ಇಂಗ್ಲೆಂಡ್ ಎದುರಿನ ನಿರ್ಣಾಯಕ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ?
ಪುಣೆ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪುಣೆಯ ಎಂಸಿಎ ಮೈದಾನದಲ್ಲಿ ಇಂದು(ಮಾ.28) 1.30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು 66 ರನ್ ಅಂತರದಲ್ಲಿ ಜಯಿಸಿ ಸರಣಿಯಲ್ಲಿ ಶುಭಾರಂಭ ಮಾಡಿದ್ದ ಭಾರತ ತಂಡಕ್ಕೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಿರುಗೇಟು ನೀಡಿತ್ತು. ಇದೀಗ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೊದಲೆರಡು ಪಂದ್ಯಗಳಲ್ಲಿ ದುಬಾರಿಯಾಗಿದ್ದ ಕುಲ್ದೀಪ್ ಯಾದವ್ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 3ನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

<p>1. ರೋಹಿತ್ ಶರ್ಮಾ: ಟೀಂ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟ್ಸ್ಮನ್</p>
1. ರೋಹಿತ್ ಶರ್ಮಾ: ಟೀಂ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟ್ಸ್ಮನ್
<p>2. ಶಿಖರ್ ಧವನ್: ಅನುಭವಿ ಎಡಗೈ ಬ್ಯಾಟ್ಸ್ಮನ್</p>
2. ಶಿಖರ್ ಧವನ್: ಅನುಭವಿ ಎಡಗೈ ಬ್ಯಾಟ್ಸ್ಮನ್
<p>3. ವಿರಾಟ್ ಕೊಹ್ಲಿ: ನಾಯಕ, ಅತ್ಯಂತ ನಂಬಿಕಸ್ಥ ಬ್ಯಾಟ್ಸ್ಮನ್</p>
3. ವಿರಾಟ್ ಕೊಹ್ಲಿ: ನಾಯಕ, ಅತ್ಯಂತ ನಂಬಿಕಸ್ಥ ಬ್ಯಾಟ್ಸ್ಮನ್
<p>4. ಕೆ.ಎಲ್. ರಾಹುಲ್: ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಫಾರ್ಮ್ಗೆ ಮರಳಿರುವ ಬ್ಯಾಟ್ಸ್ಮನ್</p>
4. ಕೆ.ಎಲ್. ರಾಹುಲ್: ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಫಾರ್ಮ್ಗೆ ಮರಳಿರುವ ಬ್ಯಾಟ್ಸ್ಮನ್
<p>5. ರಿಷಭ್ ಪಂತ್: ವಿಕೆಟ್ ಕೀಪರ್ ಬ್ಯಾಟ್ಸ್ಮನ್</p>
5. ರಿಷಭ್ ಪಂತ್: ವಿಕೆಟ್ ಕೀಪರ್ ಬ್ಯಾಟ್ಸ್ಮನ್
<p>6. ಹಾರ್ದಿಕ್ ಪಾಂಡ್ಯ: ಸ್ಟಾರ್ ಆಲ್ರೌಂಡರ್</p>
6. ಹಾರ್ದಿಕ್ ಪಾಂಡ್ಯ: ಸ್ಟಾರ್ ಆಲ್ರೌಂಡರ್
<p>7. ಕೃನಾಲ್ ಪಾಂಡ್ಯ: ಮತ್ತೋರ್ವ ಆಲ್ರೌಂಡರ್</p>
7. ಕೃನಾಲ್ ಪಾಂಡ್ಯ: ಮತ್ತೋರ್ವ ಆಲ್ರೌಂಡರ್
<p>8. ಭುವನೇಶ್ವರ್ ಕುಮಾರ್: ಅನುಭವಿ ವೇಗದ ಬೌಲರ್, ಸ್ವಿಂಗ್ ಸ್ಪೆಷಲಿಸ್ಟ್</p>
8. ಭುವನೇಶ್ವರ್ ಕುಮಾರ್: ಅನುಭವಿ ವೇಗದ ಬೌಲರ್, ಸ್ವಿಂಗ್ ಸ್ಪೆಷಲಿಸ್ಟ್
<p>9. ಟಿ. ನಟರಾಜನ್: ಯಾರ್ಕರ್ ಕಿಂಗ್, ಡೆತ್ ಓವರ್ ಸ್ಪೆಷಲಿಸ್ಟ್, ಶಾರ್ದೂಲ್ ಠಾಕೂರ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆ</p>
9. ಟಿ. ನಟರಾಜನ್: ಯಾರ್ಕರ್ ಕಿಂಗ್, ಡೆತ್ ಓವರ್ ಸ್ಪೆಷಲಿಸ್ಟ್, ಶಾರ್ದೂಲ್ ಠಾಕೂರ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆ
<p>10. ಯುಜುವೇಂದ್ರ ಚಹಲ್: ಅನುಭವಿ ಲೆಗ್ಸ್ಪಿನ್ನರ್, ಕುಲ್ದೀಪ್ ಯಾದವ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆ</p>
10. ಯುಜುವೇಂದ್ರ ಚಹಲ್: ಅನುಭವಿ ಲೆಗ್ಸ್ಪಿನ್ನರ್, ಕುಲ್ದೀಪ್ ಯಾದವ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆ
<p>11. ಪ್ರಸಿದ್ಧ್ ಕೃಷ್ಣ: ಯುವ ವೇಗದ ಬೌಲರ್, ಮೊದಲೆರಡು ಪಂದ್ಯಗಳಲ್ಲಿ ಮಿಂಚಿನ ದಾಳಿ ನಡೆಸಿರುವ ಕರ್ನಾಟಕದ ಪ್ರತಿಭೆ</p>
11. ಪ್ರಸಿದ್ಧ್ ಕೃಷ್ಣ: ಯುವ ವೇಗದ ಬೌಲರ್, ಮೊದಲೆರಡು ಪಂದ್ಯಗಳಲ್ಲಿ ಮಿಂಚಿನ ದಾಳಿ ನಡೆಸಿರುವ ಕರ್ನಾಟಕದ ಪ್ರತಿಭೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.