Ind vs Ban: ಬಾಂಗ್ಲಾದೇಶ ಎದುರಿನ ಮೂರು ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ..?
ಢಾಕಾ(ಡಿ.09): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈಗಾಗಲೇ ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ, ಮೂರನೇ ಪಂದ್ಯದಲ್ಲಿ ಪ್ರಮುಖ 3 ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ

1. ಶಿಖರ್ ಧವನ್: ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್, ಮೊದಲೆರಡು ಏಕದಿನ ಪಂದ್ಯಗಳಲ್ಲಿ ರನ್ ಬರ ಅನುಭವಿಸುತ್ತಿದ್ದು, ಇದೀಗ ಮೂರನೇ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಆಡುವ ಮೂಲಕ ಫಾರ್ಮ್ಗೆ ಮರಳಲು ಎದುರು ನೋಡುತ್ತಿದ್ದಾರೆ.
2. ಇಶಾನ್ ಕಿಶನ್: ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ಮೊದಲೆರಡು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದರು. ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾದ ಹಿನ್ನೆಲೆಯಲ್ಲಿ ಇಶಾನ್ ಕಿಶನ್ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ದೊರೆಯುವ ಸಾಧ್ಯತೆಯಿದೆ.
3. ವಿರಾಟ್ ಕೊಹ್ಲಿ: ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡಾ ಮೊದಲೆರಡು ಪಂದ್ಯಗಳಲ್ಲಿ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇದೀಗ ಟೆಸ್ಟ್ ಸರಣಿಗೂ ಮುನ್ನ ಕಡೆಯ ಏಕದಿನ ಪಂದ್ಯದಲ್ಲಿ ಕೊಹ್ಲಿ ದೊಡ್ಡ ಇನಿಂಗ್ಸ್ ಕಟ್ಟಲು ಎದುರು ನೋಡುತ್ತಿದ್ದಾರೆ.
4. ಶ್ರೇಯಸ್ ಅಯ್ಯರ್: ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿರುವ ಶ್ರೇಯಸ್ ಅಯ್ಯರ್, ಕೊನೆಯ ಏಕದಿನ ಪಂದ್ಯದಲ್ಲೂ ಅದೇ ಲಯ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ.
5. ಕೆ. ಎಲ್ ರಾಹುಲ್: ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್, ಇದೀಗ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುವುದರ ಜತೆಗೆ ಬ್ಯಾಟಿಂಗ್ನಲ್ಲಿಯೂ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
6. ರಾಹುಲ್ ತ್ರಿಪಾಠಿ: ಐಪಿಎಲ್ ಹಾಗೂ ದೇಶಿ ಕ್ರಿಕೆಟ್ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದ ರಾಹುಲ್ ತ್ರಿಪಾಠಿ, ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ದೀಪಕ್ ಚಹರ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
7. ಅಕ್ಷರ್ ಪಟೇಲ್: ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್, ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಬ್ಯಾಟಿಂಗ್ನಲ್ಲಿ ತಂಡಕ್ಕೆ ಆಸರೆಯಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಅಕ್ಷರ್, ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಬೇಕಿದೆ.
8. ವಾಷಿಂಗ್ಟನ್ ಸುಂದರ್: ತಮಿಳುನಾಡು ಮೂಲದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್, ಮೊದಲ ಏಕದಿನ ಪಂದ್ಯದಲ್ಲಿ ಪರಿಣಾಮಕಾರಿ ಪ್ರದರ್ಶನ ತೋರಿದ್ದರು. ಸುಂದರ್ ಕೊನೆಯ ಪಂದ್ಯದಲ್ಲಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
9. ಶಾರ್ದೂಲ್ ಠಾಕೂರ್: ಟೀಂ ಇಂಡಿಯಾ ಅನುಭವಿ ವೇಗಿ ಶಾರ್ದೂಲ್ ಠಾಕೂರ್ ಕಳೆದ ಪಂದ್ಯದಲ್ಲಿ ಶಿಸ್ತುಬದ್ದ ದಾಳಿ ನಡೆಸಿದ್ದರು. ಆದರೆ ವಿಕೆಟ್ ಕಬಳಿಸಲು ಯಶಸ್ವಿಯಾಗಿರಲಿಲ್ಲ. ಶಾರ್ದೂಲ್ ವಿಕೆಟ್ ಕಬಳಿಸುವತ್ತ ಗಮನ ಹರಿಸಬೇಕಿದೆ.
10. ಉಮ್ರಾನ್ ಮಲಿಕ್: ಟೀಂ ಇಂಡಿಯಾ ಯುವ ವೇಗಿ ಉಮ್ರಾನ್ ಮಲಿಕ್, ಎರಡನೇ ಏಕದಿನ ಪಂದ್ಯದಲ್ಲಿ ಮಾರಕ ದಾಳಿ ನಡೆಸಿದ್ದರು. ಆದರೆ ಕೊನೆಯಲ್ಲಿ ದುಬಾರಿಯಾಗಿದ್ದರು. ಡೆತ್ ಓವರ್ಗಳಲ್ಲಿ ಉಮ್ರಾನ್ ಮಲಿಕ್ ಲೈನ್ & ಲೆಂಗ್ತ್ ಕಡೆ ಗಮನ ಕೊಡಬೇಕಿದೆ.
11. ಮೊಹಮ್ಮದ್ ಸಿರಾಜ್: ಅನುಭವಿ ವೇಗಿಗಳ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಅತ್ಯಂತ ಶಿಸ್ತುಬದ್ದ ದಾಳಿಯ ಮೂಲಕ ಗಮನ ಸೆಳೆಯುತ್ತಿದ್ದಾರೆ. ಸಿರಾಜ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.