರಯೋಗಿಸಬೇಕಾಯಿತು.
 

78
3. ವೇಳಾಪಟ್ಟಿ ಪದೇ ಪದೇ ಬದಲು!

3. ವೇಳಾಪಟ್ಟಿ ಪದೇ ಪದೇ ಬದಲು!

ಒಮ್ಮೆ ಪ್ರಕಟಗೊಂಡ ವೇಳಾಪಟ್ಟಿ ಬದಲಾಗುವುದು ಅಪರೂಪ. ಆದರೆ ಬಿಸಿಸಿಐ ಹಲವು ಬಾರಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ್ದು, ತಂಡಗಳಿಗೆ ಮಾತ್ರವಲ್ಲ ಪಂದ್ಯ ವೀಕ್ಷಿಸಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಅಭಿಮಾನಿಗಳಿಗೂ ಸಮಸ್ಯೆ ಉಂಟು ಮಾಡಿತು. ನ.15ರಂದು ನಿಗದಿಯಾಗಿದ್ದ ಭಾರತ-ಪಾಕಿಸ್ತಾನ ಪಂದ್ಯ ನ.14ಕ್ಕೆ ಸೇರಿ 5 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಬದಲಿಸಿತು.
 

88
4. ಟಿಕೆಟ್‌ ಮಾರಾಟ ಗೊಂದಲ

4. ಟಿಕೆಟ್‌ ಮಾರಾಟ ಗೊಂದಲ

ವಿಶ್ವಕಪ್‌ ಪಂದ್ಯಗಳ ಟಿಕೆಟ್‌ ಮಾರಾಟ ಗೊಂದಲದ ಗೂಡಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯಿತು. ಅಭಿಮಾನಿಗಳು ಹಿಗ್ಗಾಮುಗ್ಗಾ ಬೈದ ಪರಿಣಾಮ, ಬಿಸಿಸಿಐ ಮತ್ತಷ್ಟು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟಕ್ಕಿಡುವುದಾಗಿ ತಿಳಿಸಿತು. ಕೆಲ ಮಾಜಿ ಆಟಗಾರರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಸಿಸಿಐ ಅನ್ನು ಮುಜುಗರಕ್ಕೆ ಸಿಲುಕಿಸಿತು.
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಬಿಸಿಸಿಐ
ಕ್ರಿಕೆಟ್
ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ)
ಟೀಮ್ ಇಂಡಿಯಾ

Latest Videos
Recommended Stories
Recommended image1
ಬೆಂಗಳೂರು ಫ್ಯಾನ್ಸ್‌ಗೆ ಬಿಗ್ ಶಾಕ್: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ಆರ್‌ಸಿಬಿಯೇ ಹಿಂದೇಟು?
Recommended image2
ಸ್ವಹಿತಾಸಕ್ತಿ ಸಂಘರ್ಷ ಸುಳಿಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್!
Recommended image3
ಇದೇ ನನ್ನ ಮೊದಲ ಬ್ಯಾಟ್‌, ತೆಂಗಿನ ಹೆಡೆಯನ್ನು ವೇದಿಕೆಗೆ ತಂದು ತೋರಿಸಿದ ಟೀಮ್‌ ಇಂಡಿಯಾ ಬ್ಯಾಟರ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved